ಪತ್ರಿಕಾ ಪ್ರಕಟಣೆ

ಕೋಮು ವಿದ್ವೇಷಕ್ಕೆ ಬಲಿಯಾದ ಫಾಝಿಲ್, ಮಸೂದ್, ಜಲೀಲ್ ಮತ್ತು ದೀಪಕ್ ರಾವ್ ಕುಟುಂಬಗಳಿಗೆ ಪರಿಹಾರ ಘೋಷಿಸಿರುವ ಸರ್ಕಾರದ ಕ್ರಮ ಸ್ವಾಗತಾರ್ಹ. ಇದೇ ಕಾರಣಕ್ಕೆ ಕೊಲೆಯಾದ ಇತರರ ಕುಟುಂಬಗಳಿಗೂ ಪರಿಹಾರ ನೀಡಿ – ಅಬ್ದುಲ್ ಮಜೀದ್, ರಾಜ್ಯಾಧ್ಯಕ್ಷರು, ಎಸ್‌ಡಿಪಿಐ

ಬೆಂಗಳೂರು, 17 ಜೂನ್ 2023: ಕೋಮು ದ್ವೇಷದ ಕಾರಣಕ್ಕೆ ಸಂಘ ಪರಿವಾರದ ಗೂಂಡಾಗಳಂದ ಹತ್ಯೆಯಾದ ಫಾಝಿಲ್, ಮಸೂದ್, ಜಲೀಲ್ ಮತ್ತು ದೀಪಕ್ ರಾವ್ ಕುಟುಂಬಗಳಿಗೆ ತಲಾ 25 ಲಕ್ಷ ಪರಿಹಾರ ಘೋಷಿಸಿರುವ ಸರ್ಕಾರದ ಕ್ರಮವನ್ನು ಸ್ವಾಗತಿಸುತ್ತೇವೆ ಎಂದು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ಪಕ್ಷದ ರಾಜ್ಯಾಧ್ಯಕ್ಷರಾದ ಅಬ್ದುಲ್ ಮಜೀದ್ ಮೈಸೂರು ಅವರು ತಮ್ಮ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕೋಮು ದ್ವೇಷದ ಕಾರಣಕ್ಕೆ ಇವರ ಕೊಲೆ ನಡೆದ ದಿನದಿಂದಲೇ ಎಸ್‌ಡಿಪಿಐ ಪಕ್ಷ ಇವರ ಕುಟುಂಬಗಳಿಗೆ ಪರಿಹಾರ ನೀಡಬೇಕೆಂದು ಒತ್ತಾಯಿಸುತ್ತಾ ಬಂದಿದೆ. ಅದರಲ್ಲೂ ವಿಶೇಷವಾಗಿ ಕೇವಲ ಪ್ರವೀಣ್ ನೆಟ್ಟಾರು ಮತ್ತು ಹರ್ಷ ಕುಟುಂಬಗಳಿಗೆ ಮಾತ್ರ ಪರಿಹಾರ ಘೋಷಿಸಿದ ಕೋಮುವಾದಿ ಬಿಜೆಪಿ ಸರ್ಕಾರದ ತಾರತಮ್ಯ ನೀತಿಯ ವಿರುದ್ಧ ಎಸ್‌ಡಿಪಿಐ ಧ್ವನಿ ಎತ್ತಿತ್ತು. ಕೋಮು ದ್ವೇಷದ ಕಾರಣಕ್ಕೆ ಕೊಲೆಯಾದ ಎಲ್ಲರಿಗೂ ಪರಿಹಾರ ನೀಡಬೇಕು ಎಂಬ ಬೇಡಿಕೆಯನ್ನು ನಿರಂತರವಾಗಿ ಮಾಡುತ್ತಲೇ ಬಂದಿತ್ತು. ಈಗ ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರೆಸ್ ಸರ್ಕಾರ ಇವರಿಗೆ ಪರಿಹಾರ ಘೋಷಣೆ ಮಾಡಿರುವುದು ಸ್ವಾಗತಾರ್ಹ ಎಂದು ಮಜೀದ್ ಅವರು ತಮ್ಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇವರಷ್ಟೇ ಅಲ್ಲದೆ ಮಂಡ್ಯದ ಇದ್ರೀಶ್, ಬೆಳಗಾವಿಯ ಶಬಾಜ್, ನರಗುಂದದ ಸಮೀರ್, ಬೆಳ್ತಂಗಡಿಯ ದಿನೇಶ್‌ ಕನ್ಯಾಡಿ ಮತ್ತು ಮೈಸೂರಿನ ಸದಾಖತ್‌ ಅವರೂ ಸಹ ಕೋಮು ದ್ವೇಷದ ಕಾರಣಕ್ಕೆ ಕೊಲೆಯಾಗಿದ್ದಾರೆ. ಅವರ ಕುಟುಂಬಗಳಿಗೂ ಪರಿಹಾರ ನೀಡಬೇಕೆಂದು ಮಜೀದ್ ಅವರು ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.

admin

Recent Posts

Booker Prize Winner Deepa Basti Honoured by SDPI Kodagu

SDPI Kodagu District Committee felicitated Deepa Basti for her remarkable achievement in winning the Booker…

51 minutes ago

ದೀಪ ಬಾಸ್ತಿ ಅವರನ್ನು ಸನ್ಮಾನಿಸಿ ಗೌರವಿಸಿದ ಎಸ್‌.ಡಿ.ಪಿ.ಐ ಜಿಲ್ಲಾ ಸಮಿತಿ

ಶ್ರೀಮತಿ ದೀಪ ಬಾಸ್ತಿ ರವರಿಗೆ ಸಾಹಿತ್ಯ ಸಾಧನೆಯ ಹಿನ್ನೆಲೆಯಲ್ಲಿ ಪ್ರತಿಷ್ಠಿತ ಅಂತರಾಷ್ಟ್ರೀಯ ಬೂಕರ್ ಪ್ರಶಸ್ತಿ ಬಂದ ಹಿನ್ನೆಲೆಯಲ್ಲಿ ದಿನಾಂಕ 29.06.2025ರಂದು…

4 hours ago

ಆಪರೇಷನ್ ಸಿಂಧೂರ ಸಂದರ್ಭದಲ್ಲಿ ಮಾನಹಾನಿಕರ ವರದಿಗಾಗಿ ಝೀ ನ್ಯೂಸ್ ಮತ್ತು ನ್ಯೂಸ್ 18 ವಿರುದ್ಧ FIR ದಾಖಲಿಸಲು ಜಮ್ಮು ಕಾಶ್ಮೀರ ನ್ಯಾಯಾಲಯದ ಆದೇಶ

Justice for Iqbal ಕಾಶ್ಮೀರದ ಬಗ್ಗೆ ಮಾಧ್ಯಮಗಳ ಮತೀಯವಾದೀ ಪಕ್ಷಪಾತೀಯ ವರದಿಗೆ ಇಲ್ಯಾಸ್ ತುಂಬೆ ಖಂಡನೆ SDPIKarnataka

1 day ago