ತಮ್ಮ ಮೇಲೆ WFI ಅಧ್ಯಕ್ಷ ಹಾಗೂ ಬಿಜೆಪಿಯ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ನಡೆಸುತ್ತ ಬಂದಿರುವ ದೌರ್ಜನ್ಯಗಳ ವಿರುದ್ಧ ದೆಹಲಿಯ ಜಂತರ್ ಮಂತರ್ ನಲ್ಲಿ ಭಾರತದ ಪದಕ ವಿಜೇತ ಮಹಿಳಾ ಕುಸ್ತಿಪಟುಗಳು ಚಳುವಳಿ ಹಮ್ಮಿಕೊಂಡಿದ್ದಾರೆ. ಅವರ ಚಳುವಳಿಯನ್ನು ವಿಫಲಗೊಳಿಸಲು ಕೇಂದ್ರ ಗೃಹಸಚಿವ ಅಮಿತ್ ಶಾ ಅಧಿಕಾರದ ಅಡಿಯಲ್ಲಿ ಬರುವ ದೆಹಲಿ ಪೋಲೀಸರು ಇನ್ನಿಲ್ಲದ ನೀಚ ತಂತ್ರಗಳನ್ನು ಹೂಡುತ್ತಿದ್ದಾರೆ. ನಾರಿ ಶಕ್ತಿ ಎಂದು ಬಾಯಿತುಂಬಾ ಹೇಳುವ ಪ್ರಧಾನಿ ಮೋದಿ ಜಾಣ ಕುರುಡು ಪ್ರದರ್ಶಿಸುತ್ತಿದ್ದಾರೆ. ಈ ಸಂದರ್ಭದಲ್ಲಿ ಎಸ್ಡಿಪಿಐ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಯಾಸ್ಮಿನ್ ಫಾರೂಖಿ ಅವರ ನೇತೃತ್ವದ ನಿಯೋಗ ಚಳುವಳಿನಿರತ ಕ್ರೀಡಾಪಟುಗಳನ್ನು ಭೇಟಿ ಮಾಡಿ ಅವರಿಗೆ ಬೆಂಬಲ ಸೂಚಿಸಿತು. ಇದೇ ಸಂದರ್ಭದಲ್ಲಿ WFI ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ರನ್ನು ತಕ್ಷಣ ಬಂಧಿಸಿ ಕಠಿಣ ಕಾನೂನು ಕ್ತಮ ಕೈಗೊಳ್ಳಬೇಕು ಎಂದು ಯಾಸ್ಮಿನ್ ಫಾರೂಖಿ ಅವರು ಒತ್ತಾಯಿಸಿದರು.
ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು, ಹಣದ ಬಲ ಮತ್ತು ರಾಜ್ಯ ಯಂತ್ರಾಂಗದ ಬಹಿರಂಗ ದುರುಪಯೋಗದ ಮೂಲಕ ಪಡೆದ…
ಹುತಾತ್ಮ ದಿನ 04 ಮೇ "ನೂರು ವರ್ಷ ನರಿಯಾಗಿ ಬದುಕುವುದಕ್ಕಿಂತ ಒಂದು ದಿನ ಹುಲಿಯಾಗಿ ಬದುಕುವುದು ಉತ್ತಮ." ~ಅಬ್ದುಲ್ ಮಜೀದ್,ರಾಜ್ಯಾಧ್ಯಕ್ಷರು…
ಕೇಂದ್ರ ಸರ್ಕಾರದ ನಿರಂತರ ಬೆಲೆ ಏರಿಕೆ ನೀತಿಯಿಂದ ಸಾಮಾನ್ಯ ಜನರು, ವಿಶೇಷವಾಗಿ ಬಡವರು ಮತ್ತು ಮಧ್ಯಮ ವರ್ಗದವರು ತೀವ್ರ ಸಂಕಷ್ಟಕ್ಕೆ…
-7 ಜನರು ಮೃತಪಟ್ಟಿದ್ದಾರೆ – ಇವರಲ್ಲಿ 2 ಮಕ್ಕಳು ಸೇರಿದ್ದಾರೆ! ಹಳೆಯದು, ಬಿರುಕು ಬಿದ್ದ ಗೋಡೆ ಕುಸಿದು ಬಡ ಮತ್ತು…
01 MAY 2026 "Respect Labour. Restore Dignity. Ensure Justice. This Labour Day, let every worker…