ರಾಜ್ಯದಲ್ಲಿ ಕೋಮು ಹಿಂಸಾಚಾರ ತಡೆಗಟ್ಟಲು ಸೋನಿಯಾ ಗಾಂಧಿ ನೇತೃತ್ವದ ಸಮಿತಿ 2005 ರಲ್ಲಿ ಶಿಫಾರಸು ಮಾಡಿದ್ದ ಕರಡು ಮಸೂದೆಯನ್ನು ಕಾನೂನು ಮಾಡಿ: ಮುಖ್ಯಮಂತ್ರಿಗೆ ಎಸ್ಡಿಪಿಐ ಪತ್ರ.
ಬೆಂಗಳೂರು, 04 ಜೂನ್ 2023: ಮಂಗಳೂರಿಗೆ ಸೀಮಿತವಾಗಿ ಕೋಮುವಾದಿ ವಿರೋಧಿ ವಿಭಾಗ ಆರಂಭಿಸಿದ್ದೀರಿ ಆದರೆ ಅದು ಎಷ್ಟು ಪರಿಣಾಮಕಾರಿಯಾಗಿರಲಿದೆ ಎಂಬ ಬಗ್ಗೆ ಅನುಮಾನಗಳಿವೆ. ಹಾಗಾಗಿ ಅದಕ್ಕಾಗಿ ಪ್ರತ್ಯೇಕ ವಿಭಾಗ ರಚಿಸುವ ಬದಲು ಇಡೀ ರಾಜ್ಯಕ್ಕೆ ಅನ್ವಯವಾಗುವಂತೆ ಒಂದು ಕಾಯ್ದೆಯನ್ನೇ ಜಾರಿಗೆ ತಂದರೆ ಕೋಮುಗಲಭೆ ಮತ್ತು ಗುಂಪು ದಾಳಿ ಪರಿಣಾಮಕಾರಿಯಾಗಿ ನಿಯಂತ್ರಣಕ್ಕೆ ಬರುತ್ತದೆ ಎಂಬ ಸಲಹೆಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಪಕ್ಷ ಎಸ್ಡಿಪಿಐ ಪತ್ರದ ಮೂಲಕ ಸಲಹೆ ನೀಡಿದೆ.
ಈ ಬಗ್ಗೆ ಮುಖ್ಯಮಂತ್ರಿಗೆ ಪತ್ರ ಬರೆದಿರುವ ಎಸ್ಡಿಪಿಐ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ಅವರು ಸೋನಿಯಾ ಗಾಂಧಿಯವರ ನೇತೃತ್ವದ ರಾಷ್ಟ್ರೀಯ ಸಲಹಾ ಮಂಡಳಿ 2005 ಒಂದು ಕರಡು ಮಸೂದೆ (Prevention of communal and Targeted Violence) ಯನ್ನು ಶಿಫಾರಸು ಮಾಡಿತ್ತು. ಆ ಕರಡು ಮಸೂದೆ ಇಂದಿಗೂ ನೆನೆಗುದಿಗೆ ಬಿದ್ದಿದೆ. ಅದನ್ನೇ ಈಗ ರಾಜ್ಯದಲ್ಲಿ ಕಾಯಿದ ಮಾಡುವುದರಿಂದ ಕೋಮುವಾದದ ವಿರುದ್ಧ ಬಲಿಷ್ಠ ಕಾನೂನೊಂದು ಜಾರಿಗೆ ತಂದಂತಾಗುತ್ತದೆ ಎಂದಿರುವ ಮಜೀದ್ ಅವರು, ಈ ಕಾನೂನನ್ನು ರಾಜ್ಯದಲ್ಲಿ ಜಾರಿಗೆ ತರುತ್ತೇವೆ ಎಂದು 2013 ರ ನಿಮ್ಮ ಕಾಂಗ್ರೆಸ್ ಪಕ್ಷದ ಪುಣಾಳಿಕೆಯಲ್ಲಿ ಘೋಷಣೆ ಕೂಡಾ ಮಾಡಿದ್ದೀರಿ ಎಂಬುವುದನ್ನು ಪತ್ರದಲ್ಲಿ ನೆನಪಿಸಿದ್ದಾರೆ.
ಅಭಿನಂದನಾ ರ್ಯಾಲಿ ಮತ್ತು ಸಮಾವೇಶ 21 ಜನವರಿ 2026 ರ್ಯಾಲಿ: ಸಂಜೆ 04:00 | ಅಂಬೇಡ್ಕರ್ (ಜ್ಯೋತಿ) ವೃತ್ತದಿಂದ ಪುರಭವನದ…
SIR ಮೂಲಕ ಮತದಾನದ ಹಕ್ಕನ್ನು ಕಸಿದುಕೊಳ್ಳುವ ಪ್ರಯತ್ನ ನಡೆಯುತ್ತಿದೆ - ಅಬ್ರಾರ್ 12.01.2026 ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನಲ್ಲಿ ಸೋಶಿಯಲ್…
ಈ ನಾಡು ಕಂಡ ಖ್ಯಾತ ಇಸ್ಲಾಮಿಕ್ ವಿದ್ವಾಂಸ, ಕರ್ನಾಟಕ ಅಮೀರೆ ಶರೀಯತ್ ಮತ್ತು ಸಬಿವುಲ್ ರಷಾದ್ ಅರೇಬಿಕ್ ಕಾಲೇಜು, ನಾಗವಾರ…
The passing away of Ameer-e-Shariat of Karnataka, the respected religious and social leader Maulana Sageer…
امیر شریعت کرناٹک، معروف دینی و سماجی رہنما مولانا صغیر احمد صاحب کے بنگلورو میں…
Deeply saddened by the passing of Ameer-e-Shariat Maulana Sageer Ahmed Sahib Principal of Sabee-ul-Rashad Arabic…