ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಕರ್ನಾಟಕ ರಾಜ್ಯ ಕಾರ್ಯದರ್ಶಿ ಮಂಡಳಿಯ ಎರಡು ದಿನಗಳ (ದಿನಾಂಕ 01.08.2023- 02.03.2023) ಸಭೆಯಲ್ಲಿ ಕೈಗೊಂಡ ನಿರ್ಣಯಗಳು.

1.ದಲಿತ ಸಮುದಾಯದ ಕಲ್ಯಾಣ ಯೋಜನೆಗಳಿಗಾಗಿ SCP-TSP ರೂಪದಲ್ಲಿ ಮೀಸಲಿಟ್ಟಿರುವ 11,000 ಕೋಟಿ ಹಣವನ್ನು ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆಗಳಿಗೆ ಬಳಸಿಕೊಳ್ಳುವ ನಿರ್ಣಯಕ್ಕೆ ಬಂದಿದೆ. ಪರಿಶಿಷ್ಟರಿಗೆ ಮೀಸಲಿಟ್ಟ ಹಣವನ್ನು ಅದೇ ಸಮುದಾಯದ ಗ್ಯಾರಂಟಿ ಯೋಜನೆಗಳಿಗೆ ಬಳಸಲಾಗುವುದು ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವರು ಸಮರ್ಥನೆ ನೀಡುತ್ತಿದ್ದಾರೆ. SC ಮತ್ತು ST ಗಳಿಗೆ ಒಟ್ಟು ಬಜೆಟ್ ಹಂಚಿಕೆಯಲ್ಲಿ 24.1 ರಷ್ಟು ಹಂಚಿಕೆಯನ್ನು ಖಚಿತಪಡಿಸಿಕೊಳ್ಳಲು ರಾಜ್ಯ ಸರ್ಕಾರ 2013 ರ ಕರ್ನಾಟಕ ಪರಿಶಿಷ್ಟ ಜಾತಿಗಳ ಉಪ-ಹಂಚಿಕೆ ಮತ್ತು ಬುಡಕಟ್ಟು-ಉಪ ಹಂಚಿಕೆ (ಯೋಜನೆ, ಹಂಚಿಕೆ ಮತ್ತು ಹಣಕಾಸು ಸಂಪನ್ಮೂಲಗಳ ಬಳಕೆ) ಕಾಯ್ದೆ ಮತ್ತು 2017 ರ ನಿಯಮಗಳನ್ನು ಅಂಗೀಕರಿಸಿ SCP-TSP ಗೆ ಮೀಸಲಿಟ್ಟ ಹಣವನ್ನು ಯಾವುದೇ ಕಾರಣಕ್ಕೂ ಬೇರೆ ಯಾವುದೇ ಉದ್ದೇಶಗಳಿಗೆ ಬಳಸಬಾರದು ಎಂದು ಈ ಹಿಂದೆ ಇದ್ದ ಸಿದ್ದರಾಮಯ್ಯ ಅವರ ಸರ್ಕಾರವೇ ಮಾಡಿದೆ. ಆದರೆ ಈಗ ಅದೇ ಸಿದ್ದರಾಮಯ್ಯನವರ ಸರ್ಕಾರ ಆ ಆದೇಶವನ್ನು ಗಾಳಿಗೆ ತೂರುತ್ತಿದೆ. ಗ್ಯಾರಂಟಿ ಯೋಜನೆಗಳು ರಾಜ್ಯದ ಎಲ್ಲ ಜನರಿಗೆ ಅನ್ವಯಿಸುವ ಯೋಜನೆಗಳು. ಅದಕ್ಕೆ ಬಜೆಟ್ ನಲ್ಲಿ ಪ್ರತ್ಯೇಕವಾಗಿ ಹಣ ಮೀಸಲಿಡಲಾಗಿದೆ. ಆ ಹಣದಿಂದಲೇ ಗ್ಯಾರಂಟಿಗಳಿಗೆ ಹಣ ಒದಗಿಸಬೇಕು. ದಲಿತ ಸಮುದಾಯಕ್ಕೆ ಮಿಸಲಿಟ್ಟಿರುವ ಹಣವನ್ನು ಕೇವಲ ಪೂರ್ವ ಉದ್ದೇಶಿತ ಯೋಜನೆಗಳಿಗೆ ಮಾತ್ರ ಬಳಸಬೇಕು. ರಾಜ್ಯ ಸರ್ಕಾರದ ಈ ನಡೆಯನ್ನು ಖಂಡಿಸುವ ಮತ್ತು ಈ ನಿರ್ಧಾರವನ್ನು ತಕ್ಷಣ ಹಿಂಪಡೆಯಬೇಕು ಎಂಬ ಒತ್ತಾಯ ಮಾಡಲಉ ನಿರ್ಧರಿಸಲಾಯಿತು.

  1. ದೇಶದ ಹಲವು ರಾಜ್ಯ ಮತ್ತು ಭಾಗಗಳಲ್ಲಿ ಮತೀಯ ಸಂಘರ್ಷ ಮತ್ತು ಜನಾಂಗೀಯ ಗಲಭೆಗಳು ಭುಗಿಲೆದ್ದಿವೆ. ಮಣಿಪುರದ ಹಿಂಸಾಚಾರ, ಹರಿಯಾಣಾದ ಕೋಮು ಗಲಭೆಗಳು ಮತ್ತು RPF ಯೋಧನಿಂದ ಮಹಾರಾಷ್ಟ್ರದಲ್ಲಿ ರೈಲಿನಲ್ಲಿ ನಡೆದ ನರಹತ್ಯೆ ಪ್ರಕರಣಗಳು ದೇಶವನ್ನು ಬೆಚ್ಚಿ ಬೀಳಿಸಿವೆ. ಈ ಎಲ್ಲ ಹಿಂಸಾಚಾರವನ್ನು ಎಸ್.ಡಿ.ಪಿ.ಐ ಖಂಡಿಸುತ್ತದೆ. ಈ ಘಟನೆಗಳನ್ನು ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ ಹಮ್ಮಿಕೊಳ್ಳಲು ನಿರ್ಧರಿಸಲಾಗಿದೆ. ರೈಲಿನಲ್ಲಿ RPF ಯೋಧನ ಹತ್ಯಾಕಾಂಡಕ್ಕೆ ಬಲಿಯಾದವರಲ್ಲಿ ಒಬ್ಬರು ಕರ್ನಾಟಕದ ಬೀದರ್ ಜಿಲ್ಲೆಯವರು. ಅವರ ಕುಟುಂಬಕ್ಕೆ ರಾಜ್ಯ ಸರ್ಕಾರ 10 ಲಕ್ಷ ಪರಿಹಾರ ಘೋಷಿಸಿದೆ. ಆದರೆ ಇದು ತುಂಬಾ ಕಡಿಮೆಯಾಗಿದ್ದು, ರಾಜ್ಯ ಸರ್ಕಾರ ಕನಿಷ್ಠ 25 ಲಕ್ಷ ಪರಿಹಾರ ಒದಗಿಸಬೇಕು ಮತ್ತು ಕೇಂದ್ರ ಸರ್ಕಾರವೂ ಅದೇ ಮಟ್ಟದ ಪರಿಹಾರ ಒದಗಿಸಬೇಕು ಎಂದು ಸರ್ಕಾರಗಳನ್ನು ಒತ್ತಾಯಿಸುವ ನಿರ್ಣಯವನ್ನು ಸಭೆಯಲ್ಲಿ ಕೈಗೊಳ್ಳಲಾಯಿತು.
  2. ಆಗಸ್ಟ್ 9 ರಂದು ವಿಶ್ವ ಆದಿವಾಸಿ ದಿನ ದ ಅಂಗವಾಗಿ, ಸ್ವಾತಂತ್ರ್ಯ ಪಡೆದು 7 ದಶಕಗಳ ಕಳೆದರೂ ಕನಿಷ್ಠ ಮೂಲಭೂತ ಸೌಕರ್ಯಗಳಿಂದ ವಂಚಿತರಾಗಿ ಬದುಕುತ್ತಿರುವ ಆದಿವಾಸಿಗಳ ಬದುಕು ಮತ್ತು ಬವಣೆ ಬಗ್ಗೆ ಚರ್ಚೆ ನಡೆಸಿ, ವಿಶ್ವ ಆದಿವಾಸಿ ದಿನವನ್ನು ಅರ್ಥಪೂರ್ಣವಾಗಿ ಆಚರಿಸಲು ಮತ್ತು ಆ ಮೂಲಕ ಆದಿವಾಸಿಗಳ ಸಮಸ್ಯೆಗಳ ಬಗ್ಗೆ ಸರ್ಕಾರದ ಗಮನ ಸೆಳೆಯಲು ತೀರ್ಮಾನಿಸಲಾಯಿತು.
  3. ಚಿಕ್ಕಮಗಳೂರು ಜಿಲ್ಲೆಯ ಬಾಬಾಬುಡನ್ ಗಿರಿ ದರ್ಗಾದಲ್ಲಿ ಬಿಜೆಪಿ ಸರ್ಕಾರದ ಅವಧಿಯಲ್ಲಿ ಜಾರಿಗೆ ತಂದಿರುವ ಹೊಸ ಆಚರಣೆಗಳನ್ನು ಹಿಂಪಡೆದು 1975ಕ್ಕಿಂತ ಮೊದಲು ಜಾರಿಯಲ್ಲಿದ್ದ ಆಚರಣೆಗಳನ್ನು ಯಥಾವತ್ ನಡೆಸಲು ಅವಕಾಶ ಕಲ್ಪಿಸಬೇಕು. ಬಾಬಾಬುಡನ್ಗಿರಿ ದರ್ಗಾ ವಿವಾದ ಸಂಬಂಧ ಸಿವಿಲ್ ಕೋರ್ಟ್, ಹೈಕೋರ್ಟ್ ಮತ್ತು ಸುಪ್ರೀಂಕೋರ್ಟ್ ಮತ್ತು ಜಸ್ಟೀಸ್ ನಾಗಮೋಹನ್ ದಾಸ್ ವರದಿಯಂತೆ 1975ಕ್ಕಿಂತ ಹಿಂದಿನ ಆಚರಣೆಗಳಿಗೆ ಕಾಂಗ್ರೆಸ್ ಸರ್ಕಾರ ಅವಕಾಶ ಕಲ್ಪಿಸಬೇಕು ಎಂದು ಒತ್ತಾಯಿಸುವ ನಿರ್ಣಯವನ್ನು ಸಭೆಯಲ್ಲಿ ಕೈಗೊಳ್ಳಲಾಯಿತು.
  4. ಪ್ರಸ್ತುತ ಭಾರತದ ರಾಜಕೀಯ ವ್ಯವಸ್ಥೆಯಲ್ಲಿ, ಕೋಮುವಾದಿ ರಾಜಕಾರಣ ಜಾತಿ ರಾಜಕಾರಣ ಸ್ವಜನ ಪಕ್ಷಪಾತ ಮಿತಿಮೀರಿದೆ.
    ರಾಷ್ಟ್ರದಲ್ಲಿ ಮಿತಿಮೀರಿರುವ ಭ್ರಷ್ಟಾಚಾರವನ್ನು ಸಂಪೂರ್ಣ ತೊಡೆದು ಹಾಕಲು ಕಾಂಗ್ರೆಸ್ ಬಿಜೆಪಿ ಇತ್ಯಾದಿ ಪಕ್ಷಗಳಿಗೆ ಯಾವುದೇ ಬದ್ಧತೆ ಇಲ್ಲ.
    ಅದರಲ್ಲೂ ವಿಶೇಷವಾಗಿ ಅಲ್ಪಸಂಖ್ಯಾತರ ದಲಿತರ ಮತ್ತು ಆದಿವಾಸಿಗಳ ಹಿತ ರಕ್ಷಣೆಯಲ್ಲಿ ಎಲ್ಲಾ ಪಕ್ಷಗಳು ವಿಫಲವಾಗಿವೆ. ರಾಷ್ಟ್ರಕ್ಕೆ ಜನಪರ ಪಕ್ಷವೊಂದರ ಅನಿವಾರ್ಯತೆ ಇದೆ. ಪರ್ಯಾಯ ರಾಜಕಾರಣಕ್ಕೆ ಶಕ್ತಿ ತುಂಬಲು ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ನಿರ್ಧರಿಸಲಾಯಿತು
admin

Recent Posts

“Everyone’s Contribution is Essential for Social Transformation – Afsar Kodlipete”

Press Release Gulbarga, Sept 11:At the SDPI leaders’ meeting held in Gulbarga today, the party’s…

1 day ago

ಪತ್ರಿಕಾ ಪ್ರಕಟಣೆ<br><br>“ಸಮಾಜ ಪರಿವರ್ತನೆಗೆ ಪ್ರತಿಯೊಬ್ಬರ ಕೊಡುಗೆ ಅಗತ್ಯ – ಅಪ್ಸರ್ ಕೊಡ್ಲಿಪೇಟೆ”<br><br>ಗುಲ್ಬರ್ಗಾ, ಸೆಪ್ಟೆಂಬರ್ 11:<br>ಇಂದು ಗುಲ್ಬರ್ಗಾದಲ್ಲಿ ನಡೆದ ಎಸ್‌ಡಿಪಿಐ ನಾಯಕರ ಸಭೆಯಲ್ಲಿ, ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಅಪ್ಸರ್ ಕೊಡ್ಲಿಪೇಟೆ ಅವರು “ಸಮಾಜ ಪರಿವರ್ತನೆಗೆ ಪ್ರತಿಯೊಬ್ಬರ ಕೊಡುಗೆ” ಎಂಬ ವಿಷಯದ ಕುರಿತು ಪ್ರಮುಖ ಭಾಷಣ ಮಾಡಿದರು.<br><br>ತಮ್ಮ ಭಾಷಣದಲ್ಲಿ ಅವರು ಹೇಳಿದರು:<br>“ಸಮಾಜದಲ್ಲಿ ಬದಲಾವಣೆ ತರಲು ಕೇವಲ ಕನಸು ಕಾಣುವುದು ಸಾಕಾಗುವುದಿಲ್ಲ. ಪ್ರತಿಯೊಬ್ಬರೂ ತಮ್ಮದೇ ಆದ ಕೊಡುಗೆಯನ್ನು ನೀಡಿದಾಗ ಮಾತ್ರ ನಿಜವಾದ ಬದಲಾವಣೆ ಸಾಧ್ಯ. ಬದಲಾವಣೆಯ ಹಾದಿ ದೀರ್ಘ ಮತ್ತು ಕಠಿಣವಾಗಿದ್ದರೂ, ಇದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ. ನ್ಯಾಯ, ಸಮಾನತೆ ಮತ್ತು ಸಹೋದರತ್ವವನ್ನು ಸ್ಥಾಪಿಸಲು ನಂಬಿಕೆ, ಶ್ರಮ ಮತ್ತು ಬದ್ಧತೆ ಅಗತ್ಯ. ಎಸ್‌ಡಿಪಿಐ ಸದಸ್ಯರು ತಮ್ಮ ಸಮಯ, ಶಕ್ತಿ ಮತ್ತು ಸಂಪನ್ಮೂಲಗಳನ್ನು ಸಮಾಜಮುಖಿ ಹೋರಾಟಗಳಿಗೆ ಸಮರ್ಪಿಸಬೇಕು.”<br><br>“ಇಂದಿಗೂ ಸಾವಿರಾರು ಹಿಂದುಳಿದವರು, ಅಲ್ಪಸಂಖ್ಯಾತರು ಮತ್ತು ಬಡವರು ನ್ಯಾಯಕ್ಕಾಗಿ ಹೋರಾಟ ನಡೆಸುತ್ತಿದ್ದಾರೆ. ಅವರ ಹಕ್ಕುಗಳಿಗಾಗಿ ನಮ್ಮ ಕಾರ್ಯಕರ್ತರು ಪೊಲೀಸ್ ದೌರ್ಜನ್ಯ, ಸುಳ್ಳು ಕೇಸುಗಳು ಮತ್ತು ಬಂಧನಗಳನ್ನು ಸಹಿಸಿಕೊಂಡಿದ್ದಾರೆ. ಇದು ಅವರ ಬದ್ಧತೆಯ ಸಾಕ್ಷಿಯಾಗಿದೆ. ಎಸ್‌ಡಿಪಿಐ ಕೇವಲ ರಾಜಕೀಯ ಪಕ್ಷವಲ್ಲ, ಇದು ಶೋಷಿತರ ಕೂಗಿನ ಪ್ರತಿಧ್ವನಿ, ಸಾಮಾನ್ಯ ಜನರ ಕನಸುಗಳ ಪ್ರತೀಕ. ಹೀಗಾಗಿ ಪ್ರತಿಯೊಬ್ಬ ನಾಯಕ, ಕಾರ್ಯಕರ್ತ ಮತ್ತು ಅಭಿಮಾನಿ ತಮ್ಮ ಪಾತ್ರವನ್ನು ಅರಿತು, ಈ ಬದಲಾವಣೆಯ ಹಾದಿಯಲ್ಲಿ ತಮ್ಮದೇ ಆದ ಕೊಡುಗೆಯನ್ನು ನೀಡಬೇಕು,” ಎಂದು ಅವರು ಒತ್ತಿಹೇಳಿದರು.<br><br>ಸಭೆಯಲ್ಲಿ ಕಲಬುರಗಿ ಜಿಲ್ಲೆಯ ರೈತರ ಮೇಲಿನ ನಡೆಯುತ್ತಿರುವ ವಂಚನೆಗಳ ವಿಷಯವೂ ಚರ್ಚಿಸಲಾಯಿತು. ರೈತ ಸಂಪರ್ಕ ಕೇಂದ್ರಗಳಲ್ಲಿ ಅವಧಿ ಮೀರಿದ ಕ್ರಿಮಿನಾಶಕ ಮತ್ತು ಗೊಬ್ಬರಗಳನ್ನು ರೈತರಿಗೆ ಮಾರಾಟ ಮಾಡಲಾಗುತ್ತಿದೆ. ಕೆಲ ಅಂಗಡಿಗಳು ಎಂಆರ್‌ಪಿ ದರಕ್ಕಿಂತ ಎರಡು ಪಟ್ಟು ಹಣ ಪಡೆದು ಗೊಬ್ಬರವನ್ನು ಮಾರಾಟ ಮಾಡುತ್ತಿರುವುದು ಗಂಭೀರ ಅನ್ಯಾಯವಾಗಿದೆ ಎಂದು ಜಿಲ್ಲಾಧ್ಯಕ್ಷ ಮೊಹಮ್ಮದ್ ಮೋಹಿಸಿನ್ ಖಂಡಿಸಿದರು. ರೈತರನ್ನು ಮೋಸಗೊಳಿಸಿದ ಅಂಗಡಿ ಮಾಲೀಕರು ಮತ್ತು ಕೃಷಿ ಇಲಾಖೆಯ ನಿರ್ಲಕ್ಷ್ಯಕ್ಕೆ ವಿರುದ್ಧವಾಗಿ ತಕ್ಷಣ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಸಭೆಯಲ್ಲಿ ಒತ್ತಾಯಿಸಲಾಯಿತು.<br><br>ಇದರ ಜೊತೆಗೆ ರೈತರ ಸಂಕಷ್ಟ, ನಿರುದ್ಯೋಗ, ಶಿಕ್ಷಣ ಮತ್ತು ಆರೋಗ್ಯದ ವಿಚಾರಗಳ ಮೇಲೂ ಚರ್ಚೆ ನಡೆಯಿತು.<br><br>ಈ ಸಂದರ್ಭದಲ್ಲಿ ಎಸ್‌ಡಿಪಿಐ ರಾಷ್ಟ್ರೀಯ ಸಮಿತಿ ಸದಸ್ಯೆ ಪ್ರೊಫೆಸರ್ ಸೈಯದಾ ಸಾದಿಯಾ ಹಾಗೂ ರಾಜ್ಯ ಸಮಿತಿ ಸದಸ್ಯ ಅಬ್ದುಲ್ ರಹೀಮ್ ಪಟೇಲ್ ರವರು ಸಂಘಟನೆಯ ಬಲವರ್ಧನೆ ಮತ್ತು ನಿಧಿ ಸಂಗ್ರಹಣೆಯ ಅಗತ್ಯತೆಯ ಕುರಿತು ಮಾತನಾಡಿದರು.<br><br>ಜಿಲ್ಲಾ ಉಪಾಧ್ಯಕ್ಷ ಮಕ್ಬೂಲ್ ಅಹ್ಮದ್, ಪ್ರಧಾನ ಕಾರ್ಯದರ್ಶಿಗಳಾದ ಡಾ. ರಿಜ್ವಾನ್ ಮತ್ತು ಇಬ್ರಾಹಿಂ ಪಟೇಲ್, ವುಮೆನ್ ಇಂಡಿಯಾ ಮೂವ್‌ಮೆಂಟ್ ಜಿಲ್ಲಾ ಅಧ್ಯಕ್ಷೆ ಸೇರಿದಂತೆ ಜಿಲ್ಲಾ ಸಮಿತಿ ಸದಸ್ಯರು ಮತ್ತು ವಿಧಾನಸಭಾ ಕ್ಷೇತ್ರ ಮಟ್ಟದ ನಾಯಕರು ಸಕ್ರಿಯವಾಗಿ ಪಾಲ್ಗೊಂಡಿದ್ದರು.

1 day ago

بار بار آر ایس ایس کے جال میں پھنستی ہوئی ریاستی کانگریس حکومت ۔قربانی کے بکرے بن رہے ہیں مسلمان

پریس ریلیز بنگلورو : 10 ستمبر : کرناٹک میں کانگریس حکومت تقریباً 95% مسلم برادری…

2 days ago

PRESS RELEASE

BAAR BAAR RSS KE JAAL MEIN PHANS'TI HUI RIYAASTI CONGRESS HUKUMAT -QURBANI KE BAKRAY BAN…

2 days ago

ಪತ್ರಿಕಾ ಪ್ರಕಟಣೆ

ಮತ್ತೆ ಮತ್ತೆ ಆರ್ ಎಸ್ಎಸ್ ಖೇಡ್ದಾಕ್ಕೆ ಬೀಳುತ್ತಿರುವ ರಾಜ್ಯ ಕಾಂಗ್ರೇಸ್ ಸರ್ಕಾರ - ಬಲಿ ಪಶುಗಳಾಗುತ್ತಿರುವ ಮುಸ್ಲಿಮರು ಬೆಂಗಳೂರು :…

2 days ago

ರಾಯಚೂರು ನಾಯಕರ ಸಭೆ

ರಾಯಚೂರಿನಲ್ಲಿ ನಡೆದ ನಾಯಕರ ಸಭೆಯಲ್ಲಿ ರಾಜ್ಯ ಉಪಾಧ್ಯಕ್ಷರಾದ ಅಬ್ದುಲ್ ಹನ್ನಾನ್, ರಾಜ್ಯ ನಾಯಕರು ಅಬ್ದುಲ್ ರಹೀಮ್ ಪಟೇಲ್ ಹಾಗೂ ಅಕ್ಟರ್‌…

5 days ago