ನಿನ್ನೆ ನವಂಬರ್ 10, ಭಾರತದ ಪ್ರಥಮ ಸ್ವಾತಂತ್ರ್ಯ ಸೇನಾನಿ, ವಿಶ್ವ ವಿಖ್ಯಾತ ಮೈಸೂರು ಹುಲಿ ಹಜರತ್ ಟಿಪ್ಪು ಸುಲ್ತಾನ್ ರವರ ಜನ್ಮದಿನ, ಕನ್ನಡದ ಮಣ್ಣು ದೇವನಹಳ್ಳಿಯಲ್ಲಿ ಹುಟ್ಟಿದ ಅತ್ಯಂತ ದೂರದೃಷ್ಟಿಯ ಆಡಳಿತಗಾರ, ಜನಾನುರಾಗಿ, ಹಲವು ಕ್ರಾಂತಿಕಾರಿ ಆಡಳಿತ ಸುಧಾರಣೆಯನ್ನು ತಂದ ಟಿಪ್ಪು ಸುಲ್ತಾನ್ ಜಯಂತಿಯನ್ನು 2015 ರಲ್ಲಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ, ಸರ್ಕಾರಿ ಕಾರ್ಯಕ್ರಮವಾಗಿ ಆಯೋಜನೆ ಮಾಡಿತ್ತು.
ಆದರೆ ದುರಂತ ನೋಡಿ, ಇವತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಕೆಪಿಸಿಸಿಯ ಟ್ವಿಟರ್ ಹ್ಯಾಂಡಲ್ X ಅನ್ನು ನೋಡುತ್ತಿದ್ದೆ, ಅಲ್ಲಿ ಒನಕೆ ಓಬವ್ವ ಜಯಂತಿಯ ಶುಭಾಶಯ ಇದೆ, ಕುವೆಂಪುರವರ ಪುಣ್ಯ ಸ್ಮರಣೆಯ ಸಂದೇಶ ಇದೆ, ಆದರೆ ಟಿಪ್ಪು ಜಯಂತಿಯ ಬಗ್ಗೆ ಒಂದು ಸಣ್ಣ ಶುಭಾಶಯ ಇಲ್ಲ.
ಈ ಬಾರಿ ಕಾಂಗ್ರೆಸ್ ಪಡೆದ ಒಟ್ಟು ಮತದಲ್ಲಿ ಶೇಕಡ 30ರಷ್ಟು ಮುಸಲ್ಮಾನರ ಮತ, ಆದರೆ ಟಿಪ್ಪು ಸುಲ್ತಾನರ ಜಯಂತಿಯ ಶುಭಾಶಯವನ್ನು ಕೋರದ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಮತ್ತು ಕಾಂಗ್ರೆಸ್ ಪಕ್ಷ ಇಷ್ಟೊಂದು ಕೃತಘ್ನರಾಗಬಾರದಿತ್ತು.
ಕನಿಷ್ಠ ಟಿಪ್ಪು ಜಯಂತಿಯ ಬಗ್ಗೆ ಒಂದು ಶುಭಾಶಯವನ್ನು ಕೂಡ ಕೋರದ ಕಾಂಗ್ರೆಸ್ ನಾಯಕರು ಇಷ್ಟೊಂದು ಹೃದಯ ಹೀನರಾಗುತ್ತಾರೆ ಎಂದು ಕನಸು ಮನಸ್ಸಿನಲ್ಲೂ ಯೋಚಿಸಿರಲಿಲ್ಲ.
~ಅಬ್ದುಲ್ ಮಜೀದ್,
ರಾಜ್ಯಾಧ್ಯಕ್ಷರು, ಎಸ್ಡಿಪಿಐ ಕರ್ನಾಟಕ
ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಯಾಸ್ಮಿನ್ ಫಾರೂಖಿ ಅವರು, ಪಶ್ಚಿಮ ಏಷ್ಯಾದಲ್ಲಿ…
آج بنگلورو میں سوشیل ڈیموکریٹک پارٹی آف انز ٹی آف انڈیا (SDPI) کی اسٹیٹ کمیٹی…
ಇಂದು ಬೆಂಗಳೂರಿನಲ್ಲಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ರಾಜ್ಯ ಸಮಿತಿ ಸದಸ್ಯೆಯಾಗಿದ್ದ ದಿವಂಗತ ಆಯಿಷಾ ಶಬ್ಬಿರ್ ಅವರ…
Aaj Bengaluru mein Social Democratic Party of India (SDPI) ki State Committee Member marhooma Ayesha…