ಬೊಮ್ಮಾಯಿ ಅವರು ಮಂಡಿಸಿದ 2023 24ರ ಸಾಲಿನ ಬಜೆಟ್ ಕಪ್ಪು ಬಿಳುಪು ಚಿತ್ರಕ್ಕೆ ಬಣ್ಣ ಬಳಿದು ಚಂದಗಾಣಿಸುವ ವಿಫಲ ಪ್ರಯತ್ನ. ಇದರಲ್ಲ ಜನರಿಗೆ ಮೋಸವಲ್ಲದೆ ಬೇರೆನಿಲ್ಲ:
ಅಬ್ದುಲ್ ಮಜೀದ್ ಮೈಸೂರು, ರಾಜ್ಯಾಧ್ಯಕ್ಷರು, ಎಸ್ಡಿಪಿಐ
ಬೆಂಗಳೂರು, 17 ಫೆಬ್ರವರಿ 2023: ಬಸವರಾಜ ಬೊಮ್ಮಾಯಿಯವರ ನೇತೃತ್ವದ ಬಿಜೆಪಿ ಸರ್ಕಾರ ಮಂಡಿಸಿದ 2023 – 24 ಸಾಲಿನ ಬಜೆಟ್ ಕಪ್ಪು ಬಿಳುಪು ಚಿತ್ರಕ್ಕೆ ಬಲವಂತಕ್ಕೆ ಬಣ್ಣ ಬಂದು ಚಂದವಾಗಿ ಕಾಣುವಂತೆ ಮಾಡುವ ವಿಫಲ ಪ್ರಯತ್ನವಾಗಿದೆ. ಇದರಲ್ಲಿ ಸಾಮಾನ್ಯ ಜನರಿಗೆ ಮೋಸವಲ್ಲದೆ ಮತ್ತೇನು ಇಲ್ಲ ಎಂದು ಸೋಶಿಯಲ್ ಡೆಮೊಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್ಡಿಪಿಐ) ಪಕ್ಷದ ರಾಜ್ಯಾಧ್ಯಕ್ಷರಾದ ಅಬ್ದುಲ್ ಮಜೀದ್ ಮೈಸೂರು ಅವರು ತಮ್ಮ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕರ್ನಾಟಕದಲ್ಲಿ ಇನ್ನೆರಡು ತಿಂಗಳಲ್ಲಿ ಚುನಾವಣೆ ಬರಲಿರುವ ಕಾರಣ ಆ ನೆಪದಲ್ಲಿಯಾದರೂ ಜನತೆಗೆ ಒಂದಷ್ಟು ಉಪಯುಕ್ತ ಯೋಜನೆಗಳು, ಬಡವರ ಪರ, ರೈತ ಪರ ನೀತಿ, ಯೋಜನೆಗಳು ಘೋಷಣೆಯಾಗಬಹುದು ಎಂದು ನಿರೀಕ್ಷಿಸುತ್ತಿದ್ದ ಜನರಿಗೆ ಈ ಬಜೆಟ್ ಸಂಪೂರ್ಣ ನಿರಾಶೆ ಮೂಡಿಸಿದೆ. ಪ್ರಮುಖ ಕ್ಷೇತ್ರಗಳಿಗೆ ನೀಡುವ ಅನುದಾನದಲ್ಲಿ ಕಳೆದ ಬಾರಿಗೆ ಹೋಲಿಸಿದರೆ ಈ ಬಾರಿ ಕಡಿಮೆ ಪ್ರಮಾಣದ ಅನುದಾನ ನೀಡಿರುವುದನ್ನು ಗಮನಿಸಿದರೆ ಕರ್ನಾಟಕ ರಾಜ್ಯದ ಬೊಕ್ಕನ ಆರೋಗ್ಯಕರವಾಗಿಲ್ಲ ಎಂಬುದು ಮೇಲ್ನೋಟಕ್ಕೆ ಸ್ಪಷ್ಟವಾಗಿ ಗೊತ್ತಾಗುತ್ತದೆ. ಅಂಕಿಗಳನ್ನು ದೊಡ್ಡದಾಗಿ ತೋರಿಸುವ ಮೂಲಕ ಅದರ ಮೂಲ ಮೌಲ್ಯವನ್ನು ಜಾಗರೂಕತೆಯಿಂದ ಬಚ್ಚಿಡುವಂತಹ ಪ್ರಯತ್ನ ಮಾಡಲಾಗಿದೆ. ಇದು ಸಂಪೂರ್ಣ ಕಣ್ಕಟ್ಟಿನ ಬಜೆಟ್ಟಾಗಿದ್ದು ಜನರನ್ನು ದಿಕ್ಕು ತಪ್ಪಿಸುವ ಬಿಜೆಪಿಯವರ ತಂತ್ರವಾಗಿದೆ ಎಂದು ಮಜೀದ್ ಅವರು ತಮ್ಮ ಪ್ರಕಟಣೆಯಲ್ಲಿ ಆರೋಪಿಸಿದ್ದಾರೆ.
ಏರು ಗತಿಯಲ್ಲಿರುವ ನಿರುದ್ಯೋಗದ ಬಗ್ಗೆ ಯಾವುದೇ ರೀತಿಯಾದ ಪ್ರಸ್ತಾಪ ಅಥವಾ ಯೋಜನೆಗಳನ್ನು ಬಜೆಟ್ ನಲ್ಲಿ ಸೇರಿಸಲಾಗಿಲ್ಲ. ಸರ್ಕಾರಿ ಇಲಾಖೆಗಳಲ್ಲಿ ಖಾಲಿ ಇರುವ ಸುಮಾರು 2.5 ಲಕ್ಷ ಉದ್ಯೋಗಗಳ ನೇಮಕಾತಿಯ ಬಗ್ಗೆಯೂ ಕೂಡ ಯಾವುದೇ ಪ್ರಸ್ತಾಪ ಇಲ್ಲ. ಯುವಕರನ್ನು ಕೇವಲ ಕೋಮುವಾದದ ನಂಜಿನ ಮೂಲಕವೇ ಸೆಳೆಯುವುದು ಇವರ ಉದ್ದೇಶ ಎಂಬುದು ಇದರಿಂದ ಸ್ಪಷ್ಟವಾಗುತ್ತದೆ.
ಅದಕ್ಕಿಂತಲೂ ಅಘಾತಕಾರಿ ಅಂಶವೆಂದರೆ ಕಳೆದ ಬಜೆಟ್ ನಲ್ಲಿ ಘೋಷಣೆ ಮಾಡಿದ 339 ಯೋಜನೆಗಳ ಪೈಕಿ 132 ಯೋಜನೆಗಳ ಅನುಷ್ಠಾನವೇ ಆಗಿಲ್ಲ. ಪೂರ್ಣ ವರ್ಷ ಅಧಿಕಾರ ನಡೆಸುವ ಅವಕಾಶ ಇದ್ದಾಗಿಯೂ ಇಂತಹ ಪರಿಸ್ಥಿತಿ ಇದ್ದರೆ ಇನ್ನು ಈ ಬಜೆಟ್ ಕೇವಲ ಎರಡು ತಿಂಗಳ ಅಯನ್ನು ಹೊಂದಿದ. ಈ ಅಲ್ಪ ಅವಧಿಯಲ್ಲಿ ಈ ಭ್ರಷ್ಟ ಬಿಜೆಪಿ ಸರ್ಕಾರ ಕೆಲವು ಯೋಜನೆಗಳ ಟೆಂಡರ್ ಕರೆದು ಅದರಲ್ಲಿ ಕಮಿಷನ್ ಹೊಡೆಯುವುದನ್ನು ಬಿಟ್ಟರೆ ಬೇರೇನನ್ನು ಕೂಡ ಮಾಡುವುದಿಲ್ಲ ಎನ್ನುವುದು ಸ್ಪಷ್ಟ ಎಂದು ಅವರು ಆರೋಪಿಸಿದರು. ಒಟ್ಟಾರೆಯಾಗಿ ಇದೊಂದು ಬೋಗಸ್ ಮತ್ತು ಜನರನ್ನು ಯಾಮಲಿಸಿ ಮತ ಪಡೆಯುವ ವಿಫಲ ಪ್ರಯತ್ನ ಎಂದು ಮಜೀದವರು ತಮ್ಮ ಪ್ರಕಟಣೆಯಲ್ಲಿ ಹೇಳಿದ್ದಾರೆ.
~ಅಬ್ದುಲ್ ಮಜೀದ್
ರಾಜ್ಯಾಧ್ಯಕ್ಷರು, ಎಸ್ಡಿಪಿಐ ಕರ್ನಾಟಕ
ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು, ಹಣದ ಬಲ ಮತ್ತು ರಾಜ್ಯ ಯಂತ್ರಾಂಗದ ಬಹಿರಂಗ ದುರುಪಯೋಗದ ಮೂಲಕ ಪಡೆದ…
ಹುತಾತ್ಮ ದಿನ 04 ಮೇ "ನೂರು ವರ್ಷ ನರಿಯಾಗಿ ಬದುಕುವುದಕ್ಕಿಂತ ಒಂದು ದಿನ ಹುಲಿಯಾಗಿ ಬದುಕುವುದು ಉತ್ತಮ." ~ಅಬ್ದುಲ್ ಮಜೀದ್,ರಾಜ್ಯಾಧ್ಯಕ್ಷರು…
ಕೇಂದ್ರ ಸರ್ಕಾರದ ನಿರಂತರ ಬೆಲೆ ಏರಿಕೆ ನೀತಿಯಿಂದ ಸಾಮಾನ್ಯ ಜನರು, ವಿಶೇಷವಾಗಿ ಬಡವರು ಮತ್ತು ಮಧ್ಯಮ ವರ್ಗದವರು ತೀವ್ರ ಸಂಕಷ್ಟಕ್ಕೆ…
-7 ಜನರು ಮೃತಪಟ್ಟಿದ್ದಾರೆ – ಇವರಲ್ಲಿ 2 ಮಕ್ಕಳು ಸೇರಿದ್ದಾರೆ! ಹಳೆಯದು, ಬಿರುಕು ಬಿದ್ದ ಗೋಡೆ ಕುಸಿದು ಬಡ ಮತ್ತು…
01 MAY 2026 "Respect Labour. Restore Dignity. Ensure Justice. This Labour Day, let every worker…