ಪತ್ರಿಕಾ ಪ್ರಕಟಣೆ
ಬೆಂಗಳೂರು, 9 ಜೂನ್ 2023: ಸುಮಾರು 162 ಕೋಟಿ ವೆಚ್ಚದಲ್ಲಿ 84 ವರ್ಷಗಳ ನಂತರ 2015 ರಲ್ಲಿ ರಾಜ್ಯದಲ್ಲಿ ನಡೆಸಲಾದ ಹೆಚ್. ಕಾಂತರಾಜ್ ಆಯೋಗದ ಜಾತಿ ಗಣತಿ ವರದಿಯನ್ನು ಇಲ್ಲಿಯವರೆಗೂ ಗೌಪ್ಯವಾಗಿ ಇಡಲಾಗಿದೆ. ಈಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆ ವರದಿಯನ್ನು ಒಪ್ಪಿಕೊಳ್ಳುವುದಾಗಿ ಹೇಳಿರುವುದನ್ನು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್ಡಿಪಿಐ) ಪಕ್ಷ ಸ್ವಾಗತಿಸುತ್ತದೆ. ಇದು ಕೇವಲ ಹೇಳಿಕೆಯಾಗಿ ಮಾತ್ರ ಉಳಿಯದೆ ವರದಿಯ ಅಂಕಿ ಅಂಶಗಳನ್ನು ಸರ್ಕಾರ ಸಾರ್ವಜನಿಕಗೊಳಿಸಬೇಕು ಮತ್ತು ಆ ಅಂಕಿ ಅಂಶಗಳ ಆಧಾರದ ಮೇಲೆ ಮುಂಬರುವ ಬಜೆಟ್ ನಲ್ಲಿ ಅನುದಾನಗಳನ್ನು ನಿಗದಿ ಮಾಡಬೇಕು ಎಂದು ಪಕ್ಷದ ರಾಜ್ಯಾಧ್ಯಕ್ಷರಾದ ಅಬ್ದುಲ್ ಮಜಿದ್ ಮೈಸೂರು ಅವರು ತಮ್ಮ ಪತ್ರಿಕ ಪ್ರಕಟಣೆಯಲ್ಲಿ ಒತ್ತಾಯ ಮಾಡಿದ್ದಾರೆ.
ಜುಲೈ ತಿಂಗಳಿನಲ್ಲಿ ನಡೆಯಲಿರುವ ಬಜೆಟ್ ಅಧಿವೇಶನದಲ್ಲಿ ಜಾತಿ ಗಣತಿ ವರದಿಯನ್ನು ಸರ್ಕಾರ ಮಂಡಿಸುವ ಮೂಲಕ ಅದರಲ್ಲಿನ ಅಂಕಿಅಂಶಗಳನ್ನು ಸಾರ್ವಜನಿಕಗೊಳಿಸಬೇಕು. ಆ ಮೂಲಕ ರಾಜ್ಯದಲ್ಲಿ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿವಾಗಿ ಯಾವ ಸಮುದಾಯಗಳು ಯಾವ ಮಟ್ಟದಲ್ಲಿವೆ ಎನ್ನುವ ಸ್ಪಷ್ಟ ಚಿತ್ರಣ ಜನತೆಯ ಮುಂದೆ ಬರಲಿ. ಆ ನಂತರ ಮುಂದೆ ಸರ್ಕಾರಗಳು ರೂಪಿಸುವ ಎಲ್ಲ ಯೋಜನೆ ಮತ್ತು ನೀಡುವ ಅನುದಾನಗಳನ್ನು ಈ ವರದಿಯ ಆಧಾರದ ಮೇಲೆ ನೀಡುವ ಮೂಲಕ ಅವಶ್ಯಕತೆ ಇರುವ ಸಮುದಾಯಗಳಿಗೆ ನ್ಯಾಯ ಒದಗಿಸಲಿ ಎಂದು ಮಜೀದ್ ಅವರು ತಮ್ಮ ಪ್ರಕಟಣೆಯಲ್ಲಿ ಹೇಳಿದ್ದಾರೆ.
ಸರ್ಕಾರಗಳು ಜಾರಿಗೆ ತರುತ್ತಿರುವ ಯೋಜನೆಗಳು ಸಮರ್ಪಕವಾಗಿ ಕಾರ್ಯರೂಪಕ್ಕೆ ಬರುತ್ತಿವೆಯೆ ಎಂದು ಪರಿಶೀಲಿಸಲು ಒಂದು ಮೇಲ್ಮನೆ ಮತ್ತು ಕೆಳಮನೆ ಸದಸ್ಯರನ್ನು ಒಳಗೊಂಡ ವಿಶೇಷ ಸಮಿತಿಯನ್ನು ರಚಿಸಬೇಕು. ಅದರ ಮೂಲಕ ಮೂರು ತಿಂಗಳಿಗೊಮ್ಮೆ ಯೋಜನೆ, ಅನುದಾನಗಳ ಬಳಕೆಯ ಬಗ್ಗೆ ಪರಾಮರ್ಶೆ ನಡೆಸುವುದು ಸೂಕ್ತ ಎಂದು ಮಜೀದ್ ಅವರು ಸರ್ಕಾರಕ್ಕೆ ಸಲಹೆ ನೀಡಿದ್ದಾರೆ.
میں شامل ہوں SDPI 10 ΜΑΥ 2026 ΤΟ 25 MAY 2026 ممبر شپ کیمپین SDPIKarnataka…
10 ΜΑΥ 2026 ΤΟ 25 MAY 2026 MEMBERSHIP CAMPAIGN Social Democratic Party of India -Karnataka…
ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು, ಹಣದ ಬಲ ಮತ್ತು ರಾಜ್ಯ ಯಂತ್ರಾಂಗದ ಬಹಿರಂಗ ದುರುಪಯೋಗದ ಮೂಲಕ ಪಡೆದ…
ಹುತಾತ್ಮ ದಿನ 04 ಮೇ "ನೂರು ವರ್ಷ ನರಿಯಾಗಿ ಬದುಕುವುದಕ್ಕಿಂತ ಒಂದು ದಿನ ಹುಲಿಯಾಗಿ ಬದುಕುವುದು ಉತ್ತಮ." ~ಅಬ್ದುಲ್ ಮಜೀದ್,ರಾಜ್ಯಾಧ್ಯಕ್ಷರು…
ಕೇಂದ್ರ ಸರ್ಕಾರದ ನಿರಂತರ ಬೆಲೆ ಏರಿಕೆ ನೀತಿಯಿಂದ ಸಾಮಾನ್ಯ ಜನರು, ವಿಶೇಷವಾಗಿ ಬಡವರು ಮತ್ತು ಮಧ್ಯಮ ವರ್ಗದವರು ತೀವ್ರ ಸಂಕಷ್ಟಕ್ಕೆ…
-7 ಜನರು ಮೃತಪಟ್ಟಿದ್ದಾರೆ – ಇವರಲ್ಲಿ 2 ಮಕ್ಕಳು ಸೇರಿದ್ದಾರೆ! ಹಳೆಯದು, ಬಿರುಕು ಬಿದ್ದ ಗೋಡೆ ಕುಸಿದು ಬಡ ಮತ್ತು…