ಪತ್ರಿಕಾ ಪ್ರಕಟಣೆ
09-06-2023
ಬೆಂಗಳೂರು, 9 ಜೂನ್ 2023: ಸುಮಾರು 162 ಕೋಟಿ ವೆಚ್ಚದಲ್ಲಿ 84 ವರ್ಷಗಳ ನಂತರ 2015 ರಲ್ಲಿ ರಾಜ್ಯದಲ್ಲಿ ನಡೆಸಲಾದ ಹೆಚ್, ಕಾಂತರಾಜ್ ಆಯೋಗದ ಜಾತಿ ಗಣತಿ ವರದಿಯನ್ನು ಇಲ್ಲಿಯವರೆಗೂ ಗೌಪ್ಯವಾಗಿ ಇಡಲಾಗಿದೆ. ಈಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆ ವರದಿಯನ್ನು ಒಪ್ಪಿಕೊಳ್ಳುವುದಾಗಿ ಹೇಳಿರುವುದನ್ನು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್ಡಿಪಿಐ) ಪಕ್ಷ ಸ್ವಾಗತಿಸುತ್ತದೆ. ಇದು ಕೇವಲ ಹೇಳಿಕೆಯಾಗಿ ಮಾತ್ರ ಉಳಿಯದೆ ವರದಿಯ ಅಂಕಿ ಅಂಶಗಳನ್ನು ಸರ್ಕಾರ ಸಾರ್ವಜನಿಕಗೊಳಿಸಬೇಕು ಮತ್ತು ಆ ಅಂಕಿ ಅಂಶಗಳ ಆಧಾರದ ಮೇಲೆ ಮುಂಬರುವ ಬಜೆಟ್ ನಲ್ಲಿ ಅನುದಾನಗಳನ್ನು ನಿಗದಿ ಮಾಡಬೇಕು ಎಂದು ಪಕ್ಷದ ರಾಜ್ಯಾಧ್ಯಕ್ಷರಾದ ಅಬ್ದುಲ್ ಮಜಿದ್ ಮೈಸೂರು ಅವರು ತಮ್ಮ ಪತ್ರಿಕ ಪ್ರಕಟಣೆಯಲ್ಲಿ ಒತ್ತಾಯ ಮಾಡಿದ್ದಾರೆ.
ಜುಲೈ ತಿಂಗಳಿನಲ್ಲಿ ನಡೆಯಲಿರುವ ಬಜೆಟ್ ಅಧಿವೇಶನದಲ್ಲಿ ಜಾತಿ ಗಣತಿ ವರದಿಯನ್ನು ಸರ್ಕಾರ ಮಂಡಿಸುವ ಮೂಲಕ ಅದರಲ್ಲಿನ ಅಂಕಿಅಂಶಗಳನ್ನು ಸಾರ್ವಜನಿಕಗೊಳಿಸಬೇಕು. ಆ ಮೂಲಕ ರಾಜ್ಯದಲ್ಲಿ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕವಾಗಿ ಯಾವ ಸಮುದಾಯಗಳು ಯಾವ ಮಟ್ಟದಲ್ಲಿವೆ ಎನ್ನುವ ಸ್ಪಷ್ಟ ಚಿತ್ರಣ ಜನತೆಯ ಮುಂದೆ ಬರಲಿ, ಆ ನಂತರ ಮುಂದೆ ಸರ್ಕಾರಗಳು ರೂಪಿಸುವ ಎಲ್ಲ ಯೋಜನೆ ಮತ್ತು ನೀಡುವ ಅನುದಾನಗಳನ್ನು ಈ ವರದಿಯ ಆಧಾರದ ಮೇಲೆ ನೀಡುವ ಮೂಲಕ ಅವಶ್ಯಕತೆ ಇರುವ ಸಮುದಾಯಗಳಿಗೆ ನ್ಯಾಯ ಒದಗಿಸಲಿ ಎಂದು ಮಜೀದ್ ಅವರು ತಮ್ಮ ಪ್ರಕಟಣೆಯಲ್ಲಿ ಹೇಳಿದ್ದಾರೆ.
ಸರ್ಕಾರಗಳು ಜಾರಿಗೆ ತರುತ್ತಿರುವ ಯೋಜನೆಗಳು ಸಮರ್ಪಕವಾಗಿ ಕಾರ್ಯರೂಪಕ್ಕೆ ಬರುತ್ತಿವೆಯೆ ಎಂದು ಪರಿಶೀಲಿಸಲು ಒಂದು ಮೇಲ್ಮನೆ ಮತ್ತು ಕೆಳಮನೆ ಸದಸ್ಯರನ್ನು ಒಳಗೊಂಡ ವಿಶೇಷ ಸಮಿತಿಯನ್ನು ರಚಿಸಬೇಕು. ಅದರ ಮೂಲಕ ಮೂರು ತಿಂಗಳಿಗೊಮ್ಮೆ ಯೋಜನೆ, ಅನುದಾನಗಳ ಬಳಕೆಯ ಬಗ್ಗೆ ಪರಾಮರ್ಶೆ ನಡೆಸುವುದು ಸೂಕ್ತ ಎಂದು ಮಜೀದ್ ಅವರು ಸರ್ಕಾರಕ್ಕೆ ಸಲಹೆ ನೀಡಿದ್ದಾರೆ.
ಪೊಲೀಸರು CT ರವಿಯ ಮೇಲೆ FIR ಆಗಿರುವ ಕಾರಣ ಕಾನೂನಿನ ಪ್ರಕ್ರಿಯೆಯ ಭಾಗವಾಗಿ ನೋಟಿಸ್ ನೀಡಲು ತೆರಳಿದಾಗ, ಅವರ ಕರ್ತವ್ಯಕ್ಕೆ…
~ಮಜೀದ್ ತುಂಬೆ,ರಾಜ್ಯ ಪ್ರಧಾನ ಕಾರ್ಯದರ್ಶಿ, SDPI ಕರ್ನಾಟಕ SDPIKarnataka
ಬೆಂಗಳೂರು, ಜುಲೈ 21-2026ಬಿಡದಿ ಪ್ರದೇಶದಲ್ಲಿ ಪ್ರಸ್ತಾಪಿತ ಗ್ರೇಟರ್ ಬೆಂಗಳೂರು ಇಂಟಿಗ್ರೇಟೆಡ್ ಟೌನ್ಶಿಪ್ ಯೋಜನೆಯ ಸುತ್ತ ಜೆಡಿಎಸ್ ಮತ್ತು ಕಾಂಗ್ರೆಸ್ ನಾಯಕರ…
~ದೆಹ್ಲಾನ್ ಬಾಖವಿ,ರಾಷ್ಟ್ರೀಯ ಉಪಾಧ್ಯಕ್ಷರು SDPI SDPIKarnataka
Smt. Chennamma Ji wife of former Prime Minister Shri H.D. Deve Gowda Ji. Deeply pained…