Categories: featureNewsPolitics

ಆಗಸ್ಟ್ 9 ರಂದು ‘ವಿಶ್ವ ಬುಡಕಟ್ಟು ಜನರ ಅಂತರಾಷ್ಟ್ರೀಯ ದಿನ’ ದಂದು ಎಸ್‌ಡಿಪಿಐ ಪಕ್ಷ ದೇಶಾದ್ಯಂತ ವಿಶ್ವ ಆದಿವಾಸಿ ಸ್ವಾಭಿಮಾನಿ ದಿನ ಎಂದು ಆಚರಿಸುತ್ತಿದ್ದು ಇದರ ಅಂಗವಾಗಿ ಹುಬ್ಬಳ್ಳಿ ಜಿಲ್ಲಾ ಸಮಿತಿ ವತಿಯಿಂದ ಅಕ್ಕನ ಬಳಗ ಸಭಾಭವನದಲ್ಲಿ ‘ಆಧುನಿಕ ಭಾರತದಲ್ಲಿ ಆದಿವಾಸಿಗಳ ಬದುಕು ಮತ್ತು ಭವಿಷ್ಯದ ಸವಾಲುಗಳು’ ಎಂಬ ವಿಷಯದ ಕುರಿತು ವಿಚಾರ ಸಂಕಿರಣ ಆಯೋಜಿಸಲಾಗಿತ್ತು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಪಕ್ಷದ ಜಿಲ್ಲಾ ಉಪಾಧ್ಯಕ್ಷರಾದ ಡಾ. ವಿಜಯ್ ಎಮ್ ಗುಂಟ್ರಾಳ ಅವರು ಶತ ಶತಮಾನಗಳಿಂದ ಭಾರತ ದೇಶದ ಮೂಲನಿವಾಸಿಗಳು ನೆಲ ಸಂಸ್ಕೃತಿ ತಳ ಸಮುದಾಯಗಳ ಆಚಾರ ವಿಚಾರಗಳನ್ನು ವಾಲಿಸುತ್ತಾ ನೈಸರ್ಗಿಕ ಸಂಪತ್ತುಗಳು ಹಾಗೂ ಧಾರ್ಮಿಕ ಆಚರಣೆಯನ್ನು ರಕ್ಷಣೆ ಮಾಡಿದ್ದಾರೆ 75 ವರ್ಷಗಳ ಸ್ವತಂತ್ರ ಭಾರತದಲ್ಲಿ ಇಂದಿಗೂ ಸಂವಿಧಾನ ಬದ್ಧ ಹಕ್ಕು ಅಧಿಕಾರ ಸೌಲಭ್ಯಗಳಿಂದ ಅಲೆಮಾರಿಗಳಿಗೆ ವಂಚನೆ ಮಾಡಿರುವುದು ನಾಗರೀಕ ಸಮಾಜ ತಲೆ ತಗ್ಗಿಸುವ ವಿಚಾರಗಿದೆ. ಆಳುವ ಸರ್ಕಾರಗಳು ದೇಶದ ಪ್ರಜೆಗಳಿಗೆ ಘನತೆಯ ಬದುಕನ್ನು ಕಟ್ಟಿಕೊಡುವುದು ಸರ್ಕಾರದ ಜವಾಬ್ದಾರಿಯಾಗಿದೆ ಮುಂದಿನ ದಿನಗಳಲ್ಲಿ ಪಕ್ಷವು ದೇಶಾದ್ಯಂತ ಧ್ವನಿ ಇಲ್ಲದ ಇಂತಹ ಅಲೆಮಾರಿ ಸಮುದಾಯಗಳ ಪರವಾಗಿ ಸಂವಿಧಾನ ಬದ್ಧ ಹಕ್ಕು ಅಧಿಕಾರ ಸೌಲಭ್ಯಗಳನ್ನು ದೊರಕಿಸಿಕೊಡಲು ಮುಂದಾಗುತ್ತದೆ ಎಂದು ತಿಳಿಸಿದರು.

ಎಸ್‌ಡಿಪಿಐ ರಾಜ್ಯ ಪ್ರಧಾನ ಕಾರ್ಯದರ್ಶಿ ಅಪ್ಸರ್ ಕೊಡ್ಲಿಪೇಟೆ ನಿರ್ಣಯಗಳನ್ನು ಮಂಡಿಸಿದರು. ಪಕ್ಷದ ಜಿಲ್ಲಾ ಅಧ್ಯಕ್ಷರಾದ ಮತ್ತು ಹುಸನ್ ಹೊಸಮನಿ ಸುಡಗಾಡ ಸಿದ್ದರು, ಸಮುದಾಯದ ಅಧ್ಯಕ್ಷರಾದ ರಾಮಯ್ಯ ಡೋಕ್ಕನವರ, ಬುಡಗ ಜಂಗಮ ಸಮುದಾಯದ ಅಧ್ಯಕ್ಷರಾದ ರಾಮಕುಮಾರ್ ಮಹಾಂತ್, ಶಿಳ್ಳಿ ಖ್ಯಾತನ್ ಸಮುದಾಯದ ಜಿಲ್ಲಾ ಮುಖಂಡರಾದ ಮಾರುತಿ ಕಟ್ಟಿಮನಿ, ಹನುಮಂತಪ್ಪ ಪುಲಾವಿ, ಚಂದ್ರಶೇಖರ ಮಹಾಂತ್ ಶಿವಶಂಕರ್ ಭಂಡಾರಿ ಪಕ್ಷದ ಪ್ರಧಾನ ಕಾರ್ಯದರ್ಶಿ ಗಪ್ಪು‌ ಅಹ್ಮದ್ ಕುರಟ್ಟಿ, ಸಮೀರ್ ಬೆಟಗೇರಿ, ರಫೀಕ್ ಲಷ್ಕರ್ ಹಮೀದ್ ಬಂಗಾಲಿ ಮಲಿಕ್ ಕಳಸ್ ಇನ್ನು ಮುಂತಾದ ನೂರಾರು ಜನರು ಉಪಸ್ಥಿತರಿದ್ದರು.

admin

Recent Posts

باوقار سياست کے لیے

میں شامل ہوں SDPI 10 ΜΑΥ 2026 ΤΟ 25 MAY 2026 ممبر شپ کیمپین SDPIKarnataka…

11 hours ago

Join SDPI For politics of DIGNITY

10 ΜΑΥ 2026 ΤΟ 25 MAY 2026 MEMBERSHIP CAMPAIGN Social Democratic Party of India -Karnataka…

11 hours ago

ಪತ್ರಿಕಾ ಪ್ರಕಟಣೆ – SDPI, ಕರ್ನಾಟಕ.

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು, ಹಣದ ಬಲ ಮತ್ತು ರಾಜ್ಯ ಯಂತ್ರಾಂಗದ ಬಹಿರಂಗ ದುರುಪಯೋಗದ ಮೂಲಕ ಪಡೆದ…

7 days ago

ಶಹೀದ್ ಟಿಪ್ಪುಸುಲ್ತಾನ್

ಹುತಾತ್ಮ ದಿನ 04 ಮೇ "ನೂರು ವರ್ಷ ನರಿಯಾಗಿ ಬದುಕುವುದಕ್ಕಿಂತ ಒಂದು ದಿನ ಹುಲಿಯಾಗಿ ಬದುಕುವುದು ಉತ್ತಮ." ~ಅಬ್ದುಲ್ ಮಜೀದ್,ರಾಜ್ಯಾಧ್ಯಕ್ಷರು…

7 days ago

LPG ಗ್ಯಾಸಿನ ಬೆಲೆ ಏರಿಕೆ ಜನರ ಮೇಲೆ ಮತ್ತೊಂದು ಹೊರೆ!

ಕೇಂದ್ರ ಸರ್ಕಾರದ ನಿರಂತರ ಬೆಲೆ ಏರಿಕೆ ನೀತಿಯಿಂದ ಸಾಮಾನ್ಯ ಜನರು, ವಿಶೇಷವಾಗಿ ಬಡವರು ಮತ್ತು ಮಧ್ಯಮ ವರ್ಗದವರು ತೀವ್ರ ಸಂಕಷ್ಟಕ್ಕೆ…

1 week ago

ಬೋವರಿಂಗ್ ಆಸ್ಪತ್ರೆ ದುರಂತ ಸರ್ಕಾರದ ನಿರ್ಲಕ್ಷ್ಯ”

-7 ಜನರು ಮೃತಪಟ್ಟಿದ್ದಾರೆ – ಇವರಲ್ಲಿ 2 ಮಕ್ಕಳು ಸೇರಿದ್ದಾರೆ! ಹಳೆಯದು, ಬಿರುಕು ಬಿದ್ದ ಗೋಡೆ ಕುಸಿದು ಬಡ ಮತ್ತು…

1 week ago