Categories: featureNewsPolitics

ಟಿಪ್ಪು ಜಯಂತಿ ಮತ್ತು ಕಾಂಗ್ರೆಸ್ನ ಕೃತಘ್ನ ನಾಯಕರು:-

ನಿನ್ನೆ ನವಂಬರ್ 10, ಭಾರತದ ಪ್ರಥಮ ಸ್ವಾತಂತ್ರ್ಯ ಸೇನಾನಿ, ವಿಶ್ವ ವಿಖ್ಯಾತ ಮೈಸೂರು ಹುಲಿ ಹಜರತ್ ಟಿಪ್ಪು ಸುಲ್ತಾನ್ ರವರ ಜನ್ಮದಿನ, ಕನ್ನಡದ ಮಣ್ಣು ದೇವನಹಳ್ಳಿಯಲ್ಲಿ ಹುಟ್ಟಿದ ಅತ್ಯಂತ ದೂರದೃಷ್ಟಿಯ ಆಡಳಿತಗಾರ, ಜನಾನುರಾಗಿ, ಹಲವು ಕ್ರಾಂತಿಕಾರಿ ಆಡಳಿತ ಸುಧಾರಣೆಯನ್ನು ತಂದ ಟಿಪ್ಪು ಸುಲ್ತಾನ್ ಜಯಂತಿಯನ್ನು 2015 ರಲ್ಲಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ, ಸರ್ಕಾರಿ ಕಾರ್ಯಕ್ರಮವಾಗಿ ಆಯೋಜನೆ ಮಾಡಿತ್ತು.
ಆದರೆ ದುರಂತ ನೋಡಿ, ಇವತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಕೆಪಿಸಿಸಿಯ ಟ್ವಿಟರ್ ಹ್ಯಾಂಡಲ್ X ಅನ್ನು ನೋಡುತ್ತಿದ್ದೆ, ಅಲ್ಲಿ ಒನಕೆ ಓಬವ್ವ ಜಯಂತಿಯ ಶುಭಾಶಯ ಇದೆ, ಕುವೆಂಪುರವರ ಪುಣ್ಯ ಸ್ಮರಣೆಯ ಸಂದೇಶ ಇದೆ, ಆದರೆ ಟಿಪ್ಪು ಜಯಂತಿಯ ಬಗ್ಗೆ ಒಂದು ಸಣ್ಣ ಶುಭಾಶಯ ಇಲ್ಲ.
ಈ ಬಾರಿ ಕಾಂಗ್ರೆಸ್ ಪಡೆದ ಒಟ್ಟು ಮತದಲ್ಲಿ ಶೇಕಡ 30ರಷ್ಟು ಮುಸಲ್ಮಾನರ ಮತ, ಆದರೆ ಟಿಪ್ಪು ಸುಲ್ತಾನರ ಜಯಂತಿಯ ಶುಭಾಶಯವನ್ನು ಕೋರದ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಮತ್ತು ಕಾಂಗ್ರೆಸ್ ಪಕ್ಷ ಇಷ್ಟೊಂದು ಕೃತಘ್ನರಾಗಬಾರದಿತ್ತು.
ಕನಿಷ್ಠ ಟಿಪ್ಪು ಜಯಂತಿಯ ಬಗ್ಗೆ ಒಂದು ಶುಭಾಶಯವನ್ನು ಕೂಡ ಕೋರದ ಕಾಂಗ್ರೆಸ್ ನಾಯಕರು ಇಷ್ಟೊಂದು ಹೃದಯ ಹೀನರಾಗುತ್ತಾರೆ ಎಂದು ಕನಸು ಮನಸ್ಸಿನಲ್ಲೂ ಯೋಚಿಸಿರಲಿಲ್ಲ.

~ಅಬ್ದುಲ್ ಮಜೀದ್,
ರಾಜ್ಯಾಧ್ಯಕ್ಷರು, ಎಸ್ಡಿಪಿಐ ಕರ್ನಾಟಕ

SDPIKarnataka #TippuJayanthi #ದೇಶದಅಭಿಮಾನಟಿಪ್ಪು_ಸುಲ್ತಾನ

admin

Recent Posts

ಕಟಕ್‌ ದಂಗೆ ಆತಂಕಕಾರಿ – ನಿಷ್ಪಕ್ಷಪಾತ ತನಿಖೆ ಮತ್ತು ಆರೋಪಿಗಳ ವಿರುದ್ಧ ಕಠಿಣ ಕ್ರಮಕ್ಕೆ SDPI ಆಗ್ರಹ

ಒಡಿಶಾದ ಕಟಕ್‌ನಲ್ಲಿ ದುರ್ಗಾ ಪೂಜೆಯ ವಿಗ್ರಹ ಮೆರವಣಿಗೆ ಸಮಯದಲ್ಲಿ ಒಂದು ನಿರ್ದಿಷ್ಟ ಸಮುದಾಯವನ್ನು ಗುರಿಯಾಗಿಸಿ ಮಾಡಿದ ಹಿಂಸಾಚಾರ ಅತ್ಯಂತ ಆತಂಕಕಾರಿ…

1 day ago

ಮುಖ್ಯ ನ್ಯಾಯಮೂರ್ತಿ ಗವಾಯಿ ಮೇಲೆ ದಾಳಿ ಎಸ್.ಡಿ.ಪಿ.ಐ ಖಂಡನೆ.

ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಬಿ.ಆರ್ ಗವಾಯಿ ಅವರ ಮೇಲೆ ಶೂ ಎಸೆಯಲು ಪ್ರಯತ್ನ ಪಟ್ಟ ಘಟನೆಯನ್ನು ಸೋಶಿಯಲ್ ಡೆಮಾಕ್ರಟಿಕ್…

2 days ago

انصاف کی جیت

کے․جی․ ہلّی اور ڈی․جی․ ہلّی مقدمے میں گرفتار دو افراد کوسپریم کورٹ نے ضمانت منظور…

2 days ago

ಮಹರ್ಷಿ ವಾಲ್ಮೀಕಿ ಜಯಂತಿಯ ಶುಭಾಶಯಗಳು

ನೀವು ಜ್ಞಾನ, ಹಣ, ಪ್ರತಿಷ್ಠೆ, ಶಕ್ತಿಯನ್ನು ಸಂಗ್ರಹಿಸಬಹುದು. ಆದರೆ ಇದೆಲ್ಲದರ ನಡುವೆ ಪ್ರೀತಿಯನ್ನು ಕಳೆದುಕೊಂಡಿದ್ದರೆ ನೀವು ನಿಜವಾದ ಬದುಕನ್ನೇ ಕಳೆದುಕೊಂಡಿದ್ದೀರಿ…

3 days ago

ನ್ಯಾಯದ ಜಯ

ಕೆ.ಜಿ.ಹಳ್ಳಿ ಮತ್ತು ಡಿ.ಜೆ.ಹಳ್ಳಿ ಪ್ರಕರಣದಲ್ಲಿ ಬಂಧಿತರಾದ ಇಬ್ಬರಿಗೆ ಸರ್ವೋಚ್ಚ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ ಇದು ನ್ಯಾಯ ಮತ್ತು ಸತ್ಯದ…

3 days ago

کے۔ جے، جارج کے استعفی کا ایس ڈی پی آئی کا مطالبہ

عبد الحنان ریاستی نائب صدر - ایس۔ ڈی۔ پی۔ آئی ہے بنگلور، 5 اکتوبر: توانائی…

4 days ago