15 ಆಗಸ್ಟ್ 2023
77ನೇ ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯಗಳು
ಸಾಕಷ್ಟು ತ್ಯಾಗ ಬಲಿದಾನಗಳ ನಂತರ ದೊರೆತಿರುವ ನಮ್ಮ ಸ್ವಾತಂತ್ರ್ಯವನ್ನು ಜೋಪಾನ ಮಾಡಿಕೊಳ್ಳುವುದು ನಮ್ಮೆಲ್ಲರ ಮೊದಲ ಆಧ್ಯತೆಯಾಗಬೇಕು. ಫ್ಯಾಶಿಸ್ಟರ ದ್ವೇಷದ ಜ್ವಾಲೆಗೆ ಇತ್ತೀಚೆಗೆ ಮಣಿಪುರ, ಹರಿಯಾಣ ಸೇರಿದಂತೆ ದೇಶದ ನಾನಾ ಭಾಗಗಳಲ್ಲಿ ವಿಕ್ಷಿಪ್ತ ಪರಿಸ್ಥಿತಿ ತಲೆ ದೋರಿದೆ. ಅವರು ಹರಡಿರುವ ದ್ವೇಷದ ಹಿಂಸಾತ್ಮಕ ವಾತಾವರಣವನ್ನು ಗಮಿನಿಸಿದಾಗ ನಮ್ಮ ಆದ್ಯತೆಗಳು ಹಾದಿ ತಪ್ಪಿರುವ ಸೂಚನೆಗಳು ದಟ್ಟವಾಗಿ ಕಾಣ ಸಿಗುತ್ತಿವೆ. ನಾವೀಗ ಎಚ್ಚೆತ್ತುಕೊಳ್ಳಲೇಬೇಕಾದ ಅನಿವಾರ್ಯ ಸನ್ನಿವೇಶದಲ್ಲಿದ್ದೇವೆ. ಇಲ್ಲವಾದರೆ ಎಲ್ಲವನ್ನೂ ಕಳೆದುಕೊಳ್ಳುವ ಆತಂಕದಲ್ಲಿದ್ದೇವೆ. ಫ್ಯಾಶಿಸ್ಟರ ಸಂಕೋಲೆಯಿಂದ ನಮ್ಮ ಅಮೂಲ್ಯ ಸ್ವಾತಂತ್ರ್ಯವನ್ನು ಉಳಿಸಿಕೊಳ್ಳೋಣ, ಆ ಮೂಲಕ ದೇಶವನ್ನು ಉಳಿಸಿಕೊಳ್ಳೋಣ. ಸ್ವಾತಂತ್ರ್ಯ ದಿನಾಚರಣೆಯಂದು ಇದರ ಬಗ್ಗೆ ಜನರಲ್ಲಿ ಎಚ್ಚರ ಮೂಡಿಸುವ ನಿಟ್ಟಿನಲ್ಲಿ ನಾವೆಲ್ಲ ಕಾರ್ಯಪ್ರವೃತ್ತರಾಗಬೇಕಿದೆ ಎಂದು ನೆನಪಿಸುತ್ತ ದೇಶದ ನನ್ನೆಲ್ಲ ಸಹಪ್ರಜೆಗಳಿಗೆ 77ನೇ ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯಗಳನ್ನು ಕೋರುತ್ತೇನೆ.
~ಅಬ್ದುಲ್ ಮಜೀದ್,
ರಾಜ್ಯಾಧ್ಯಕ್ಷರು, SDPI ಕರ್ನಾಟಕ
ಅಭಿನಂದನಾ ರ್ಯಾಲಿ ಮತ್ತು ಸಮಾವೇಶ 21 ಜನವರಿ 2026 ರ್ಯಾಲಿ: ಸಂಜೆ 04:00 | ಅಂಬೇಡ್ಕರ್ (ಜ್ಯೋತಿ) ವೃತ್ತದಿಂದ ಪುರಭವನದ…
SIR ಮೂಲಕ ಮತದಾನದ ಹಕ್ಕನ್ನು ಕಸಿದುಕೊಳ್ಳುವ ಪ್ರಯತ್ನ ನಡೆಯುತ್ತಿದೆ - ಅಬ್ರಾರ್ 12.01.2026 ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನಲ್ಲಿ ಸೋಶಿಯಲ್…
ಈ ನಾಡು ಕಂಡ ಖ್ಯಾತ ಇಸ್ಲಾಮಿಕ್ ವಿದ್ವಾಂಸ, ಕರ್ನಾಟಕ ಅಮೀರೆ ಶರೀಯತ್ ಮತ್ತು ಸಬಿವುಲ್ ರಷಾದ್ ಅರೇಬಿಕ್ ಕಾಲೇಜು, ನಾಗವಾರ…
The passing away of Ameer-e-Shariat of Karnataka, the respected religious and social leader Maulana Sageer…
امیر شریعت کرناٹک، معروف دینی و سماجی رہنما مولانا صغیر احمد صاحب کے بنگلورو میں…
Deeply saddened by the passing of Ameer-e-Shariat Maulana Sageer Ahmed Sahib Principal of Sabee-ul-Rashad Arabic…