Categories: featureNewsPolitics

ಉಡುಪಿಯಲ್ಲಿ ಒಂದೇ ಕುಟುಂಬದ ನಾಲ್ಕು ಜನರ ಹತ್ಯೆ ಉಡುಪಿಯ ಇತಿಹಾಸದಲ್ಲೇ ಕಂಡು ಕೇಳರಿಯದ ಬೆಚ್ಚಿ ಬೀಳಿಸುವ ಘಟನೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಬಿಗಿಗೊಳಿಸಬೇಕು:ಪ್ರೊಫೆಸರ್ ಸೈದಾ ಸಾದಿಯಾ, ಉಪಾಧ್ಯಕ್ಷರು ಎಸ್‌ಡಿಪಿಐ ಕರ್ನಾಟಕ

ಬೆಂಗಳೂರು, 13 ನವೆಂಬರ್ 2023: ಉಡುಪಿ ಜಿಲ್ಲೆಯ ನೇಜಾರಿನಲ್ಲಿ ನಡೆದಿರುವ ಒಂದೇ ಕುಟುಂಬದ ನಾಲ್ಕು ಸದಸ್ಯರ ಕೊಲೆ ಬೀಭತ್ಸ ಮತ್ತು ಬೆಚ್ಚಿಬೀಳಿಸುವ ಘಟನೆ. ಉಡುಪಿಯ ಇತಿಹಾಸದಲ್ಲೇ ಕಂಡು ಕೇಳರಿಯದ ಹತ್ಯಾಕಾಂಡ ಇದಾಗಿದ್ದು, ಇದನ್ನು ಕಠಿಣ ಪದಗಳಿಂದ ಖಂಡಿಸುತ್ತೇನೆ ಎಂದು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ಪಕ್ಷದ ಉಪಾಧ್ಯಕ್ಷರಾದ ಸೈದಾ ಸಾದಿಯಾ ಅವರು ತಮ್ಮ ಪತ್ರಿಕಾ ಪ್ರಕಟಣೆಯ ಮೂಲಕ ತಿಳಿಸಿದ್ದಾರೆ.

ಈ ಘಟನೆಯಿಂದ ಇಡೀ ಉಡುಪಿ ಜಿಲ್ಲೆ ಬೆಚ್ಚಿಬಿದ್ದಿದೆ. ಸರ್ಕಾರ ತಕ್ಷಣ ಅಪರಾಧಿಗಳನ್ನು ಬಂಧಿಸಬೇಕು. ಆ ಮೂಲಕ ಇಲ್ಲಿ ದಿಗ್ಭ್ರಮೆಯಲ್ಲಿರುವ ಜನರಿಗೆ ಧೈರ್ಯ ತುಂಬುವ ಕೆಲಸ ಆಗಬೇಕಿದೆ. ರಾಜ್ಯಾದ್ಯಂತ, ಅದರಲ್ಲೂ ವಿಶೇಷವಾಗಿ ಕರಾವಳಿ ಜಿಲ್ಲೆಗಳಲ್ಲಿ ಕಾನೂನು ಸುವ್ಯವಸ್ಥೆ ಬಿಗಿಗೊಳಿಸಬೇಕಾದ ಅನಿವಾರ್ಯತೆ ಇದೆ. ಆ ಮೂಲಕ ಮುಂದೆ ಇಂತಹ ದುರಂತಗಳು ನಡೆಯದಂತೆ ಎಚ್ಚರವಹಿಸಬೇಕು ಎಂದು ಸಾದಿಯಾ ಅವರು ತಮ್ಮ ಪ್ರಕಟಣೆಯಲ್ಲಿ ಆಗ್ರಹಿಸಿದ್ದಾರೆ.

admin

Recent Posts

ಫ್ಯಾಶಿಷ್ಟರು ಗೌರಿ ಲಂಕೇಶ್‌ ಅವರನ್ನು ಗುಂಡಿಕ್ಕಿ ಕೊಂದ ದಿನ.

5 ಸೆಪ್ಟೆಂಬರ್ 2017 ನಾವು ಮರೆಯುವುದಿಲ್ಲ SDPIKarnataka #GowriLankesh

2 weeks ago

Will fight for every citizen of this country

Prakash Raj, Abdul Majeed SDPI and several others detained by Bengaluru Police During Election Commission…

2 weeks ago

ಪ್ರೆಸ್ ರಿಲೀಸ್

ಜೈಪುರದಲ್ಲಿ ಸರ್ಕಾರಿ ಶಾಲಾ ತಪಾಸಣೆಗೆ ತೆರಳಿದ್ದ ತಂಡದ ಮೇಲೆ ದಾಳಿ ಖಂಡನೀಯ: ನ್ಯಾಯಾಂಗ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ…

3 weeks ago