ಬೆಂಗಳೂರು, 09 ಅಕ್ಟೋಬರ್ 2023: ಗ್ರೂಪ್ ಸಿ ಹುದ್ದೆಗಳ ಪರೀಕ್ಷೆಯ ವೇಳೆ ಮಹಿಳೆಯರ ಮಂಗಳಸೂತ್ರ, ಕಾಲುಂಗುರ ತೆಗೆಸಿರುವ ಘಟನೆ ಅಕ್ಷಮ್ಯ ಎಂದು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್ಡಿಪಿಐ) ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಅಫ್ಸರ್ ಕೊಡ್ಲಿಪೇಟೆ ತಮ್ಮ ಪತ್ರಿಕಾ ಪ್ರಕಟಣೆಯ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸರ್ಕಾರ ಕೂಡಲೇ ನೊಂದ ಮಹಿಳೆಯರ ಕ್ಷಮೆ ಯಾಚಿಸಿ ಇಂತಹ ಆಘಾತಕಾರಿ ಘಟನೆಗೆ ಕಾರಣರಾದ ಅಧಿಕಾರಿಗಳನ್ನು ಅಮಾನತು ಮಾಡಬೇಕೆಂದು ಒತ್ತಾಯಿಸದ ಅವರು ಮತ್ತೆಂದೂ ಈ ರೀತಿಯ ಘಟನೆ ಮರುಕಳಿಸದಂತೆ ಎಚ್ಚರಿಕೆ ವಹಿಸಬೇಕು ತಮ್ಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಕಲು ತಡೆಯುವ ನೆಪದಲ್ಲಿ ಈ ಹಿಂದೆಯೂ ಮಹಿಳಾ ಪರೀಕ್ಷಾ ಅಭ್ಯರ್ಥಿಗಳ ಮೇಲೆ ಈ ರೀತಯ ಶೋಷಣೆ ನಡೆದಿದೆ. ಅವರ ಮೇಲೆ ದಬ್ಬಾಳಿಕೆ ನಡೆಸುವ ಉದ್ದೇಶವಲ್ಲದೆ ಬೇರೆ ಯಾವ ಕಾರಣವೂ ಇಂತಹ ಪ್ರಕರಣಗಳಲ್ಲಿ ಕಾಣಲು ಸಾಧ್ಯವಿಲ್ಲ. ಮಂಗಳಸೂತ್ರ, ಕಾಲುಂಗರಗಳ ಮೂಲಕ ಯಾವ ರೀತಿ ನಕಲು ಮಾಡಲು ಸಾಧ್ಯ? ಸಾಮಾನ್ಯ ಜ್ಞಾನ ಇಲ್ಲದ ಕೆಲವು ಅಧಿಕಾರಿಗಳ ಈ ದುಂಡಾ ವರ್ತನೆಗೆ ಸರ್ಕಾರ ತಕ್ಷಣ ಕಡಿವಾಣ ಹಾಕಬೇಕು ಎಂದು ಅಫ್ಸರ್ ಅವರು ತಮ್ಮ ಪ್ರಕಟಣೆಯ ಮೂಲಕ ಆಗ್ರಹಿಸಿದ್ದಾರೆ.
ಕರ್ನಾಟಕ ಸ್ವಾಭಿಮಾನಿ ಮುಸ್ಲಿಮರ ವೇದಿಕೆಯ ವತಿಯಿಂದ ಬೆಂಗಳೂರಿನ Agricultural Institution ಸಭಾಂಗಣದಲ್ಲಿ ಅತ್ಯಂತ ಶಿಸ್ತಿನ, ಬಲಿಷ್ಠ ಹಾಗೂ ಗೌರವಯುತ ವೇದಿಕೆಯಡಿ…
ಲೀಡರ್ಸ್ ಕಾನ್ಕ್ಲೇವ್ 28 APRIL 2026 ಇಂಡಿಯಾನ ಕನ್ವೆನ್ಷನ್ ಸೆಂಟರ್ ಮಂಗಳೂರು ಸಂಜೆ 4.00 ಗಂಟೆಗೆ SDPIKatnataka #LeadersConclave #mangalore
ಈ ಘೋರ ದುರಂತಕ್ಕೆ ಕಾರಣಕರ್ತರಾದ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ SDPI ಒತ್ತಾಯ 2021 ರ ಮೇ 2 ರಂದು ಚಾಮರಾಜನಗರ…
27.04.2026 SDPI NATIONAL PRESIDENT M.K FAIZY SDPIKarnataka #Mangalore #MKFaizy
ಪ್ರಿಯ ವಿದ್ಯಾರ್ಥಿಗಳೇ,ಇಂದಿನ SSLC ಫಲಿತಾಂಶವು ನಿಮ್ಮ ಜೀವನದ ಒಂದು ಹಂತ ಮಾತ್ರ - ಅಂತಿಮ ಗುರಿ ಅಲ್ಲ. ನಿಮ್ಮ ಪರಿಶ್ರಮ…
ಹಾರ್ದಿಕ ಶುಭಾಶಯಗಳು 4. 2026 "ಕಾಯಕವೇ ಕೈಲಾಸ" ಎಂದು ಹೇಳಿದ ಬಸವಣ್ಣನವರ ತತ್ವಗಳು ಇಂದಿಗೂ ನಮ್ಮ ಸಮಾಜಕ್ಕೆ ದಾರಿದೀಪ. ಜಾತಿ,…