18
Mar

ಸೋಶಿಯಲ್ ಡೆಮೊಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ ಪಕ್ಷದ ದಾವಣಗೆರೆ ಜಿಲ್ಲಾಧ್ಯಕ್ಷರು ಮತ್ತು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಯಾದ ಇಸ್ಮಾಯಿಲ್ ಜಿಬಿವುಲ್ಲಾ, ಉಪಾಧ್ಯಕ್ಷರಾದ ರಜ್ಜ ರಿಯಾಝ್ ಅಹ್ಮದ್, ಜಿಲ್ಲಾ ಸಮಿತಿ ಸದಸ್ಯರಾದ ಫಯಾಝ್ ಅಹ್ಮದ್ ಮತ್ತು ಸಮೀವುಲ್ಲಾ ಅವರನ್ನೊಳಗೊಂಡ ನಿಯೋಗವು ಹಾವೇರಿ ಜಿಲ್ಲೆಯ ಗಲಭೆ ಪೀಡಿತ ಪ್ರದೇಶವಾದ ರಟ್ಟಹಳ್ಳಿಗೆ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿಯನ್ನು ಪರಿಶೀಲಿಸಿತು. ಈ ಘಟನೆಯಲ್ಲಿ ಭಾಗಿಯಾದ ಸಂಘೀ ಗೂಂಡಾಗಳ ವಿರುದ್ಧ ಕಠಿಣವಾದ ಕಾನೂನು ಕ್ರಮ ಕೈಗೊಳ್ಳಬೇಕು ಮತ್ತು ಯಾವುದೇ ನಿರಪರಾಧಿಗಳನ್ನು ಬಂಧಿಸಬಾರದೆಂದು ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಡಾ. ಶಿವಕುಮಾರ್ ಮತ್ತು ಉಪ ಪೊಲೀಸ್ ವರಿಷ್ಠಾಧಿಕಾರಿ ರವರನ್ನು ನಿಯೋಗದ ಸದಸ್ಯರು ಆಗ್ರಹಿಸಿದರು.

Leave A Comment