Categories: featureNewsPolitics

ರಾಯಚೂರು ಎಸ್‌ಡಿಪಿಐ ಕಚೇರಿಯಲ್ಲಿ ವಿಧಾನಸಭಾ ಚುನಾವಣೆ ಅವಲೋಕನ ಸಭೆ.

ರಾಯಚೂರು. (ಮೇ-18): ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ರಾಯಚೂರು ವಿಧಾನಸಭಾ ಕ್ಷೇತ್ರ ಚುನಾವಣಾ ಉಸ್ತುವಾರಿ ಸಮಿತಿಯ ವಿಧಾನಸಭಾ ಚುನಾವಣೆ ಅವಲೋಕನ ಸಭೆ ಪಕ್ಷದ ಕಚೇರಿಯಲ್ಲಿ ಎಸ್ಡಿಪಿಐ ಜಿಲ್ಲಾಧ್ಯಕ್ಷರಾದ ತೌಸೀಫ್ ಅಹಮದ್ ಮತ್ತು ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯ ಚುನಾವಣಾ ಉಸ್ತುವಾರಿ ಅಪ್ಸರ್ ಕೊಡ್ಲಿಪೇಟೆ, ರಾಜ್ಯ ಸಮಿತಿ ಸದಸ್ಯರಾದ ರಹೀಮ್ ಪಟೇಲ್ ರವರ ಉಪಸ್ಥಿತಿಯಲ್ಲಿ ನಡೆಯಿತು. ಅವಲೋಕನ ಸಭೆಯಲ್ಲಿ ಈ ಬಾರಿಯ ಚುನಾವಣೆಯಲ್ಲಿ ಕೋಮುವಾದಿ ಬಿಜೆಪಿ ಸರ್ಕಾರವನ್ನು ಅಧಿಕಾರದಿಂದ ಕೆಳಗಿಳಿಸಲು ಇಡೀ ರಾಜ್ಯದ ಜನರು ಮಾನಸಿಕವಾಗಿ ತಯಾರಾಗಿದ್ದ ಪ್ರತಿಕೂಲ ಪರಿಸ್ಥಿತಿಯಲ್ಲಿ ಆಮಿಷ ಗಳ ಅಲೆಯ ನಡುವೆ, ಅಗತ್ಯ ಸಂಪನ್ಮೂಲಗಳ ಕೊರತೆಯ ನಡುವೆಯೂ ನಮ್ಮ ನಿರೀಕ್ಷೆ ಮಟ್ಟದ ಗುರಿ ತಲುಪಲು ನಾವು ಎಡವಿದ್ದು ಎಲ್ಲಿ? ಮತ್ತು ನಮ್ಮ ಗುರಿಯತ್ತ ಸಾಗಲು ಅಡೆತಡೆಯಾದ ಬಾಹ್ಯ ಅಂಶಗಳು ಯಾವುವು? ಅದನ್ನು ಮುಂದಿನ ಚುನಾವಣೆಗಳಲ್ಲಿ ನಾವು ಹೇಗೆ ಅತಿಜಯಿಸಬೇಕು? ಎಂಬ ಬಗ್ಗೆ ಸುದೀರ್ಘ ಚರ್ಚೆ ನಡೆಯಿತು. ಮತ್ತು ಆಗಿರುವ ಕೊರತೆಗಳನ್ನು ನೀಗಿಸಿಕೊಂಡು ಮುಂಬರಲಿರುವ ಜಿಲ್ಲಾ ಪಂಚಾಯಿತಿ ಮತ್ತು ತಾಲ್ಲೂಕು ಪಂಚಾಯಿತಿ ಚುನಾವಣೆಗೆ ಹೇಗೆ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು? ಬೂತ್ ಸಮಿತಿಗಳ ಬಲವರ್ದನೆಯ ಕಾರ್ಯತಂತ್ರಗಳ ಕುರಿತು ಸಮಾಲೋಚನೆ ನಡೆಸಲಾಯಿತು. ಈ ಸಂದರ್ಭದಲ್ಲಿ ಎಸ್‌ಡಿಪಿಐ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜೀಲಾನ್, ಕ್ಷೇತ್ರ ಸಮಿತಿ ಪದಾಧಿಕಾರಿಗಳು, ಬ್ಲಾಕ್ ಸಮಿತಿ ಪದಾಧಿಕಾರಿಗಳು, ಚುನಾವಣಾ ಉಸ್ತುವಾರಿಗಳು, ಪಕ್ಷದ ಹಿರಿಯರು ಉಪಸ್ಥಿತರಿದ್ದರು.

admin

Recent Posts

ಕಾನೂನಿನ ಮುಂದೆ ಎಲ್ಲರೂ ಸಮಾನರು.

ಪೊಲೀಸರು CT ರವಿಯ ಮೇಲೆ FIR ಆಗಿರುವ ಕಾರಣ ಕಾನೂನಿನ ಪ್ರಕ್ರಿಯೆಯ ಭಾಗವಾಗಿ ನೋಟಿಸ್ ನೀಡಲು ತೆರಳಿದಾಗ, ಅವರ ಕರ್ತವ್ಯಕ್ಕೆ…

1 week ago

ಬಿಡದಿ ಟೌನ್‌ಶಿಪ್ ಯೋಜನೆ: ರೈತರ ಹಿತಾಸಕ್ತಿ ಮತ್ತು ಪಾರದರ್ಶಕತೆಯನ್ನು ಸರ್ಕಾರ ಎತ್ತಿಹಿಡಿಯಲಿ : SDPI

ಬೆಂಗಳೂರು, ಜುಲೈ 21-2026ಬಿಡದಿ ಪ್ರದೇಶದಲ್ಲಿ ಪ್ರಸ್ತಾಪಿತ ಗ್ರೇಟರ್ ಬೆಂಗಳೂರು ಇಂಟಿಗ್ರೇಟೆಡ್ ಟೌನ್‌ಶಿಪ್ ಯೋಜನೆಯ ಸುತ್ತ ಜೆಡಿಎಸ್ ಮತ್ತು ಕಾಂಗ್ರೆಸ್ ನಾಯಕರ…

2 weeks ago

ಸಂತಾಪಗಳು

ಶ್ರೀಮತಿ ಚೆನ್ನಮ್ಮ ಭಾರತದ ಮಾಜಿ ಪ್ರಧಾನಮಂತ್ರಿ ಶ್ರೀ ಎಚ್. ಡಿ. ದೇವೇಗೌಡ ಅವರ ಧರ್ಮಪತ್ನಿ ಭಾರತದ ಮಾಜಿ ಪ್ರಧಾನಮಂತ್ರಿ ಶ್ರೀ…

2 weeks ago