ಮೈಸೂರು : ಕಳೆದ ವಿಧಾನಸಭಾ ಚುನಾವಣೆಯ ಪ್ರಚಾರ ಭಾಷಣಗಳಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಬಜೆಟ್ ನಲ್ಲಿ ಅಲ್ಪಸಂಖ್ಯಾತರಿಗೆ ₹10,000 ಕೋಟಿ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಭರವಸೆ ನೀಡಿದ್ದರು ಆದರೆ ನಿನ್ನೆ ಮಂಡಿಸಿದ ಬಜೆಟ್ ನಲ್ಲಿ ಕೇವಲ
₹2100 ಕೋಟಿ ರೂಪಾಯಿ ನೀಡಿ ರಾಜ್ಯದ ಒಂದು ಕೋಟಿಯಷ್ಟಿರುವ ಅಲ್ಪಸಂಖ್ಯಾತರಿಗೆ ಅನ್ಯಾಯ ಮಾಡಿದ್ದಾರೆ ಎಂದು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾದ ರಾಜ್ಯಾಧ್ಯಕ್ಷ ಅಬ್ದುಲ್ ಮಜಿದ್ ಅಭಿಪ್ರಾಯಪಟ್ಟಿದ್ದಾರೆ
ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಡೆದ ಒಟ್ಟು ಮತದಲ್ಲಿ ದಲಿತರು ಮತ್ತು ಅಲ್ಪಸಂಖ್ಯಾತರ ನೀಡಿದ ಪಾಲು ಶೇ.60 ರಷ್ಟು ಆದರೆ ಬಜೆಟ್ನಲ್ಲಿ ಈ ಎರಡು ಸಮುದಾಯಗಳಿಗೂ ಸಿದ್ದರಾಮಯ್ಯ ಮೂಗಿಗೆ ತುಪ್ಪ ಸವರಿದ್ದಾರೆಂದು ಎಸ್ಡಿಪಿಐ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ಖಂಡನೆ ವ್ಯಕ್ತಪಡಿಸಿದ್ದಾರೆ.
ಕಾಂಗ್ರೆಸ್ ಪಕ್ಷದ ಅಭೂತಪೂರ್ವ ಗೆಲುವಿನಲ್ಲಿ ದಲಿತ ಮತ್ತು ಮುಸ್ಲಿಂ ಸಮುದಾಯದ ಪಾತ್ರ ದೊಡ್ಡದು. ಮುಸಲ್ಮಾನರ ಶೇ,9೦ ಹಾಗೂ ದಲಿತ ಸಮುದಾುಂದ ಶೇ 5೦ ಕ್ಕೂ ಹೆಚ್ಚು ಮತಗಳು ಕಾಂಗ್ರೆಸ್ ಮಡಿಲು ಸೇರಿದವು. ಇಷ್ಟು ದೊಡ್ಡ ಮಟ್ಟದಲ್ಲಿ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಿದ ಈ ಎರಡು ಸಮುದಾಯಗಳಿಗೆ ಸಿದ್ದರಾಮಯ್ಯನವರು ಇಂದು ಮಂಡಿಸಿದ ಬಜೆಟ್ ನಲ್ಲಿ ಹೊಸತೇನನ್ನು ನೀಡಿಲ್ಲ.
ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಬಿಜೆಪಿ ಸರ್ಕಾರ ಸ್ಥಗಿತಗೊಳಿಸಿದ್ದ ವಿದ್ಯಾರ್ಥಿವೇತನ ಮರು ಚಾಲನೆ ನೀಡಿದ್ದು , ಅಲ್ಪಸಂಖ್ಯಾತರ ವಸತಿ ನಿಲಯಗಳಿಗೆ ಅನುದಾನಗಳನ್ನು ಒದಗಿಸಿದ್ದು ಅಭಿನಂದನಾರ್ಹ. ಇದೇ ಸಂದರ್ಭದಲ್ಲಿ ಅಲ್ಪಸಂಖ್ಯಾತ ಸಮುದಾಯಕ್ಕೆ ಹೆಚ್ಚು ಹಣ ಒದಗಿಸಿಲ್ಲ. ಒಟ್ಟಾರೆ ₹2100 ಕೋಟಿ ರೂಗಳ ಅನುದಾನ ಒದಗಿಸಲಾಗಿದೆ.
ಇದು ಕರ್ನಾಟಕದ ಅಲ್ಪಸಂಖ್ಯಾತರ ಜನಸಂಖ್ಯೆಗೆ ಹೋಲಿಸಿದಾಗ ಬಹಳ ಕಡಿಮೆಯಾಗುತ್ತದೆ. ಅದೇ ರೀತಿ ದಲಿತ ಸಮುದಾುಂಕ್ಕೆ ಸ್ವಉದ್ಯೋಗ ಸ್ಥಾಪಿಸಲು ಸಾರಥಿ ಯೋಜನೆ ಯನ್ನುಹೊರತುಪಡಿಸಿ ವಿಶೇಷವಾದ ಯಾವುದೇ ನೆರವು ನೀಡಿಲ್ಲ ಎಂದು ಅಸವಾಧಾನ ವ್ಯಕ್ತಪಡಿಸಿರುವ ಅವರು, ದಲಿತ, ಅಲ್ಪಸಂಖ್ಯಾತರಿಗೆ ಚುನಾವಣೆಗೂ ಮುನ್ನ ಭಾರಿ ಆಶ್ವಾಸನೆ ನೀಡಿದ್ದ ಸಿದ್ದರಾಮಯ್ಯ ಈಗ ಅನುದಾನ ನೀಡದಿರುವುದು ತಪ್ಪು, ಮುಂದಿನ ದಿನಗಳಲ್ಲಿ ಮತ್ತಷ್ಟು ಹೆಚ್ಚಿನ ಅನುದಾನ ನೀಡಬೇಕು ಎಂದು ಅವರು ಒತ್ತಾಯಿಸಿದ್ದಾರೆ.
ಪೊಲೀಸರು CT ರವಿಯ ಮೇಲೆ FIR ಆಗಿರುವ ಕಾರಣ ಕಾನೂನಿನ ಪ್ರಕ್ರಿಯೆಯ ಭಾಗವಾಗಿ ನೋಟಿಸ್ ನೀಡಲು ತೆರಳಿದಾಗ, ಅವರ ಕರ್ತವ್ಯಕ್ಕೆ…
~ಮಜೀದ್ ತುಂಬೆ,ರಾಜ್ಯ ಪ್ರಧಾನ ಕಾರ್ಯದರ್ಶಿ, SDPI ಕರ್ನಾಟಕ SDPIKarnataka
ಬೆಂಗಳೂರು, ಜುಲೈ 21-2026ಬಿಡದಿ ಪ್ರದೇಶದಲ್ಲಿ ಪ್ರಸ್ತಾಪಿತ ಗ್ರೇಟರ್ ಬೆಂಗಳೂರು ಇಂಟಿಗ್ರೇಟೆಡ್ ಟೌನ್ಶಿಪ್ ಯೋಜನೆಯ ಸುತ್ತ ಜೆಡಿಎಸ್ ಮತ್ತು ಕಾಂಗ್ರೆಸ್ ನಾಯಕರ…
~ದೆಹ್ಲಾನ್ ಬಾಖವಿ,ರಾಷ್ಟ್ರೀಯ ಉಪಾಧ್ಯಕ್ಷರು SDPI SDPIKarnataka
Smt. Chennamma Ji wife of former Prime Minister Shri H.D. Deve Gowda Ji. Deeply pained…