15 ಆಗಸ್ಟ್ 2023
77ನೇ ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯಗಳು
ಸಾಕಷ್ಟು ತ್ಯಾಗ ಬಲಿದಾನಗಳ ನಂತರ ದೊರೆತಿರುವ ನಮ್ಮ ಸ್ವಾತಂತ್ರ್ಯವನ್ನು ಜೋಪಾನ ಮಾಡಿಕೊಳ್ಳುವುದು ನಮ್ಮೆಲ್ಲರ ಮೊದಲ ಆಧ್ಯತೆಯಾಗಬೇಕು. ಫ್ಯಾಶಿಸ್ಟರ ದ್ವೇಷದ ಜ್ವಾಲೆಗೆ ಇತ್ತೀಚೆಗೆ ಮಣಿಪುರ, ಹರಿಯಾಣ ಸೇರಿದಂತೆ ದೇಶದ ನಾನಾ ಭಾಗಗಳಲ್ಲಿ ವಿಕ್ಷಿಪ್ತ ಪರಿಸ್ಥಿತಿ ತಲೆ ದೋರಿದೆ. ಅವರು ಹರಡಿರುವ ದ್ವೇಷದ ಹಿಂಸಾತ್ಮಕ ವಾತಾವರಣವನ್ನು ಗಮಿನಿಸಿದಾಗ ನಮ್ಮ ಆದ್ಯತೆಗಳು ಹಾದಿ ತಪ್ಪಿರುವ ಸೂಚನೆಗಳು ದಟ್ಟವಾಗಿ ಕಾಣ ಸಿಗುತ್ತಿವೆ. ನಾವೀಗ ಎಚ್ಚೆತ್ತುಕೊಳ್ಳಲೇಬೇಕಾದ ಅನಿವಾರ್ಯ ಸನ್ನಿವೇಶದಲ್ಲಿದ್ದೇವೆ. ಇಲ್ಲವಾದರೆ ಎಲ್ಲವನ್ನೂ ಕಳೆದುಕೊಳ್ಳುವ ಆತಂಕದಲ್ಲಿದ್ದೇವೆ. ಫ್ಯಾಶಿಸ್ಟರ ಸಂಕೋಲೆಯಿಂದ ನಮ್ಮ ಅಮೂಲ್ಯ ಸ್ವಾತಂತ್ರ್ಯವನ್ನು ಉಳಿಸಿಕೊಳ್ಳೋಣ, ಆ ಮೂಲಕ ದೇಶವನ್ನು ಉಳಿಸಿಕೊಳ್ಳೋಣ. ಸ್ವಾತಂತ್ರ್ಯ ದಿನಾಚರಣೆಯಂದು ಇದರ ಬಗ್ಗೆ ಜನರಲ್ಲಿ ಎಚ್ಚರ ಮೂಡಿಸುವ ನಿಟ್ಟಿನಲ್ಲಿ ನಾವೆಲ್ಲ ಕಾರ್ಯಪ್ರವೃತ್ತರಾಗಬೇಕಿದೆ ಎಂದು ನೆನಪಿಸುತ್ತ ದೇಶದ ನನ್ನೆಲ್ಲ ಸಹಪ್ರಜೆಗಳಿಗೆ 77ನೇ ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯಗಳನ್ನು ಕೋರುತ್ತೇನೆ.
~ಅಬ್ದುಲ್ ಮಜೀದ್,
ರಾಜ್ಯಾಧ್ಯಕ್ಷರು, SDPI ಕರ್ನಾಟಕ
ಪೆರಿಯಾರ್ ಅವರ ಹೋರಾಟ ಮಾನವ ಘನತೆ, ಸಮಾನತೆ ಮತ್ತು ಸ್ವಾಭಿಮಾನದ ಪ್ರತೀಕ: ಅಪ್ಸರ್ ಕೊಡ್ಲಿಪೇಟೆ ಆನೇಕಲ್:ಸೆ. 17:ಸಾಮಾಜಿಕ ನ್ಯಾಯ, ಸಮಾನತೆ,…
13 ಸೆಪ್ಟೆಂಬರ್ 2026ಪಾಲನ ಭವನ , ಬೆಂಗಳೂರು WIM
5 ಸೆಪ್ಟೆಂಬರ್ 2017 ನಾವು ಮರೆಯುವುದಿಲ್ಲ SDPIKarnataka #GowriLankesh
Prakash Raj, Abdul Majeed SDPI and several others detained by Bengaluru Police During Election Commission…
SDPIKarnataka #NepalFloods
ಜೈಪುರದಲ್ಲಿ ಸರ್ಕಾರಿ ಶಾಲಾ ತಪಾಸಣೆಗೆ ತೆರಳಿದ್ದ ತಂಡದ ಮೇಲೆ ದಾಳಿ ಖಂಡನೀಯ: ನ್ಯಾಯಾಂಗ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ…