1.ದಲಿತ ಸಮುದಾಯದ ಕಲ್ಯಾಣ ಯೋಜನೆಗಳಿಗಾಗಿ SCP-TSP ರೂಪದಲ್ಲಿ ಮೀಸಲಿಟ್ಟಿರುವ 11,000 ಕೋಟಿ ಹಣವನ್ನು ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆಗಳಿಗೆ ಬಳಸಿಕೊಳ್ಳುವ ನಿರ್ಣಯಕ್ಕೆ ಬಂದಿದೆ. ಪರಿಶಿಷ್ಟರಿಗೆ ಮೀಸಲಿಟ್ಟ ಹಣವನ್ನು ಅದೇ ಸಮುದಾಯದ ಗ್ಯಾರಂಟಿ ಯೋಜನೆಗಳಿಗೆ ಬಳಸಲಾಗುವುದು ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವರು ಸಮರ್ಥನೆ ನೀಡುತ್ತಿದ್ದಾರೆ. SC ಮತ್ತು ST ಗಳಿಗೆ ಒಟ್ಟು ಬಜೆಟ್ ಹಂಚಿಕೆಯಲ್ಲಿ 24.1 ರಷ್ಟು ಹಂಚಿಕೆಯನ್ನು ಖಚಿತಪಡಿಸಿಕೊಳ್ಳಲು ರಾಜ್ಯ ಸರ್ಕಾರ 2013 ರ ಕರ್ನಾಟಕ ಪರಿಶಿಷ್ಟ ಜಾತಿಗಳ ಉಪ-ಹಂಚಿಕೆ ಮತ್ತು ಬುಡಕಟ್ಟು-ಉಪ ಹಂಚಿಕೆ (ಯೋಜನೆ, ಹಂಚಿಕೆ ಮತ್ತು ಹಣಕಾಸು ಸಂಪನ್ಮೂಲಗಳ ಬಳಕೆ) ಕಾಯ್ದೆ ಮತ್ತು 2017 ರ ನಿಯಮಗಳನ್ನು ಅಂಗೀಕರಿಸಿ SCP-TSP ಗೆ ಮೀಸಲಿಟ್ಟ ಹಣವನ್ನು ಯಾವುದೇ ಕಾರಣಕ್ಕೂ ಬೇರೆ ಯಾವುದೇ ಉದ್ದೇಶಗಳಿಗೆ ಬಳಸಬಾರದು ಎಂದು ಈ ಹಿಂದೆ ಇದ್ದ ಸಿದ್ದರಾಮಯ್ಯ ಅವರ ಸರ್ಕಾರವೇ ಮಾಡಿದೆ. ಆದರೆ ಈಗ ಅದೇ ಸಿದ್ದರಾಮಯ್ಯನವರ ಸರ್ಕಾರ ಆ ಆದೇಶವನ್ನು ಗಾಳಿಗೆ ತೂರುತ್ತಿದೆ. ಗ್ಯಾರಂಟಿ ಯೋಜನೆಗಳು ರಾಜ್ಯದ ಎಲ್ಲ ಜನರಿಗೆ ಅನ್ವಯಿಸುವ ಯೋಜನೆಗಳು. ಅದಕ್ಕೆ ಬಜೆಟ್ ನಲ್ಲಿ ಪ್ರತ್ಯೇಕವಾಗಿ ಹಣ ಮೀಸಲಿಡಲಾಗಿದೆ. ಆ ಹಣದಿಂದಲೇ ಗ್ಯಾರಂಟಿಗಳಿಗೆ ಹಣ ಒದಗಿಸಬೇಕು. ದಲಿತ ಸಮುದಾಯಕ್ಕೆ ಮಿಸಲಿಟ್ಟಿರುವ ಹಣವನ್ನು ಕೇವಲ ಪೂರ್ವ ಉದ್ದೇಶಿತ ಯೋಜನೆಗಳಿಗೆ ಮಾತ್ರ ಬಳಸಬೇಕು. ರಾಜ್ಯ ಸರ್ಕಾರದ ಈ ನಡೆಯನ್ನು ಖಂಡಿಸುವ ಮತ್ತು ಈ ನಿರ್ಧಾರವನ್ನು ತಕ್ಷಣ ಹಿಂಪಡೆಯಬೇಕು ಎಂಬ ಒತ್ತಾಯ ಮಾಡಲಉ ನಿರ್ಧರಿಸಲಾಯಿತು.
Announcement AYESHA SHABBIR 25/02/26, WEDNESDAY @1:30 Pm ZOHAR Namaz @MASJID-E-UQBA Saraipalya, THANISANDRA, BANGALORE Scan for…
We are deeply saddened by the demise of AYESHA MADAM SWC Member and WIM State…
ಭಾರತದ ಸ್ವಾಭಿಮಾನದ ಸಂಕೇತವಾಗಿ, ಬ್ರಿಟಿಷರ ದಮನಕ್ಕೆ ತಲೆಬಾಗದೆ ಹೋರಾಡಿದ ಧೈರ್ಯಶಾಲಿ ವೀರನಾರಿ ಕಿತ್ತೂರು ರಾಣಿ ಚೆನ್ನಮ್ಮ ಅವರ ಪುಣ್ಯತಿಥಿಯಂದು ಅವರ…
~ರಮಜಾನ ಕಡಿವಾಲ,ರಾಜ್ಯ ಕಾರ್ಯದರ್ಶಿ SDPIKarnataka #Bagalkot