ಬೆಂಗಳೂರು, 09 ಅಕ್ಟೋಬರ್ 2023: ಗ್ರೂಪ್ ಸಿ ಹುದ್ದೆಗಳ ಪರೀಕ್ಷೆಯ ವೇಳೆ ಮಹಿಳೆಯರ ಮಂಗಳಸೂತ್ರ, ಕಾಲುಂಗುರ ತೆಗೆಸಿರುವ ಘಟನೆ ಅಕ್ಷಮ್ಯ ಎಂದು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್ಡಿಪಿಐ) ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಅಫ್ಸರ್ ಕೊಡ್ಲಿಪೇಟೆ ತಮ್ಮ ಪತ್ರಿಕಾ ಪ್ರಕಟಣೆಯ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸರ್ಕಾರ ಕೂಡಲೇ ನೊಂದ ಮಹಿಳೆಯರ ಕ್ಷಮೆ ಯಾಚಿಸಿ ಇಂತಹ ಆಘಾತಕಾರಿ ಘಟನೆಗೆ ಕಾರಣರಾದ ಅಧಿಕಾರಿಗಳನ್ನು ಅಮಾನತು ಮಾಡಬೇಕೆಂದು ಒತ್ತಾಯಿಸದ ಅವರು ಮತ್ತೆಂದೂ ಈ ರೀತಿಯ ಘಟನೆ ಮರುಕಳಿಸದಂತೆ ಎಚ್ಚರಿಕೆ ವಹಿಸಬೇಕು ತಮ್ಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಕಲು ತಡೆಯುವ ನೆಪದಲ್ಲಿ ಈ ಹಿಂದೆಯೂ ಮಹಿಳಾ ಪರೀಕ್ಷಾ ಅಭ್ಯರ್ಥಿಗಳ ಮೇಲೆ ಈ ರೀತಯ ಶೋಷಣೆ ನಡೆದಿದೆ. ಅವರ ಮೇಲೆ ದಬ್ಬಾಳಿಕೆ ನಡೆಸುವ ಉದ್ದೇಶವಲ್ಲದೆ ಬೇರೆ ಯಾವ ಕಾರಣವೂ ಇಂತಹ ಪ್ರಕರಣಗಳಲ್ಲಿ ಕಾಣಲು ಸಾಧ್ಯವಿಲ್ಲ. ಮಂಗಳಸೂತ್ರ, ಕಾಲುಂಗರಗಳ ಮೂಲಕ ಯಾವ ರೀತಿ ನಕಲು ಮಾಡಲು ಸಾಧ್ಯ? ಸಾಮಾನ್ಯ ಜ್ಞಾನ ಇಲ್ಲದ ಕೆಲವು ಅಧಿಕಾರಿಗಳ ಈ ದುಂಡಾ ವರ್ತನೆಗೆ ಸರ್ಕಾರ ತಕ್ಷಣ ಕಡಿವಾಣ ಹಾಕಬೇಕು ಎಂದು ಅಫ್ಸರ್ ಅವರು ತಮ್ಮ ಪ್ರಕಟಣೆಯ ಮೂಲಕ ಆಗ್ರಹಿಸಿದ್ದಾರೆ.
ಪೆರಿಯಾರ್ ಅವರ ಹೋರಾಟ ಮಾನವ ಘನತೆ, ಸಮಾನತೆ ಮತ್ತು ಸ್ವಾಭಿಮಾನದ ಪ್ರತೀಕ: ಅಪ್ಸರ್ ಕೊಡ್ಲಿಪೇಟೆ ಆನೇಕಲ್:ಸೆ. 17:ಸಾಮಾಜಿಕ ನ್ಯಾಯ, ಸಮಾನತೆ,…
13 ಸೆಪ್ಟೆಂಬರ್ 2026ಪಾಲನ ಭವನ , ಬೆಂಗಳೂರು WIM
5 ಸೆಪ್ಟೆಂಬರ್ 2017 ನಾವು ಮರೆಯುವುದಿಲ್ಲ SDPIKarnataka #GowriLankesh
Prakash Raj, Abdul Majeed SDPI and several others detained by Bengaluru Police During Election Commission…
SDPIKarnataka #NepalFloods
ಜೈಪುರದಲ್ಲಿ ಸರ್ಕಾರಿ ಶಾಲಾ ತಪಾಸಣೆಗೆ ತೆರಳಿದ್ದ ತಂಡದ ಮೇಲೆ ದಾಳಿ ಖಂಡನೀಯ: ನ್ಯಾಯಾಂಗ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ…