ತಮ್ಮ ಮೇಲೆ WFI ಅಧ್ಯಕ್ಷ ಹಾಗೂ ಬಿಜೆಪಿಯ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ನಡೆಸುತ್ತ ಬಂದಿರುವ ದೌರ್ಜನ್ಯಗಳ ವಿರುದ್ಧ ದೆಹಲಿಯ ಜಂತರ್ ಮಂತರ್ ನಲ್ಲಿ ಭಾರತದ ಪದಕ ವಿಜೇತ ಮಹಿಳಾ ಕುಸ್ತಿಪಟುಗಳು ಚಳುವಳಿ ಹಮ್ಮಿಕೊಂಡಿದ್ದಾರೆ. ಅವರ ಚಳುವಳಿಯನ್ನು ವಿಫಲಗೊಳಿಸಲು ಕೇಂದ್ರ ಗೃಹಸಚಿವ ಅಮಿತ್ ಶಾ ಅಧಿಕಾರದ ಅಡಿಯಲ್ಲಿ ಬರುವ ದೆಹಲಿ ಪೋಲೀಸರು ಇನ್ನಿಲ್ಲದ ನೀಚ ತಂತ್ರಗಳನ್ನು ಹೂಡುತ್ತಿದ್ದಾರೆ. ನಾರಿ ಶಕ್ತಿ ಎಂದು ಬಾಯಿತುಂಬಾ ಹೇಳುವ ಪ್ರಧಾನಿ ಮೋದಿ ಜಾಣ ಕುರುಡು ಪ್ರದರ್ಶಿಸುತ್ತಿದ್ದಾರೆ. ಈ ಸಂದರ್ಭದಲ್ಲಿ ಎಸ್ಡಿಪಿಐ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಯಾಸ್ಮಿನ್ ಫಾರೂಖಿ ಅವರ ನೇತೃತ್ವದ ನಿಯೋಗ ಚಳುವಳಿನಿರತ ಕ್ರೀಡಾಪಟುಗಳನ್ನು ಭೇಟಿ ಮಾಡಿ ಅವರಿಗೆ ಬೆಂಬಲ ಸೂಚಿಸಿತು. ಇದೇ ಸಂದರ್ಭದಲ್ಲಿ WFI ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ರನ್ನು ತಕ್ಷಣ ಬಂಧಿಸಿ ಕಠಿಣ ಕಾನೂನು ಕ್ತಮ ಕೈಗೊಳ್ಳಬೇಕು ಎಂದು ಯಾಸ್ಮಿನ್ ಫಾರೂಖಿ ಅವರು ಒತ್ತಾಯಿಸಿದರು.
SDPIKarnataka #Gadag #LeadersConclave
ಲೀಡರ್ಸ್ ಕಾನ್ ಕ್ಲೇವ್ July 12 2026 M.K FAIZY National President State President Abdul Majeed National…
ಲೀಡರ್ಸ್ ಕಾನ್ ಕ್ಲೇವ್ Programs in North Karnataka July 2026 09th - Mandya 11th - Bijapur…
ಪತ್ರಿಕಾ ಪ್ರಕಟಣೆ 03.07.2026 ಬೀದಿ ಬದಿ ವ್ಯಾಪಾರಿಗಳ ತೆರವು ಕಾರ್ಯಾಚರಣೆ ತಕ್ಷಣ ನಿಲ್ಲಿಸಬೇಕು; 2014ರ ಕೇಂದ್ರ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು:…