ಕಾಂತರಾಜ್ ಆಯೋಗದ ಜಾತಿ ಗಣತಿ ವರದಿಯನ್ನು ಸರ್ಕಾರ ಸಾರ್ವಜನಿಕಗೊಳಿಸಲಿ ಮತ್ತು ಅದರ ಅಂಕಿಅಂಶಗಳ ಆಧಾರ ಮೇಲೆ ಬಜೆಟ್ ಅನುದಾನಗಳು ನಿಗಧಿಯಾಗಲಿ: ಅಬ್ದುಲ್ ಮಜೀದ್, ರಾಜ್ಯಾಧ್ಯಕ್ಷರು, ಎಸ್‌ಡಿಪಿಐ

ಪತ್ರಿಕಾ ಪ್ರಕಟಣೆ

ಬೆಂಗಳೂರು, 9 ಜೂನ್ 2023: ಸುಮಾರು 162 ಕೋಟಿ ವೆಚ್ಚದಲ್ಲಿ 84 ವರ್ಷಗಳ ನಂತರ 2015 ರಲ್ಲಿ ರಾಜ್ಯದಲ್ಲಿ ನಡೆಸಲಾದ ಹೆಚ್. ಕಾಂತರಾಜ್ ಆಯೋಗದ ಜಾತಿ ಗಣತಿ ವರದಿಯನ್ನು ಇಲ್ಲಿಯವರೆಗೂ ಗೌಪ್ಯವಾಗಿ ಇಡಲಾಗಿದೆ. ಈಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆ ವರದಿಯನ್ನು ಒಪ್ಪಿಕೊಳ್ಳುವುದಾಗಿ ಹೇಳಿರುವುದನ್ನು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ಪಕ್ಷ ಸ್ವಾಗತಿಸುತ್ತದೆ. ಇದು ಕೇವಲ ಹೇಳಿಕೆಯಾಗಿ ಮಾತ್ರ ಉಳಿಯದೆ ವರದಿಯ ಅಂಕಿ ಅಂಶಗಳನ್ನು ಸರ್ಕಾರ ಸಾರ್ವಜನಿಕಗೊಳಿಸಬೇಕು ಮತ್ತು ಆ ಅಂಕಿ ಅಂಶಗಳ ಆಧಾರದ ಮೇಲೆ ಮುಂಬರುವ ಬಜೆಟ್ ನಲ್ಲಿ ಅನುದಾನಗಳನ್ನು ನಿಗದಿ ಮಾಡಬೇಕು ಎಂದು ಪಕ್ಷದ ರಾಜ್ಯಾಧ್ಯಕ್ಷರಾದ ಅಬ್ದುಲ್ ಮಜಿದ್ ಮೈಸೂರು ಅವರು ತಮ್ಮ ಪತ್ರಿಕ ಪ್ರಕಟಣೆಯಲ್ಲಿ ಒತ್ತಾಯ ಮಾಡಿದ್ದಾರೆ.

ಜುಲೈ ತಿಂಗಳಿನಲ್ಲಿ ನಡೆಯಲಿರುವ ಬಜೆಟ್ ಅಧಿವೇಶನದಲ್ಲಿ ಜಾತಿ ಗಣತಿ ವರದಿಯನ್ನು ಸರ್ಕಾರ ಮಂಡಿಸುವ ಮೂಲಕ ಅದರಲ್ಲಿನ ಅಂಕಿಅಂಶಗಳನ್ನು ಸಾರ್ವಜನಿಕಗೊಳಿಸಬೇಕು. ಆ ಮೂಲಕ ರಾಜ್ಯದಲ್ಲಿ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿವಾಗಿ ಯಾವ ಸಮುದಾಯಗಳು ಯಾವ ಮಟ್ಟದಲ್ಲಿವೆ ಎನ್ನುವ ಸ್ಪಷ್ಟ ಚಿತ್ರಣ ಜನತೆಯ ಮುಂದೆ ಬರಲಿ. ಆ ನಂತರ ಮುಂದೆ ಸರ್ಕಾರಗಳು ರೂಪಿಸುವ ಎಲ್ಲ ಯೋಜನೆ ಮತ್ತು ನೀಡುವ ಅನುದಾನಗಳನ್ನು ಈ ವರದಿಯ ಆಧಾರದ ಮೇಲೆ ನೀಡುವ ಮೂಲಕ ಅವಶ್ಯಕತೆ ಇರುವ ಸಮುದಾಯಗಳಿಗೆ ನ್ಯಾಯ ಒದಗಿಸಲಿ ಎಂದು ಮಜೀದ್ ಅವರು ತಮ್ಮ ಪ್ರಕಟಣೆಯಲ್ಲಿ ಹೇಳಿದ್ದಾರೆ.

ಸರ್ಕಾರಗಳು ಜಾರಿಗೆ ತರುತ್ತಿರುವ ಯೋಜನೆಗಳು ಸಮರ್ಪಕವಾಗಿ ಕಾರ್ಯರೂಪಕ್ಕೆ ಬರುತ್ತಿವೆಯೆ ಎಂದು ಪರಿಶೀಲಿಸಲು ಒಂದು ಮೇಲ್ಮನೆ ಮತ್ತು ಕೆಳಮನೆ ಸದಸ್ಯರನ್ನು ಒಳಗೊಂಡ ವಿಶೇಷ ಸಮಿತಿಯನ್ನು ರಚಿಸಬೇಕು. ಅದರ ಮೂಲಕ ಮೂರು ತಿಂಗಳಿಗೊಮ್ಮೆ ಯೋಜನೆ, ಅನುದಾನಗಳ ಬಳಕೆಯ ಬಗ್ಗೆ ಪರಾಮರ್ಶೆ ನಡೆಸುವುದು ಸೂಕ್ತ ಎಂದು ಮಜೀದ್ ಅವರು ಸರ್ಕಾರಕ್ಕೆ ಸಲಹೆ ನೀಡಿದ್ದಾರೆ.

admin

Recent Posts

ಕಟಕ್‌ ದಂಗೆ ಆತಂಕಕಾರಿ – ನಿಷ್ಪಕ್ಷಪಾತ ತನಿಖೆ ಮತ್ತು ಆರೋಪಿಗಳ ವಿರುದ್ಧ ಕಠಿಣ ಕ್ರಮಕ್ಕೆ SDPI ಆಗ್ರಹ

ಒಡಿಶಾದ ಕಟಕ್‌ನಲ್ಲಿ ದುರ್ಗಾ ಪೂಜೆಯ ವಿಗ್ರಹ ಮೆರವಣಿಗೆ ಸಮಯದಲ್ಲಿ ಒಂದು ನಿರ್ದಿಷ್ಟ ಸಮುದಾಯವನ್ನು ಗುರಿಯಾಗಿಸಿ ಮಾಡಿದ ಹಿಂಸಾಚಾರ ಅತ್ಯಂತ ಆತಂಕಕಾರಿ…

13 hours ago

ಮುಖ್ಯ ನ್ಯಾಯಮೂರ್ತಿ ಗವಾಯಿ ಮೇಲೆ ದಾಳಿ ಎಸ್.ಡಿ.ಪಿ.ಐ ಖಂಡನೆ.

ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಬಿ.ಆರ್ ಗವಾಯಿ ಅವರ ಮೇಲೆ ಶೂ ಎಸೆಯಲು ಪ್ರಯತ್ನ ಪಟ್ಟ ಘಟನೆಯನ್ನು ಸೋಶಿಯಲ್ ಡೆಮಾಕ್ರಟಿಕ್…

1 day ago

انصاف کی جیت

کے․جی․ ہلّی اور ڈی․جی․ ہلّی مقدمے میں گرفتار دو افراد کوسپریم کورٹ نے ضمانت منظور…

2 days ago

ಮಹರ್ಷಿ ವಾಲ್ಮೀಕಿ ಜಯಂತಿಯ ಶುಭಾಶಯಗಳು

ನೀವು ಜ್ಞಾನ, ಹಣ, ಪ್ರತಿಷ್ಠೆ, ಶಕ್ತಿಯನ್ನು ಸಂಗ್ರಹಿಸಬಹುದು. ಆದರೆ ಇದೆಲ್ಲದರ ನಡುವೆ ಪ್ರೀತಿಯನ್ನು ಕಳೆದುಕೊಂಡಿದ್ದರೆ ನೀವು ನಿಜವಾದ ಬದುಕನ್ನೇ ಕಳೆದುಕೊಂಡಿದ್ದೀರಿ…

2 days ago

ನ್ಯಾಯದ ಜಯ

ಕೆ.ಜಿ.ಹಳ್ಳಿ ಮತ್ತು ಡಿ.ಜೆ.ಹಳ್ಳಿ ಪ್ರಕರಣದಲ್ಲಿ ಬಂಧಿತರಾದ ಇಬ್ಬರಿಗೆ ಸರ್ವೋಚ್ಚ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ ಇದು ನ್ಯಾಯ ಮತ್ತು ಸತ್ಯದ…

2 days ago

کے۔ جے، جارج کے استعفی کا ایس ڈی پی آئی کا مطالبہ

عبد الحنان ریاستی نائب صدر - ایس۔ ڈی۔ پی۔ آئی ہے بنگلور، 5 اکتوبر: توانائی…

4 days ago