feature

ಪತ್ರಿಕಾ ಪ್ರಕಟಣೆ

ದ್ವೇಷ ಭಾಷಣ ಬೀದಿಯಿಂದ ಸಂಸತ್ತು ತಲುಪಿದೆ. ಸಂಸದ ಡ್ಯಾನಿಶ್ ಅಲಿ ಅವರನ್ನು ಸದನದಲ್ಲಿ ಉಗ್ರವಾದಿ ಎಂದು ಕರೆದ ಬಿಜೆಪಿ ಸಂಸದ ಬಿಧೂರಿಯನ್ನು ಸಂಸದ ಸ್ಥಾನದಿಂದ ವಜಾ ಮಾಡಬೇಕು: ಅಬ್ದುಲ್ ಮಜೀದ್, ರಾಜ್ಯಾಧ್ಯಕ್ಷರು, ಎಸ್‌ಡಿಪಿಐ

ಬೆಂಗಳೂರು, 22 ಸೆಪ್ಟೆಂಬರ್ 2023: ದ್ವೇಷ ಭಾಷಣಗಳ ಮೂಲಕ ಜನರಲ್ಲಿ ವಿಷವನ್ನು ಬಿತ್ತಿ ಆ ಮೂಲಕ ಮತ ಪಡೆಯುವ ಬಿಜೆಪಿಯ ಅಪಾಯಕಾರಿ ರಾಜಕಾರಣದಿಂದ ದೇಶ ಈಗಾಗಲೇ ನಲುಗುತ್ತಿದೆ. ಬಿಜೆಪಿ ಇಲ್ಲಿಯವರೆಗೆ ಬೀದಿಗಳಲ್ಲಿ ಹರಡುತ್ತಿದ್ದ ಕೋಮು ದ್ವೇಷದ ವಿಷ ಈಗ ಸಂಸತ್ ಭವನ ತಲುಪಿರುವುದು ದುರಂತ. ಬಿ.ಎಸ್.ಪಿ ಪಕ್ಷದ ಸಂಸದ ಡ್ಯಾನಿಶ್ ಅಲಿಯವರನ್ನು ಬಿಜೆಪಿ ಸಂಸದ ಬಿಧೂರಿ ಉಗ್ರವಾದಿಯೆಂದು ಸಂಸತ್ತಿನಲ್ಲೇ ಕರೆದಿರುವುದು ಅತ್ಯಂತ ಕ್ಷಮೆಗೆ ಅರ್ಹವಲ್ಲದ ಖಂಡನೀಯ ಕೃತ್ಯ. ಈ ಕೂಡಲೇ ಬಿಧೂರಿಯನ್ನು ಸಂಸದ ಸ್ಥಾನದಿಂದ ವಜಾ ಮಾಡಬೇಕು ಎಂದು ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ಪಕ್ಷದ ರಾಜ್ಯಾಧ್ಯಕ್ಷರಾದ ಅಬ್ದುಲ್ ಮಜೀದ್ ಅವರು ತಮ್ಮ ಪತ್ರಿಕಾ ಪ್ರಕಟಣೆಯ ಮೂಲಕ ಒತ್ತಾಯಿಸಿದ್ದಾರೆ.

ಸಂಸತ್ತಿಗೆ ಒಂದು ಘನತೆ ಇದೆ. ಅಲ್ಲಿ ತಾವು ಆರಿಸಿ ಕಳಿಸಿದ ಜನಪ್ರತಿನಿಧಿಗಳು ಏನು ಮಾಡುತ್ತಿದ್ದಾರೆ, ಏನು ಮಾತನಾಡುತ್ತಿದ್ದಾರೆ ಎಂಬುದನ್ನು ದೇಶದ ಜನ ಸೂಕ್ಷ್ಮವಾಗಿ ಗಮನಿಸುತ್ತಿರುತ್ತಾರೆ. ಅಂತಹ ಪವಿತ್ರ ಮತ್ತು ಜವಾಬ್ದಾರಿಯುತ ಸ್ಥಾನದಿಂದ ಹೊರಡುವ ಒಂದೊಂದು ಶಬ್ದವು ಇಡೀ ದೇಶದ ಮೇಲೆ ಪರಿಣಾಮ ಬೀರುತ್ತಿರುತ್ತದೆ. ಅದರ ಪರಿವೆಯೇ ಇಲ್ಲದೆ, ತಮ್ಮ ಎಂದಿನ ಚಾಳಿಯಾದ ಕೋಮು ದ್ವೇಷವನ್ನು ಅಲ್ಲಿಂದಲೂ ಬಿಜೆಪಿ ಸಂಸದ ಹೊರ ಹಾಕಿರುವುದು ಸಂಸತ್ತಿನ ಇತಿಹಾಸದಲ್ಲಿ ಎಂದೂ ಅಳಿಸಲಾಗದ ಕಪ್ಪು ಚುಕ್ಕೆ ಎಂದೆ ಹೇಳಬೇಕು. ಇಂತಹ ಅಸಹ್ಯಕರ ಮಾತುಗಳನ್ನು ಪಕ್ಕದಲ್ಲಿ ಕುಳಿತು ಆಲಿಸುತ್ತಿದ್ದ ಬಿಜೆಪಿ ಹಿರಿಯ ನಾಯಕ ಹರ್ಷವರ್ಧನ್ ನಗುತ್ತಲೇ ಪರೋಕ್ಷವಾಗಿ ಆ ಮಾತುಗಳನ್ನು ಸಮರ್ಥಿಸುತ್ತಿದ್ದಿದ್ದು ಬಿಜೆಪಿ ಇಂತಹ ನೀಚತಾಣವನ್ನು ಉದ್ದೇಶ ಪೂರ್ವಕವಾಗಿಯೇ ಪ್ರೋತ್ಸಾಹಿಸುತ್ತದೆ ಎಂಬುದಕ್ಕೆ ಸಾಕ್ಷಿ ಎಂದು ಮಜೀದ್ ಅವರು ಆಕ್ರೋಶ ಹೊರಹಾಕಿದ್ದಾರೆ.

ಸಂಸದ ಡ್ಯಾನಿಶ್ ಅಲಿ ಅವರನ್ನು ಭಯೋತ್ಪಾದಕ ಎಂದಿದ್ದಲ್ಲದೆ, ಇಡೀ ಮುಸ್ಲಿಂ ಸಮುದಾಯದ ಬಗ್ಗೆಯೂ ಬಿಜೆಪಿ ಸಂಸದ ಬಿಧೂರಿ ತುಚ್ಛವಾಗಿ ಮಾತನಾಡಿದ್ದಾರೆ. ಸಂಸತ್ ಕಲಾಪದಲ್ಲಿ. ಇಷ್ಟಾದರೂ ಸಭಾಧ್ಯಕ್ಷರು ದುರ್ವರ್ತನೆ ತೋರಿದ ಸಂಸರಿಗೆ ಕೇವಲ ಎಚ್ಚರಿಕೆ ಕೊಟ್ಟು ಕೈ ತೊಳೆದುಕೊಂಡಿದ್ದಾರೆ. ಸದನದಲ್ಲಿ ಉಪಸ್ಥಿತರಿದ್ದ ಬಿಜೆಪಿ ಹಿರಿಯ ನಾಯಕ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಕೇವಲ ವಿಷಾದ ವ್ಯಕ್ತಪಡಿಸಿ ನುಣುಚಿಕೊಂಡಿದ್ದಾರೆ. ಇಂತ ಹೇಯ ನಡವಳಿಕೆಗೆ ಬಿಜೆಪಿ ಸಂಸದನನ್ನು ಸಂಸದ ಸ್ಥಾನದಿಂದ ವಜಾ ಮಾಡಲೇಬೇಕು. ಜೊತೆಗೆ ಪ್ರಧಾನಿಗಳು ಸಂಸತ್ತಿನಿಂದಲೇ ದೇಶದ ಜನರ ಕ್ಷಮೆ ಯಾಚಿಸಬೇಕು. ಇಲ್ಲವಾದರೆ ಮುಂದಿನ ದಿನಗಳಲ್ಲಿ ಭಾರತದ ಪ್ರಜಾಪ್ರಭುತ್ವದ ಮಹಾ ಪಂಚಾಯತ್ ಆದ ಸಂಸತ್ತು ತನ್ನ ಗೌರವವನ್ನು ಕಳೆದುಕೊಳ್ಳುವ ಅಪಾಯ ಇದೆ ಎಂದು ಮಜೀದ್ ಅವರು ತಮ್ಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.

See Insights and Ads

Boost post

admin

Recent Posts

ಸಂತಾಪಗಳು

ಲಿಯಾಕತ್ ಆಲಿ 3. 2026 ಕೊಡಗು ಜಿಲ್ಲೆಯ ಮಡಿಕೇರಿ ನಿವಾಸಿಯಾದ ಮಡಿಕೇರಿ ಹಿಂದಿನ ಪುರಸಭೆಯ ಮಾಜಿ ಉಪಾಧ್ಯಕ್ಷ ಲಿಯಾಕತ್ ಆಲಿ…

2 days ago

ಪಶ್ಚಿಮ ಏಷ್ಯಾ ಸಂಘರ್ಷದಿಂದ ಉಂಟಾಗಿರುವ ಎಲ್‌.ಪಿ.ಜಿ ಕೊರತೆ ಮತ್ತು ರೆಸ್ಟೋರೆಂಟ್‌ಗಳ ಸಂಕಷ್ಟ – ಕೇಂದ್ರ ಸರ್ಕಾರದ ನಿರ್ಲಕ್ಷ ನಡೆಗೆ ತೀವ್ರಖಂಡನೆ: ಎಸ್.ಡಿ.ಪಿ.ಐ.

ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಯಾಸ್ಮಿನ್ ಫಾರೂಖಿ ಅವರು, ಪಶ್ಚಿಮ ಏಷ್ಯಾದಲ್ಲಿ…

4 days ago

تعزيتي خطاب مرحومهعائشہ شبیر

آج بنگلورو میں سوشیل ڈیموکریٹک پارٹی آف انز ٹی آف انڈیا (SDPI) کی اسٹیٹ کمیٹی…

6 days ago

ಸಾಂತ್ವನ ಸಭೆ ಆಯಿಷಾ ಶಬ್ಬಿರ್

ಇಂದು ಬೆಂಗಳೂರಿನಲ್ಲಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ರಾಜ್ಯ ಸಮಿತಿ ಸದಸ್ಯೆಯಾಗಿದ್ದ ದಿವಂಗತ ಆಯಿಷಾ ಶಬ್ಬಿರ್ ಅವರ…

6 days ago

Taziyati Jalsa Marhooma Ayesha Shabbir

Aaj Bengaluru mein Social Democratic Party of India (SDPI) ki State Committee Member marhooma Ayesha…

6 days ago

ಸಂತಾಪ ಸಭೆ

ಮರ್ಹೂಮಾ ಆಯಿಷಾ ಶಬೀರ್ تعزیتی اجلاس مرحومہ عائشہ شبیر آپ کی جدوجہد، اخلاص اور خدمت ملت…

1 week ago