Categories: featureNewsPolitics

ಉಡುಪಿಯಲ್ಲಿ ಒಂದೇ ಕುಟುಂಬದ ನಾಲ್ಕು ಜನರ ಹತ್ಯೆ ಉಡುಪಿಯ ಇತಿಹಾಸದಲ್ಲೇ ಕಂಡು ಕೇಳರಿಯದ ಬೆಚ್ಚಿ ಬೀಳಿಸುವ ಘಟನೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಬಿಗಿಗೊಳಿಸಬೇಕು:ಪ್ರೊಫೆಸರ್ ಸೈದಾ ಸಾದಿಯಾ, ಉಪಾಧ್ಯಕ್ಷರು ಎಸ್‌ಡಿಪಿಐ ಕರ್ನಾಟಕ

ಬೆಂಗಳೂರು, 13 ನವೆಂಬರ್ 2023: ಉಡುಪಿ ಜಿಲ್ಲೆಯ ನೇಜಾರಿನಲ್ಲಿ ನಡೆದಿರುವ ಒಂದೇ ಕುಟುಂಬದ ನಾಲ್ಕು ಸದಸ್ಯರ ಕೊಲೆ ಬೀಭತ್ಸ ಮತ್ತು ಬೆಚ್ಚಿಬೀಳಿಸುವ ಘಟನೆ. ಉಡುಪಿಯ ಇತಿಹಾಸದಲ್ಲೇ ಕಂಡು ಕೇಳರಿಯದ ಹತ್ಯಾಕಾಂಡ ಇದಾಗಿದ್ದು, ಇದನ್ನು ಕಠಿಣ ಪದಗಳಿಂದ ಖಂಡಿಸುತ್ತೇನೆ ಎಂದು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ಪಕ್ಷದ ಉಪಾಧ್ಯಕ್ಷರಾದ ಸೈದಾ ಸಾದಿಯಾ ಅವರು ತಮ್ಮ ಪತ್ರಿಕಾ ಪ್ರಕಟಣೆಯ ಮೂಲಕ ತಿಳಿಸಿದ್ದಾರೆ.

ಈ ಘಟನೆಯಿಂದ ಇಡೀ ಉಡುಪಿ ಜಿಲ್ಲೆ ಬೆಚ್ಚಿಬಿದ್ದಿದೆ. ಸರ್ಕಾರ ತಕ್ಷಣ ಅಪರಾಧಿಗಳನ್ನು ಬಂಧಿಸಬೇಕು. ಆ ಮೂಲಕ ಇಲ್ಲಿ ದಿಗ್ಭ್ರಮೆಯಲ್ಲಿರುವ ಜನರಿಗೆ ಧೈರ್ಯ ತುಂಬುವ ಕೆಲಸ ಆಗಬೇಕಿದೆ. ರಾಜ್ಯಾದ್ಯಂತ, ಅದರಲ್ಲೂ ವಿಶೇಷವಾಗಿ ಕರಾವಳಿ ಜಿಲ್ಲೆಗಳಲ್ಲಿ ಕಾನೂನು ಸುವ್ಯವಸ್ಥೆ ಬಿಗಿಗೊಳಿಸಬೇಕಾದ ಅನಿವಾರ್ಯತೆ ಇದೆ. ಆ ಮೂಲಕ ಮುಂದೆ ಇಂತಹ ದುರಂತಗಳು ನಡೆಯದಂತೆ ಎಚ್ಚರವಹಿಸಬೇಕು ಎಂದು ಸಾದಿಯಾ ಅವರು ತಮ್ಮ ಪ್ರಕಟಣೆಯಲ್ಲಿ ಆಗ್ರಹಿಸಿದ್ದಾರೆ.

admin

Recent Posts

NAMAZ-E-JANAZA & TADFEEN

Announcement AYESHA SHABBIR 25/02/26, WEDNESDAY @1:30 Pm ZOHAR Namaz @MASJID-E-UQBA Saraipalya, THANISANDRA, BANGALORE Scan for…

20 hours ago

Condolences

We are deeply saddened by the demise of AYESHA MADAM SWC Member and WIM State…

23 hours ago

“ಅನ್ಯಾಯದ ವಿರುದ್ಧ ಎದ್ದ ಸ್ವರವೇ ಸ್ವಾತಂತ್ರ್ಯದ ಬೀಜವಾಗುತ್ತದೆ.”

ಭಾರತದ ಸ್ವಾಭಿಮಾನದ ಸಂಕೇತವಾಗಿ, ಬ್ರಿಟಿಷರ ದಮನಕ್ಕೆ ತಲೆಬಾಗದೆ ಹೋರಾಡಿದ ಧೈರ್ಯಶಾಲಿ ವೀರನಾರಿ ಕಿತ್ತೂರು ರಾಣಿ ಚೆನ್ನಮ್ಮ ಅವರ ಪುಣ್ಯತಿಥಿಯಂದು ಅವರ…

4 days ago