ಬೊಮ್ಮಾಯಿ ಅವರು ಮಂಡಿಸಿದ 2023 24ರ ಸಾಲಿನ ಬಜೆಟ್ ಕಪ್ಪು ಬಿಳುಪು ಚಿತ್ರಕ್ಕೆ ಬಣ್ಣ ಬಳಿದು ಚಂದಗಾಣಿಸುವ ವಿಫಲ ಪ್ರಯತ್ನ. ಇದರಲ್ಲ ಜನರಿಗೆ ಮೋಸವಲ್ಲದೆ ಬೇರೆನಿಲ್ಲ:

ಅಬ್ದುಲ್ ಮಜೀದ್ ಮೈಸೂರು, ರಾಜ್ಯಾಧ್ಯಕ್ಷರು, ಎಸ್‌ಡಿಪಿಐ

ಬೆಂಗಳೂರು, 17 ಫೆಬ್ರವರಿ 2023: ಬಸವರಾಜ ಬೊಮ್ಮಾಯಿಯವರ ನೇತೃತ್ವದ ಬಿಜೆಪಿ ಸರ್ಕಾರ ಮಂಡಿಸಿದ 2023 – 24 ಸಾಲಿನ ಬಜೆಟ್ ಕಪ್ಪು ಬಿಳುಪು ಚಿತ್ರಕ್ಕೆ ಬಲವಂತಕ್ಕೆ ಬಣ್ಣ ಬಂದು ಚಂದವಾಗಿ ಕಾಣುವಂತೆ ಮಾಡುವ ವಿಫಲ ಪ್ರಯತ್ನವಾಗಿದೆ. ಇದರಲ್ಲಿ ಸಾಮಾನ್ಯ ಜನರಿಗೆ ಮೋಸವಲ್ಲದೆ ಮತ್ತೇನು ಇಲ್ಲ ಎಂದು ಸೋಶಿಯಲ್ ಡೆಮೊಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ಪಕ್ಷದ ರಾಜ್ಯಾಧ್ಯಕ್ಷರಾದ ಅಬ್ದುಲ್ ಮಜೀದ್‌ ಮೈಸೂರು ಅವರು ತಮ್ಮ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕರ್ನಾಟಕದಲ್ಲಿ ಇನ್ನೆರಡು ತಿಂಗಳಲ್ಲಿ ಚುನಾವಣೆ ಬರಲಿರುವ ಕಾರಣ ಆ ನೆಪದಲ್ಲಿಯಾದರೂ ಜನತೆಗೆ ಒಂದಷ್ಟು ಉಪಯುಕ್ತ ಯೋಜನೆಗಳು, ಬಡವರ ಪರ, ರೈತ ಪರ ನೀತಿ, ಯೋಜನೆಗಳು ಘೋಷಣೆಯಾಗಬಹುದು ಎಂದು ನಿರೀಕ್ಷಿಸುತ್ತಿದ್ದ ಜನರಿಗೆ ಈ ಬಜೆಟ್‌ ಸಂಪೂರ್ಣ ನಿರಾಶೆ ಮೂಡಿಸಿದೆ. ಪ್ರಮುಖ ಕ್ಷೇತ್ರಗಳಿಗೆ ನೀಡುವ ಅನುದಾನದಲ್ಲಿ ಕಳೆದ ಬಾರಿಗೆ ಹೋಲಿಸಿದರೆ ಈ ಬಾರಿ ಕಡಿಮೆ ಪ್ರಮಾಣದ ಅನುದಾನ ನೀಡಿರುವುದನ್ನು ಗಮನಿಸಿದರೆ ಕರ್ನಾಟಕ ರಾಜ್ಯದ ಬೊಕ್ಕನ ಆರೋಗ್ಯಕರವಾಗಿಲ್ಲ ಎಂಬುದು ಮೇಲ್ನೋಟಕ್ಕೆ ಸ್ಪಷ್ಟವಾಗಿ ಗೊತ್ತಾಗುತ್ತದೆ. ಅಂಕಿಗಳನ್ನು ದೊಡ್ಡದಾಗಿ ತೋರಿಸುವ ಮೂಲಕ ಅದರ ಮೂಲ ಮೌಲ್ಯವನ್ನು ಜಾಗರೂಕತೆಯಿಂದ ಬಚ್ಚಿಡುವಂತಹ ಪ್ರಯತ್ನ ಮಾಡಲಾಗಿದೆ. ಇದು ಸಂಪೂರ್ಣ ಕಣ್ಕಟ್ಟಿನ ಬಜೆಟ್ಟಾಗಿದ್ದು ಜನರನ್ನು ದಿಕ್ಕು ತಪ್ಪಿಸುವ ಬಿಜೆಪಿಯವರ ತಂತ್ರವಾಗಿದೆ ಎಂದು ಮಜೀದ್ ಅವರು ತಮ್ಮ ಪ್ರಕಟಣೆಯಲ್ಲಿ ಆರೋಪಿಸಿದ್ದಾರೆ.

ಏರು ಗತಿಯಲ್ಲಿರುವ ನಿರುದ್ಯೋಗದ ಬಗ್ಗೆ ಯಾವುದೇ ರೀತಿಯಾದ ಪ್ರಸ್ತಾಪ ಅಥವಾ ಯೋಜನೆಗಳನ್ನು ಬಜೆಟ್ ನಲ್ಲಿ ಸೇರಿಸಲಾಗಿಲ್ಲ. ಸರ್ಕಾರಿ ಇಲಾಖೆಗಳಲ್ಲಿ ಖಾಲಿ ಇರುವ ಸುಮಾರು 2.5 ಲಕ್ಷ ಉದ್ಯೋಗಗಳ ನೇಮಕಾತಿಯ ಬಗ್ಗೆಯೂ ಕೂಡ ಯಾವುದೇ ಪ್ರಸ್ತಾಪ ಇಲ್ಲ. ಯುವಕರನ್ನು ಕೇವಲ ಕೋಮುವಾದದ ನಂಜಿನ ಮೂಲಕವೇ ಸೆಳೆಯುವುದು ಇವರ ಉದ್ದೇಶ ಎಂಬುದು ಇದರಿಂದ ಸ್ಪಷ್ಟವಾಗುತ್ತದೆ.

ಅದಕ್ಕಿಂತಲೂ ಅಘಾತಕಾರಿ ಅಂಶವೆಂದರೆ ಕಳೆದ ಬಜೆಟ್ ನಲ್ಲಿ ಘೋಷಣೆ ಮಾಡಿದ 339 ಯೋಜನೆಗಳ ಪೈಕಿ 132 ಯೋಜನೆಗಳ ಅನುಷ್ಠಾನವೇ ಆಗಿಲ್ಲ. ಪೂರ್ಣ ವರ್ಷ ಅಧಿಕಾರ ನಡೆಸುವ ಅವಕಾಶ ಇದ್ದಾಗಿಯೂ ಇಂತಹ ಪರಿಸ್ಥಿತಿ ಇದ್ದರೆ ಇನ್ನು ಈ ಬಜೆಟ್ ಕೇವಲ ಎರಡು ತಿಂಗಳ ಅಯನ್ನು ಹೊಂದಿದ. ಈ ಅಲ್ಪ ಅವಧಿಯಲ್ಲಿ ಈ ಭ್ರಷ್ಟ ಬಿಜೆಪಿ ಸರ್ಕಾರ ಕೆಲವು ಯೋಜನೆಗಳ ಟೆಂಡರ್ ಕರೆದು ಅದರಲ್ಲಿ ಕಮಿಷನ್ ಹೊಡೆಯುವುದನ್ನು ಬಿಟ್ಟರೆ ಬೇರೇನನ್ನು ಕೂಡ ಮಾಡುವುದಿಲ್ಲ ಎನ್ನುವುದು ಸ್ಪಷ್ಟ ಎಂದು ಅವರು ಆರೋಪಿಸಿದರು. ಒಟ್ಟಾರೆಯಾಗಿ ಇದೊಂದು ಬೋಗಸ್ ಮತ್ತು ಜನರನ್ನು ಯಾಮಲಿಸಿ ಮತ ಪಡೆಯುವ ವಿಫಲ ಪ್ರಯತ್ನ ಎಂದು ಮಜೀದವರು ತಮ್ಮ ಪ್ರಕಟಣೆಯಲ್ಲಿ ಹೇಳಿದ್ದಾರೆ.

~ಅಬ್ದುಲ್ ಮಜೀದ್
ರಾಜ್ಯಾಧ್ಯಕ್ಷರು, ಎಸ್‌ಡಿಪಿಐ ಕರ್ನಾಟಕ

admin

Recent Posts

WORLD ENVIRONMENT DAY

ವಿಶ್ವ ಪರಿಸರ ದಿನಾಚರಣೆ 05 JUNE ಪರಿಸರ ಸಂರಕ್ಷಣೆ ನಮ್ಮೆಲ್ಲರ ಹೊಣೆ! ಇಂದು ನಾವು ನೆಡುವ ಒಂದು ಸಣ್ಣಗಿಡ, ನಾಳಿನ…

21 hours ago

SDPI ಮಂಗಳೂರು ಗ್ರಾಮಾಂತರ ಜಿಲ್ಲಾ ಸಮಿತಿಯ ಸದಸ್ಯರು, ಪುತ್ತೂರಿನ ಹಿರಿಯ ಉದ್ಯಮಿ, ಸಮಾಜಸೇವಕರು ಹಾಗೂ ವಿವಿಧ ಧಾರ್ಮಿಕ ಮತ್ತು ಸಾಮಾಜಿಕ ಸಂಘಟನೆಗಳಲ್ಲಿ ಮಹತ್ವದ ಜವಾಬ್ದಾರಿಗಳನ್ನು ನಿರ್ವಹಿಸಿದ್ದ ಸಾಗರ್ ಇಬ್ರಾಹಿಂ ಹಾಜಿ ಅವರ ನಿಧನದ ಸುದ್ದಿ ಅತ್ಯಂತ ದುಃಖವನ್ನುಂಟು ಮಾಡಿದೆ.ಅವರು ಸಮಾಜದ ಅಭಿವೃದ್ಧಿ, ಧಾರ್ಮಿಕ ಸೇವೆ ಹಾಗೂ ಜನಸಾಮಾನ್ಯರ ಕಲ್ಯಾಣಕ್ಕಾಗಿ ಸಲ್ಲಿಸಿದ ಕೊಡುಗೆಗಳು ಸದಾ ಸ್ಮರಣೀಯವಾಗಿರಲಿವೆ. ಅವರ ಅಗಲಿಕೆಯಿಂದ ಕುಟುಂಬಕ್ಕೆ ಮಾತ್ರವಲ್ಲ, ಪುತ್ತೂರು ಭಾಗದ ಸಮುದಾಯಕ್ಕೂ ಮತ್ತು SDPI ಪಕ್ಷಕ್ಕೂ ತುಂಬಲಾರದ ನಷ್ಟ ಉಂಟಾಗಿದೆ.ಅಲ್ಲಾಹು ತಆಲಾ ಮರ್ಹೂಮ್ ಸಾಗರ್ ಇಬ್ರಾಹಿಂ ಹಾಜಿಯವರ ಸಕಲ ಸತ್ಕರ್ಮಗಳನ್ನು ಸ್ವೀಕರಿಸಿ, ಅವರಿಗೆ ಜನ್ನತುಲ್ ಫಿರ್ದೌಸ್ ಅನುಗ್ರಹಿಸಲಿ. ಅವರ ಕುಟುಂಬಸ್ಥರು, ಬಂಧುಬಳಗ ಮತ್ತು ಅಭಿಮಾನಿಗಳಿಗೆ ಈ ದುಃಖವನ್ನು ಸಹಿಸುವ ಶಕ್ತಿ ಮತ್ತು ತಾಳ್ಮೆಯನ್ನು ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ.

~ಅಬ್ದುಲ್ ಮಜೀದ್,ರಾಜ್ಯಾಧ್ಯಕ್ಷರು, SDPI ಕರ್ನಾಟಕ SDPIKarnataka #Mangalore

1 day ago

ಜಿಲ್ಲಾ ಪ್ರತಿನಿಧಿ ಸಭೆ

DRC DISTRICT REPRESENTATIVE COUNCIL Heartly Welcome ABDUL HANNANState Vice President MAULANA AKRAMState Secretary ABDUL RAHEEM…

6 days ago

HAPPY Eid Al-Adha

Wishing you a beautiful and blessed Eid. Warm Wishes on Eid ul Adha May the…

1 week ago