ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್ಡಿಪಿಐ) ಪಕ್ಷದ ಕಾರ್ಯಕರ್ತರ ಸಮಾವೇಶ ದಿನಾಂಕ 26.05.2023 ರಂದು ಮೈಸೂರಿನಲ್ಲಿ ನಡೆಯಿತು. ಈ ಸಮಾವೇಶದ ಅಧ್ಯಕ್ಷತೆಯನ್ನು ಪಕ್ಷದ ಮೈಸೂರು ಜಿಲ್ಲಾಧ್ಯಕ್ಷರಾದ ರಫತ್ ಖಾನ್ ಅವರು ವಹಿಸಿದ್ದರು. ಸ್ವಾಗತ ಭಾಷಣ ಮಾಡಿದ ಅವರು ಸಮಾವೇಶದ ಕುರಿತು ಪ್ರಾಸ್ತಾವಿಕ ಮಾತುಗಳನ್ನಾಡಿದರು.
ಮುಖ್ಯ ಭಾಷಣಕಾರರಾಗಿ ಆಗಮಿಸಿದ ರಾಷ್ಟ್ರೀಯ ಸಮಿತಿ ಸದಸ್ಯರಾದ ಅಬ್ದುಲ್ ಹನ್ನಾನ್ ಅವರು ಮಾತನಾಡಿ, ಕರ್ನಾಟಕ ಚುನಾವಣಾ ಫಲಿತಾಂಶದ ಬಗ್ಗೆ ತಮ್ಮ ವಿಶ್ಲೇಷಣೆಯನ್ನು ಮುಂದಿಟ್ಟರು. ಎಸ್ಡಿಪಿಐ ಪಕ್ಷ ಸೋಲಿನಿಂದ ಎದೆಗುಂದಬೇಕಾದ ಅವಶ್ಯಕತೆ ಇಲ್ಲ, ನಮಗೆ ಇಲ್ಲಿ ದೊರೆತಿರುವ 41 ಸಾವಿರ ಮತಗಳು ಅತ್ಯಮೂಲ್ಯವಾದವು. ಆ ಮತಗಳನ್ನು ಮುಂದಿಟ್ಟುಕೊಂಡು ಮುಂದಿನ ಆರು ತಿಂಗಳಲ್ಲಿ ನಡೆಯಲಿರುವ ಮಹಾನಗರ ಪಾಲಿಕೆ ಚುನಾವಣೆಗೆ ತಯಾರಿ ನಡೆಸುವಂತೆ ಕರೆಕೊಟ್ಟರು.
ಸಮಾರೋಪ ಭಾಷಣ ಮಾಡಿದ ರಾಜ್ಯಾಧ್ಯಕ್ಷರಾದ ಅಬ್ದುಲ್ ಮಜೀದ್ ಅವರು ಚುನಾವಣೆಯಲ್ಲಿ ಅಭೂತಪೂರ್ವ ಕೆಲಸ ನಿರ್ವಹಿಸಿದ ಕಾರ್ಯಕರ್ತರನ್ನು ಅಭಿನಂದಿಸಿದರು. ಜೊತೆಗೆ ಫಲಿತಾಂಶದಿಂದ ಎದೆಗುಂದಬೇಕಾದ ಅವಶ್ಯಕತೆ ಇಲ್ಲ, ನಮಗೆ ಬಂದಿರುವ 41 ಸಾವಿರ ಮತಗಳು ಯಾವುದೇ ಆಮಿಷ ಇಲ್ಲದೆ ಬಂದ ಶುದ್ಧ, ಪ್ರಾಮಾಣಿಕ ಮತಗಳು. ಅದರ ಬಗ್ಗೆ ನಮಗೆ ಹೆಮ್ಮೆ ಇದೆ. ಚುನಾವಣಾ ಫಅತಾಂಶವನ್ನು ಹಿನ್ನಡೆಯಾಗಿ ನೋಡದೆ ಮುಂದೆ ಬರಲಿರುವ ಮೈಸೂರು ಮಹಾನಗರ ಪಾಲಿಕೆ ಚುನಾವಣೆಗೆ ಸಿದ್ಧರಾಗೋಣ ಎಂದು ಹೇಳದರು. ಜಿಲ್ಲಾ ಉಪಾಧ್ಯಕ್ಷರಾದ ಎಸ್. ಸ್ವಾಮಿಯವರು ಸಭೆಗೆ ಅಗಮಿಸಿದವರಿಗೆ ವಂದನೆಗಳನ್ನು ತಿಳಿಸುವ ಮೂಲಕ ಕಾರ್ಯಕ್ರಮ ಮುಕ್ತಾಯವಾಯಿತು.
ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಯಾಸ್ಮಿನ್ ಫಾರೂಖಿ ಅವರು, ಪಶ್ಚಿಮ ಏಷ್ಯಾದಲ್ಲಿ…
آج بنگلورو میں سوشیل ڈیموکریٹک پارٹی آف انز ٹی آف انڈیا (SDPI) کی اسٹیٹ کمیٹی…
ಇಂದು ಬೆಂಗಳೂರಿನಲ್ಲಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ರಾಜ್ಯ ಸಮಿತಿ ಸದಸ್ಯೆಯಾಗಿದ್ದ ದಿವಂಗತ ಆಯಿಷಾ ಶಬ್ಬಿರ್ ಅವರ…
Aaj Bengaluru mein Social Democratic Party of India (SDPI) ki State Committee Member marhooma Ayesha…