ಬೆಂಗಳೂರು, 13 ನವೆಂಬರ್ 2023: ಉಡುಪಿ ಜಿಲ್ಲೆಯ ನೇಜಾರಿನಲ್ಲಿ ನಡೆದಿರುವ ಒಂದೇ ಕುಟುಂಬದ ನಾಲ್ಕು ಸದಸ್ಯರ ಕೊಲೆ ಬೀಭತ್ಸ ಮತ್ತು ಬೆಚ್ಚಿಬೀಳಿಸುವ ಘಟನೆ. ಉಡುಪಿಯ ಇತಿಹಾಸದಲ್ಲೇ ಕಂಡು ಕೇಳರಿಯದ ಹತ್ಯಾಕಾಂಡ ಇದಾಗಿದ್ದು, ಇದನ್ನು ಕಠಿಣ ಪದಗಳಿಂದ ಖಂಡಿಸುತ್ತೇನೆ ಎಂದು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್ಡಿಪಿಐ) ಪಕ್ಷದ ಉಪಾಧ್ಯಕ್ಷರಾದ ಸೈದಾ ಸಾದಿಯಾ ಅವರು ತಮ್ಮ ಪತ್ರಿಕಾ ಪ್ರಕಟಣೆಯ ಮೂಲಕ ತಿಳಿಸಿದ್ದಾರೆ.
ಈ ಘಟನೆಯಿಂದ ಇಡೀ ಉಡುಪಿ ಜಿಲ್ಲೆ ಬೆಚ್ಚಿಬಿದ್ದಿದೆ. ಸರ್ಕಾರ ತಕ್ಷಣ ಅಪರಾಧಿಗಳನ್ನು ಬಂಧಿಸಬೇಕು. ಆ ಮೂಲಕ ಇಲ್ಲಿ ದಿಗ್ಭ್ರಮೆಯಲ್ಲಿರುವ ಜನರಿಗೆ ಧೈರ್ಯ ತುಂಬುವ ಕೆಲಸ ಆಗಬೇಕಿದೆ. ರಾಜ್ಯಾದ್ಯಂತ, ಅದರಲ್ಲೂ ವಿಶೇಷವಾಗಿ ಕರಾವಳಿ ಜಿಲ್ಲೆಗಳಲ್ಲಿ ಕಾನೂನು ಸುವ್ಯವಸ್ಥೆ ಬಿಗಿಗೊಳಿಸಬೇಕಾದ ಅನಿವಾರ್ಯತೆ ಇದೆ. ಆ ಮೂಲಕ ಮುಂದೆ ಇಂತಹ ದುರಂತಗಳು ನಡೆಯದಂತೆ ಎಚ್ಚರವಹಿಸಬೇಕು ಎಂದು ಸಾದಿಯಾ ಅವರು ತಮ್ಮ ಪ್ರಕಟಣೆಯಲ್ಲಿ ಆಗ್ರಹಿಸಿದ್ದಾರೆ.
ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು, ಹಣದ ಬಲ ಮತ್ತು ರಾಜ್ಯ ಯಂತ್ರಾಂಗದ ಬಹಿರಂಗ ದುರುಪಯೋಗದ ಮೂಲಕ ಪಡೆದ…
ಹುತಾತ್ಮ ದಿನ 04 ಮೇ "ನೂರು ವರ್ಷ ನರಿಯಾಗಿ ಬದುಕುವುದಕ್ಕಿಂತ ಒಂದು ದಿನ ಹುಲಿಯಾಗಿ ಬದುಕುವುದು ಉತ್ತಮ." ~ಅಬ್ದುಲ್ ಮಜೀದ್,ರಾಜ್ಯಾಧ್ಯಕ್ಷರು…
ಕೇಂದ್ರ ಸರ್ಕಾರದ ನಿರಂತರ ಬೆಲೆ ಏರಿಕೆ ನೀತಿಯಿಂದ ಸಾಮಾನ್ಯ ಜನರು, ವಿಶೇಷವಾಗಿ ಬಡವರು ಮತ್ತು ಮಧ್ಯಮ ವರ್ಗದವರು ತೀವ್ರ ಸಂಕಷ್ಟಕ್ಕೆ…
-7 ಜನರು ಮೃತಪಟ್ಟಿದ್ದಾರೆ – ಇವರಲ್ಲಿ 2 ಮಕ್ಕಳು ಸೇರಿದ್ದಾರೆ! ಹಳೆಯದು, ಬಿರುಕು ಬಿದ್ದ ಗೋಡೆ ಕುಸಿದು ಬಡ ಮತ್ತು…
01 MAY 2026 "Respect Labour. Restore Dignity. Ensure Justice. This Labour Day, let every worker…