1.ದಲಿತ ಸಮುದಾಯದ ಕಲ್ಯಾಣ ಯೋಜನೆಗಳಿಗಾಗಿ SCP-TSP ರೂಪದಲ್ಲಿ ಮೀಸಲಿಟ್ಟಿರುವ 11,000 ಕೋಟಿ ಹಣವನ್ನು ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆಗಳಿಗೆ ಬಳಸಿಕೊಳ್ಳುವ ನಿರ್ಣಯಕ್ಕೆ ಬಂದಿದೆ. ಪರಿಶಿಷ್ಟರಿಗೆ ಮೀಸಲಿಟ್ಟ ಹಣವನ್ನು ಅದೇ ಸಮುದಾಯದ ಗ್ಯಾರಂಟಿ ಯೋಜನೆಗಳಿಗೆ ಬಳಸಲಾಗುವುದು ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವರು ಸಮರ್ಥನೆ ನೀಡುತ್ತಿದ್ದಾರೆ. SC ಮತ್ತು ST ಗಳಿಗೆ ಒಟ್ಟು ಬಜೆಟ್ ಹಂಚಿಕೆಯಲ್ಲಿ 24.1 ರಷ್ಟು ಹಂಚಿಕೆಯನ್ನು ಖಚಿತಪಡಿಸಿಕೊಳ್ಳಲು ರಾಜ್ಯ ಸರ್ಕಾರ 2013 ರ ಕರ್ನಾಟಕ ಪರಿಶಿಷ್ಟ ಜಾತಿಗಳ ಉಪ-ಹಂಚಿಕೆ ಮತ್ತು ಬುಡಕಟ್ಟು-ಉಪ ಹಂಚಿಕೆ (ಯೋಜನೆ, ಹಂಚಿಕೆ ಮತ್ತು ಹಣಕಾಸು ಸಂಪನ್ಮೂಲಗಳ ಬಳಕೆ) ಕಾಯ್ದೆ ಮತ್ತು 2017 ರ ನಿಯಮಗಳನ್ನು ಅಂಗೀಕರಿಸಿ SCP-TSP ಗೆ ಮೀಸಲಿಟ್ಟ ಹಣವನ್ನು ಯಾವುದೇ ಕಾರಣಕ್ಕೂ ಬೇರೆ ಯಾವುದೇ ಉದ್ದೇಶಗಳಿಗೆ ಬಳಸಬಾರದು ಎಂದು ಈ ಹಿಂದೆ ಇದ್ದ ಸಿದ್ದರಾಮಯ್ಯ ಅವರ ಸರ್ಕಾರವೇ ಮಾಡಿದೆ. ಆದರೆ ಈಗ ಅದೇ ಸಿದ್ದರಾಮಯ್ಯನವರ ಸರ್ಕಾರ ಆ ಆದೇಶವನ್ನು ಗಾಳಿಗೆ ತೂರುತ್ತಿದೆ. ಗ್ಯಾರಂಟಿ ಯೋಜನೆಗಳು ರಾಜ್ಯದ ಎಲ್ಲ ಜನರಿಗೆ ಅನ್ವಯಿಸುವ ಯೋಜನೆಗಳು. ಅದಕ್ಕೆ ಬಜೆಟ್ ನಲ್ಲಿ ಪ್ರತ್ಯೇಕವಾಗಿ ಹಣ ಮೀಸಲಿಡಲಾಗಿದೆ. ಆ ಹಣದಿಂದಲೇ ಗ್ಯಾರಂಟಿಗಳಿಗೆ ಹಣ ಒದಗಿಸಬೇಕು. ದಲಿತ ಸಮುದಾಯಕ್ಕೆ ಮಿಸಲಿಟ್ಟಿರುವ ಹಣವನ್ನು ಕೇವಲ ಪೂರ್ವ ಉದ್ದೇಶಿತ ಯೋಜನೆಗಳಿಗೆ ಮಾತ್ರ ಬಳಸಬೇಕು. ರಾಜ್ಯ ಸರ್ಕಾರದ ಈ ನಡೆಯನ್ನು ಖಂಡಿಸುವ ಮತ್ತು ಈ ನಿರ್ಧಾರವನ್ನು ತಕ್ಷಣ ಹಿಂಪಡೆಯಬೇಕು ಎಂಬ ಒತ್ತಾಯ ಮಾಡಲಉ ನಿರ್ಧರಿಸಲಾಯಿತು.
ಪೊಲೀಸರು CT ರವಿಯ ಮೇಲೆ FIR ಆಗಿರುವ ಕಾರಣ ಕಾನೂನಿನ ಪ್ರಕ್ರಿಯೆಯ ಭಾಗವಾಗಿ ನೋಟಿಸ್ ನೀಡಲು ತೆರಳಿದಾಗ, ಅವರ ಕರ್ತವ್ಯಕ್ಕೆ…
~ಮಜೀದ್ ತುಂಬೆ,ರಾಜ್ಯ ಪ್ರಧಾನ ಕಾರ್ಯದರ್ಶಿ, SDPI ಕರ್ನಾಟಕ SDPIKarnataka
ಬೆಂಗಳೂರು, ಜುಲೈ 21-2026ಬಿಡದಿ ಪ್ರದೇಶದಲ್ಲಿ ಪ್ರಸ್ತಾಪಿತ ಗ್ರೇಟರ್ ಬೆಂಗಳೂರು ಇಂಟಿಗ್ರೇಟೆಡ್ ಟೌನ್ಶಿಪ್ ಯೋಜನೆಯ ಸುತ್ತ ಜೆಡಿಎಸ್ ಮತ್ತು ಕಾಂಗ್ರೆಸ್ ನಾಯಕರ…
~ದೆಹ್ಲಾನ್ ಬಾಖವಿ,ರಾಷ್ಟ್ರೀಯ ಉಪಾಧ್ಯಕ್ಷರು SDPI SDPIKarnataka