ಬೆಂಗಳೂರು, 09 ಅಕ್ಟೋಬರ್ 2023: ಗ್ರೂಪ್ ಸಿ ಹುದ್ದೆಗಳ ಪರೀಕ್ಷೆಯ ವೇಳೆ ಮಹಿಳೆಯರ ಮಂಗಳಸೂತ್ರ, ಕಾಲುಂಗುರ ತೆಗೆಸಿರುವ ಘಟನೆ ಅಕ್ಷಮ್ಯ ಎಂದು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್ಡಿಪಿಐ) ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಅಫ್ಸರ್ ಕೊಡ್ಲಿಪೇಟೆ ತಮ್ಮ ಪತ್ರಿಕಾ ಪ್ರಕಟಣೆಯ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸರ್ಕಾರ ಕೂಡಲೇ ನೊಂದ ಮಹಿಳೆಯರ ಕ್ಷಮೆ ಯಾಚಿಸಿ ಇಂತಹ ಆಘಾತಕಾರಿ ಘಟನೆಗೆ ಕಾರಣರಾದ ಅಧಿಕಾರಿಗಳನ್ನು ಅಮಾನತು ಮಾಡಬೇಕೆಂದು ಒತ್ತಾಯಿಸದ ಅವರು ಮತ್ತೆಂದೂ ಈ ರೀತಿಯ ಘಟನೆ ಮರುಕಳಿಸದಂತೆ ಎಚ್ಚರಿಕೆ ವಹಿಸಬೇಕು ತಮ್ಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಕಲು ತಡೆಯುವ ನೆಪದಲ್ಲಿ ಈ ಹಿಂದೆಯೂ ಮಹಿಳಾ ಪರೀಕ್ಷಾ ಅಭ್ಯರ್ಥಿಗಳ ಮೇಲೆ ಈ ರೀತಯ ಶೋಷಣೆ ನಡೆದಿದೆ. ಅವರ ಮೇಲೆ ದಬ್ಬಾಳಿಕೆ ನಡೆಸುವ ಉದ್ದೇಶವಲ್ಲದೆ ಬೇರೆ ಯಾವ ಕಾರಣವೂ ಇಂತಹ ಪ್ರಕರಣಗಳಲ್ಲಿ ಕಾಣಲು ಸಾಧ್ಯವಿಲ್ಲ. ಮಂಗಳಸೂತ್ರ, ಕಾಲುಂಗರಗಳ ಮೂಲಕ ಯಾವ ರೀತಿ ನಕಲು ಮಾಡಲು ಸಾಧ್ಯ? ಸಾಮಾನ್ಯ ಜ್ಞಾನ ಇಲ್ಲದ ಕೆಲವು ಅಧಿಕಾರಿಗಳ ಈ ದುಂಡಾ ವರ್ತನೆಗೆ ಸರ್ಕಾರ ತಕ್ಷಣ ಕಡಿವಾಣ ಹಾಕಬೇಕು ಎಂದು ಅಫ್ಸರ್ ಅವರು ತಮ್ಮ ಪ್ರಕಟಣೆಯ ಮೂಲಕ ಆಗ್ರಹಿಸಿದ್ದಾರೆ.
ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಯಾಸ್ಮಿನ್ ಫಾರೂಖಿ ಅವರು, ಪಶ್ಚಿಮ ಏಷ್ಯಾದಲ್ಲಿ…
آج بنگلورو میں سوشیل ڈیموکریٹک پارٹی آف انز ٹی آف انڈیا (SDPI) کی اسٹیٹ کمیٹی…
ಇಂದು ಬೆಂಗಳೂರಿನಲ್ಲಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ರಾಜ್ಯ ಸಮಿತಿ ಸದಸ್ಯೆಯಾಗಿದ್ದ ದಿವಂಗತ ಆಯಿಷಾ ಶಬ್ಬಿರ್ ಅವರ…
Aaj Bengaluru mein Social Democratic Party of India (SDPI) ki State Committee Member marhooma Ayesha…