ಪತ್ರಿಕಾ ಪ್ರಕಟಣೆ. ಗ್ರೂಪ್ ಸಿ ಪರೀಕ್ಷೆಯ ವೇಳೆ ಮಹಿಳೆಯರ ಮಂಗಳಸೂತ್ರ, ಕಾಲುಂಗುರ ತೆಗೆಸಿರುವ ಘಟನೆ ಅಕ್ಷಮ್ಯ: ಅಫ್ಸರ್ ಕೊಡ್ಲಿಪೇಟೆ, ರಾಜ್ಯ ಪ್ರಧಾನ ಕಾರ್ಯದರ್ಶಿ, ಎಸ್ಡಿಪಿಐ

ಬೆಂಗಳೂರು, 09 ಅಕ್ಟೋಬರ್ 2023: ಗ್ರೂಪ್ ಸಿ ಹುದ್ದೆಗಳ ಪರೀಕ್ಷೆಯ ವೇಳೆ ಮಹಿಳೆಯರ ಮಂಗಳಸೂತ್ರ, ಕಾಲುಂಗುರ ತೆಗೆಸಿರುವ ಘಟನೆ ಅಕ್ಷಮ್ಯ ಎಂದು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್ಡಿಪಿಐ) ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಅಫ್ಸರ್ ಕೊಡ್ಲಿಪೇಟೆ ತಮ್ಮ ಪತ್ರಿಕಾ ಪ್ರಕಟಣೆಯ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸರ್ಕಾರ ಕೂಡಲೇ ನೊಂದ ಮಹಿಳೆಯರ ಕ್ಷಮೆ ಯಾಚಿಸಿ ಇಂತಹ ಆಘಾತಕಾರಿ ಘಟನೆಗೆ ಕಾರಣರಾದ ಅಧಿಕಾರಿಗಳನ್ನು ಅಮಾನತು ಮಾಡಬೇಕೆಂದು ಒತ್ತಾಯಿಸದ ಅವರು ಮತ್ತೆಂದೂ ಈ ರೀತಿಯ ಘಟನೆ ಮರುಕಳಿಸದಂತೆ ಎಚ್ಚರಿಕೆ ವಹಿಸಬೇಕು ತಮ್ಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನಕಲು ತಡೆಯುವ ನೆಪದಲ್ಲಿ ಈ ಹಿಂದೆಯೂ ಮಹಿಳಾ ಪರೀಕ್ಷಾ ಅಭ್ಯರ್ಥಿಗಳ ಮೇಲೆ ಈ ರೀತಯ ಶೋಷಣೆ ನಡೆದಿದೆ. ಅವರ ಮೇಲೆ ದಬ್ಬಾಳಿಕೆ ನಡೆಸುವ ಉದ್ದೇಶವಲ್ಲದೆ ಬೇರೆ ಯಾವ ಕಾರಣವೂ ಇಂತಹ ಪ್ರಕರಣಗಳಲ್ಲಿ ಕಾಣಲು ಸಾಧ್ಯವಿಲ್ಲ. ಮಂಗಳಸೂತ್ರ, ಕಾಲುಂಗರಗಳ ಮೂಲಕ ಯಾವ ರೀತಿ ನಕಲು ಮಾಡಲು ಸಾಧ್ಯ? ಸಾಮಾನ್ಯ ಜ್ಞಾನ ಇಲ್ಲದ ಕೆಲವು ಅಧಿಕಾರಿಗಳ ಈ ದುಂಡಾ ವರ್ತನೆಗೆ ಸರ್ಕಾರ ತಕ್ಷಣ ಕಡಿವಾಣ ಹಾಕಬೇಕು ಎಂದು ಅಫ್ಸರ್ ಅವರು ತಮ್ಮ ಪ್ರಕಟಣೆಯ ಮೂಲಕ ಆಗ್ರಹಿಸಿದ್ದಾರೆ.

admin

Recent Posts

Bantwal mein qatl kiye gaye Raheem ke ghar par SDPI ke riyasati sadar Abdul Majeed ki taʼziyati mulaqat.

Dakshin Kannada District, Bantwal taluka ke Kolatta Majluru mein Sangh Parivar ke Gundon ke haathon…

1 week ago

ಶಾ ಅವರ ಹೇಳಿಕೆ ವಿರೋಧಿಸಿ ಡಿಸೆಂಬರ್ 24ರ ಗುಲಬರ್ಗಾ ಬಂದ್ ಗೆ ಎಸ್‌ಡಿಪಿಐ ಸಂಪೂರ್ಣ ಬೆಂಬಲ

ಗುಲಬರ್ಗಾ: 22 ಡಿಸೆಂಬರ್ 2024. ಸೋಶಿಯಲ್ ಡೆಮೊಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ಗುಲ್ಬರ್ಗ ಜಿಲ್ಲಾ ಸಮಿತಿ ಸಭೆಯು ಪಕ್ಷದ…

6 months ago

ನೆನಪು

ಕೆ.ಎಂ. ಶರೀಫ್ ಸಾಬ್ 01.09.1964-22.12.2020 25 ವರ್ಷಗಳ ಹಿಂದೆ ಕರಾವಳಿ ಕರ್ನಾಟಕದಲ್ಲಿ ಸಂಘಪರಿವಾರ ನಿರಂತರ ಕ್ರೌರ್ಯ ಮೆರೆಯುತ್ತಿದ್ದ ಕಾಲ. ಅದನ್ನು…

6 months ago