ಪತ್ರಿಕಾ ಪ್ರಕಟಣೆ

KEA ಪರೀಕ್ಷೆಗಳಲ್ಲಿ ಮಂಗಳಸೂತ್ರ, ಕಾಲುಂಗರಕ್ಕೆ ಅವಕಾಶ ನೀಡಿರುವುದು ಸ್ವಾಗತಾರ್ಹ. ಆದರೆ ಹಿಜಾಬ್ ಮೇಲೆ ದ್ವೇಷ ಏಕೆ?: ಅಬ್ದುಲ್ ಮಜೀದ್, ರಾಜ್ಯಾಧ್ಯಕ್ಷರು, ಎಸ್‌ಡಿಪಿಐ

ಬೆಂಗಳೂರು, 15 ನವೆಂಬರ್ 2023: ಕಳೆದ ಬಾರಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಪರೀಕ್ಷೆ ನಡೆಸಿದ ಸಂದರ್ಭದಲ್ಲಿ ಮಂಗಳಸೂತ್ರ, ಕಾಲುಂಗುರ ಮುಂತಾದ ಮಹಿಳೆಯರ ವಸ್ತುಗಳನ್ನು ತೆಗೆಸಿದ್ದರ ವಿರುದ್ಧ ನಮ್ಮ ಪಕ್ಷ ತೀವ್ರವಾಗಿ ವಿರೋಧಿಸಿತ್ತು. ಆನಂತರ ಈಗ ಮಂಗಳಸೂತ್ರ, ಕಾಲುಂಗುರಕ್ಕೆ ಅನುಮತಿ ನೀಡಿರುವ ಕಾಂಗ್ರೆಸ್ ಸರ್ಕಾರ ಹಿಜಾಬನ್ನು ಮಾತ್ರ ನಿಷೇಧಿಸಿದೆ. ಬಿಜೆಪಿಯಂತೆ ಕಾಂಗ್ರೆಸ್ ಕೂಡ ಹಿಜಾಬ್ ವಿರೋಧಿ ಎಂಬುದಕ್ಕೆ ಇದೊಂದು ನಿದರ್ಶನ ಇಷ್ಟಕ್ಕೂ ಈ ಸರ್ಕಾರಗಳಿಗೆ ಹಿಜಾಬ್ ಮೇಲೆ ದ್ವೇಷ ಏಕೆ? ಎಂದು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ಪಕ್ಷದ ರಾಜ್ಯಾಧ್ಯಕ್ಷರಾದ ಅಬ್ದುಲ್ ಮಜಿದ್ ಅವರು ತಮ್ಮ ಪತ್ರಿಕಾ ಪ್ರಕಟಣೆಯ ಮೂಲಕ ಪ್ರಶ್ನೆ ಮಾಡಿದ್ದಾರೆ.

ನೇಮಕಾತಿಯಲ್ಲಿ ಅಕ್ರಮಗಳು ನಿರಂತರವಾಗಿ ಅವ್ಯಾಹತವಾಗಿ ನಡೆಯುತ್ತಲೇ ಬರುತ್ತಿವೆ. ಕಳೆದ ಬಿಜೆಪಿ ಸರ್ಕಾರದಲ್ಲಿ ನಡೆದ ಪಿ ಎಸ್ ಐ ನೇಮಕಾತಿ ಹಗರಣ ಇರಬಹುದು, ಸಹಾಯಕ ಶಿಕ್ಷಕರ ನೇಮಕಾತಿ ಇರಬಹುದು ಅಥವಾ ಇತ್ತೀಚೆಗೆ ನಡೆದ ಕೆಇಎ ಪರೀಕ್ಷೆಯಲ್ಲಿ ನಡೆದಿರುವ ಅಕ್ರಮ ಮತ್ತು ಆರ್ ಡಿ ಪಾಟೀಲ್ ನಂತಹ ವ್ಯಕ್ತಿಯ ಬಂಧನದ ಪ್ರಕರಣಗಳೇ ಇರಬಹುದು, ಇದ್ಯಾವುದನ್ನು ಕೂಡ ತಡೆಯುವ ಗಂಭೀರ ಪ್ರಯತ್ನ ಅಥವಾ ಸಾಮರ್ಥ್ಯ ಸರ್ಕಾರಗಳಿಗೆ ಇರುವಂತೆ ಕಂಡು ಬರುತ್ತಿಲ್ಲ. ಆದರೆ ಇದನ್ನೇ ನೆಪವಾಗಿಟ್ಟುಕೊಂಡು ಮಹಿಳೆಯರ ಗೌರವಕ್ಕೆ ಧಕ್ಕೆ ಬರುವಂತೆ ನಡೆದುಕೊಳ್ಳುವ ಪ್ರಯತ್ನವಂತು ಬಹಳ ಗಂಭೀರವಾಗಿಯೇ ನಡೆಯುತ್ತಿದೆ. ಅಲ್ಪಸಂಖ್ಯಾತ ಮಹಿಳೆಯರ ಸಾಂವಿಧಾನಿಕ ಹಕ್ಕುಗಳಾದ ತಮ್ಮ ಇಚ್ಛೆಯ ವಸ್ತ್ರ ಧರಿಸುವ ಮತ್ತು ತಮ್ಮ ಧಾರ್ಮಿಕ ನಂಬಿಕೆಗಳಿಗೆ ಅನುಗುಣವಾಗಿ ನಡೆದುಕೊಳ್ಳುವ ಹಕ್ಕುಗಳನ್ನು ಮೊಟಕುಗೊಳಿಸುವ ಪ್ರಯತ್ನವಂತು ಪರೀಕ್ಷಾ ಕೇಂದ್ರಗಳಲ್ಲಿ ಎಗ್ಗು ಸಿಗ್ಗಿಲ್ಲದೆ ನಡೆದುಕೊಂಡು ಬರುತ್ತಿದೆ. ಬಿಜೆಪಿ ಮುಸ್ಲಿಂ ದ್ವೇಷದ ಕಾರಣಕ್ಕೆ ಹಿಜಾಬನ್ನು ನಿಷೇಧಿಸುವ ಅಸಂವಿಧಾನಿಕ ಕ್ರಮಕ್ಕೆ ಮುಂದಾಗುತ್ತದೆ. ತಾನು ಮಹಾ ಜಾತ್ಯಾತೀತ ಪಕ್ಷ ಎಂದು ಕರೆಸಿಕೊಳ್ಳುವ ಕಾಂಗ್ರೆಸ್ ಕೂಡ ಅಂತಹದ್ದೇ ಮನಸ್ಥಿತಿಯನ್ನು ಹೊಂದಿದೆ ಎನ್ನುವುದಕ್ಕೆ ಈಗ ಕೆಇಎ ಪರೀಕ್ಷೆಗಳಲ್ಲಿ ಹಿಜಾಬನ್ನು ಅನುಮತಿಸುವುದಿಲ್ಲ ಎಂಬ ನಿಯಮ ಮತ್ತೊಮ್ಮೆ ಸಾಬೀತುಪಡಿಸುತ್ತದೆ ಎಂದು ಮಜೀದ್ ಅವರು ತಮ್ಮ ಪ್ರಕಟಣೆಯಲ್ಲಿ ಆರೋಪಿಸಿದ್ದಾರೆ.

ಸರ್ಕಾರಕ್ಕೆ ಪರೀಕ್ಷಾ ಅಕ್ರಮಗಳನ್ನು ತಡೆಯಲೇಬೇಕು ಎಂಬ ಗಂಭೀರ ಉದ್ದೇಶವಿದ್ದರೆ ಎಲೆಕ್ಟ್ರಾನಿಕ್ ಸಾಧನಗಳನ್ನು ಹೊತ್ತಿರುವ ವ್ಯಕ್ತಿಯನ್ನು ಸ್ಕ್ಯಾನ್ ಮಾಡುವ ಸಾಕಷ್ಟು ತಂತ್ರಜ್ಞಾನ ಲಭ್ಯವಿದೆ. ಆ ತಂತ್ರಜ್ಞಾನವನ್ನು ಬಳಸುವ ಮೂಲಕ ಪರೀಕ್ಷಾ ಅಕ್ರಮಗಳನ್ನು ಸಂಪೂರ್ಣವಾಗಿ ತಡೆಯಬಹುದು. ಆದರೆ ಸರ್ಕಾರದಲ್ಲಿರುವ ಮಂತ್ರಿಗಳು, ಅಧಿಕಾರಿಗಳೇ ಈ ಅಕ್ರಮಗಳ ಭಾಗವಾಗಿರುವುದರಿಂದ ಅವುಗಳನ್ನು ತಡೆಯುವುದು ಸಾಧ್ಯವಾಗುತ್ತಿಲ್ಲವಷ್ಟೇ. ಆದರೆ ಅದೇ ನೆಪದಲ್ಲಿ ತಮ್ಮ ದ್ವೇಷ ಸಾಧನೆಯನ್ನು ಸಾಧಿಸಿಕೊಂಡು ಹೋಗುತ್ತಿರುವುದು ಸಾಮಾಜಿಕ ದ್ರೋಹ. ಸರ್ಕಾರ ಇಂತಹ ಭಾವನೆಗಳ ಜೊತೆ ಚೆಲ್ಲಾಟ ಆಡುವುದನ್ನು ನಿಲ್ಲಿಸಿ ಕೆಇಎ ಪರೀಕ್ಷೆಗಳಿಗೆ ಹಿಜಾಬ್ ಗೆ ಅನುಮತಿ ನೀಡಬೇಕು ಎಂದು ಮಜೀದ್ ಅವರು ಪ್ರಕಟಣೆಯಲ್ಲಿ ಒತ್ತಾಯಿಸಿದ್ದಾರೆ.

admin

Recent Posts

“Everyone’s Contribution is Essential for Social Transformation – Afsar Kodlipete”

Press Release Gulbarga, Sept 11:At the SDPI leaders’ meeting held in Gulbarga today, the party’s…

1 day ago

ಪತ್ರಿಕಾ ಪ್ರಕಟಣೆ<br><br>“ಸಮಾಜ ಪರಿವರ್ತನೆಗೆ ಪ್ರತಿಯೊಬ್ಬರ ಕೊಡುಗೆ ಅಗತ್ಯ – ಅಪ್ಸರ್ ಕೊಡ್ಲಿಪೇಟೆ”<br><br>ಗುಲ್ಬರ್ಗಾ, ಸೆಪ್ಟೆಂಬರ್ 11:<br>ಇಂದು ಗುಲ್ಬರ್ಗಾದಲ್ಲಿ ನಡೆದ ಎಸ್‌ಡಿಪಿಐ ನಾಯಕರ ಸಭೆಯಲ್ಲಿ, ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಅಪ್ಸರ್ ಕೊಡ್ಲಿಪೇಟೆ ಅವರು “ಸಮಾಜ ಪರಿವರ್ತನೆಗೆ ಪ್ರತಿಯೊಬ್ಬರ ಕೊಡುಗೆ” ಎಂಬ ವಿಷಯದ ಕುರಿತು ಪ್ರಮುಖ ಭಾಷಣ ಮಾಡಿದರು.<br><br>ತಮ್ಮ ಭಾಷಣದಲ್ಲಿ ಅವರು ಹೇಳಿದರು:<br>“ಸಮಾಜದಲ್ಲಿ ಬದಲಾವಣೆ ತರಲು ಕೇವಲ ಕನಸು ಕಾಣುವುದು ಸಾಕಾಗುವುದಿಲ್ಲ. ಪ್ರತಿಯೊಬ್ಬರೂ ತಮ್ಮದೇ ಆದ ಕೊಡುಗೆಯನ್ನು ನೀಡಿದಾಗ ಮಾತ್ರ ನಿಜವಾದ ಬದಲಾವಣೆ ಸಾಧ್ಯ. ಬದಲಾವಣೆಯ ಹಾದಿ ದೀರ್ಘ ಮತ್ತು ಕಠಿಣವಾಗಿದ್ದರೂ, ಇದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ. ನ್ಯಾಯ, ಸಮಾನತೆ ಮತ್ತು ಸಹೋದರತ್ವವನ್ನು ಸ್ಥಾಪಿಸಲು ನಂಬಿಕೆ, ಶ್ರಮ ಮತ್ತು ಬದ್ಧತೆ ಅಗತ್ಯ. ಎಸ್‌ಡಿಪಿಐ ಸದಸ್ಯರು ತಮ್ಮ ಸಮಯ, ಶಕ್ತಿ ಮತ್ತು ಸಂಪನ್ಮೂಲಗಳನ್ನು ಸಮಾಜಮುಖಿ ಹೋರಾಟಗಳಿಗೆ ಸಮರ್ಪಿಸಬೇಕು.”<br><br>“ಇಂದಿಗೂ ಸಾವಿರಾರು ಹಿಂದುಳಿದವರು, ಅಲ್ಪಸಂಖ್ಯಾತರು ಮತ್ತು ಬಡವರು ನ್ಯಾಯಕ್ಕಾಗಿ ಹೋರಾಟ ನಡೆಸುತ್ತಿದ್ದಾರೆ. ಅವರ ಹಕ್ಕುಗಳಿಗಾಗಿ ನಮ್ಮ ಕಾರ್ಯಕರ್ತರು ಪೊಲೀಸ್ ದೌರ್ಜನ್ಯ, ಸುಳ್ಳು ಕೇಸುಗಳು ಮತ್ತು ಬಂಧನಗಳನ್ನು ಸಹಿಸಿಕೊಂಡಿದ್ದಾರೆ. ಇದು ಅವರ ಬದ್ಧತೆಯ ಸಾಕ್ಷಿಯಾಗಿದೆ. ಎಸ್‌ಡಿಪಿಐ ಕೇವಲ ರಾಜಕೀಯ ಪಕ್ಷವಲ್ಲ, ಇದು ಶೋಷಿತರ ಕೂಗಿನ ಪ್ರತಿಧ್ವನಿ, ಸಾಮಾನ್ಯ ಜನರ ಕನಸುಗಳ ಪ್ರತೀಕ. ಹೀಗಾಗಿ ಪ್ರತಿಯೊಬ್ಬ ನಾಯಕ, ಕಾರ್ಯಕರ್ತ ಮತ್ತು ಅಭಿಮಾನಿ ತಮ್ಮ ಪಾತ್ರವನ್ನು ಅರಿತು, ಈ ಬದಲಾವಣೆಯ ಹಾದಿಯಲ್ಲಿ ತಮ್ಮದೇ ಆದ ಕೊಡುಗೆಯನ್ನು ನೀಡಬೇಕು,” ಎಂದು ಅವರು ಒತ್ತಿಹೇಳಿದರು.<br><br>ಸಭೆಯಲ್ಲಿ ಕಲಬುರಗಿ ಜಿಲ್ಲೆಯ ರೈತರ ಮೇಲಿನ ನಡೆಯುತ್ತಿರುವ ವಂಚನೆಗಳ ವಿಷಯವೂ ಚರ್ಚಿಸಲಾಯಿತು. ರೈತ ಸಂಪರ್ಕ ಕೇಂದ್ರಗಳಲ್ಲಿ ಅವಧಿ ಮೀರಿದ ಕ್ರಿಮಿನಾಶಕ ಮತ್ತು ಗೊಬ್ಬರಗಳನ್ನು ರೈತರಿಗೆ ಮಾರಾಟ ಮಾಡಲಾಗುತ್ತಿದೆ. ಕೆಲ ಅಂಗಡಿಗಳು ಎಂಆರ್‌ಪಿ ದರಕ್ಕಿಂತ ಎರಡು ಪಟ್ಟು ಹಣ ಪಡೆದು ಗೊಬ್ಬರವನ್ನು ಮಾರಾಟ ಮಾಡುತ್ತಿರುವುದು ಗಂಭೀರ ಅನ್ಯಾಯವಾಗಿದೆ ಎಂದು ಜಿಲ್ಲಾಧ್ಯಕ್ಷ ಮೊಹಮ್ಮದ್ ಮೋಹಿಸಿನ್ ಖಂಡಿಸಿದರು. ರೈತರನ್ನು ಮೋಸಗೊಳಿಸಿದ ಅಂಗಡಿ ಮಾಲೀಕರು ಮತ್ತು ಕೃಷಿ ಇಲಾಖೆಯ ನಿರ್ಲಕ್ಷ್ಯಕ್ಕೆ ವಿರುದ್ಧವಾಗಿ ತಕ್ಷಣ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಸಭೆಯಲ್ಲಿ ಒತ್ತಾಯಿಸಲಾಯಿತು.<br><br>ಇದರ ಜೊತೆಗೆ ರೈತರ ಸಂಕಷ್ಟ, ನಿರುದ್ಯೋಗ, ಶಿಕ್ಷಣ ಮತ್ತು ಆರೋಗ್ಯದ ವಿಚಾರಗಳ ಮೇಲೂ ಚರ್ಚೆ ನಡೆಯಿತು.<br><br>ಈ ಸಂದರ್ಭದಲ್ಲಿ ಎಸ್‌ಡಿಪಿಐ ರಾಷ್ಟ್ರೀಯ ಸಮಿತಿ ಸದಸ್ಯೆ ಪ್ರೊಫೆಸರ್ ಸೈಯದಾ ಸಾದಿಯಾ ಹಾಗೂ ರಾಜ್ಯ ಸಮಿತಿ ಸದಸ್ಯ ಅಬ್ದುಲ್ ರಹೀಮ್ ಪಟೇಲ್ ರವರು ಸಂಘಟನೆಯ ಬಲವರ್ಧನೆ ಮತ್ತು ನಿಧಿ ಸಂಗ್ರಹಣೆಯ ಅಗತ್ಯತೆಯ ಕುರಿತು ಮಾತನಾಡಿದರು.<br><br>ಜಿಲ್ಲಾ ಉಪಾಧ್ಯಕ್ಷ ಮಕ್ಬೂಲ್ ಅಹ್ಮದ್, ಪ್ರಧಾನ ಕಾರ್ಯದರ್ಶಿಗಳಾದ ಡಾ. ರಿಜ್ವಾನ್ ಮತ್ತು ಇಬ್ರಾಹಿಂ ಪಟೇಲ್, ವುಮೆನ್ ಇಂಡಿಯಾ ಮೂವ್‌ಮೆಂಟ್ ಜಿಲ್ಲಾ ಅಧ್ಯಕ್ಷೆ ಸೇರಿದಂತೆ ಜಿಲ್ಲಾ ಸಮಿತಿ ಸದಸ್ಯರು ಮತ್ತು ವಿಧಾನಸಭಾ ಕ್ಷೇತ್ರ ಮಟ್ಟದ ನಾಯಕರು ಸಕ್ರಿಯವಾಗಿ ಪಾಲ್ಗೊಂಡಿದ್ದರು.

1 day ago

بار بار آر ایس ایس کے جال میں پھنستی ہوئی ریاستی کانگریس حکومت ۔قربانی کے بکرے بن رہے ہیں مسلمان

پریس ریلیز بنگلورو : 10 ستمبر : کرناٹک میں کانگریس حکومت تقریباً 95% مسلم برادری…

2 days ago

PRESS RELEASE

BAAR BAAR RSS KE JAAL MEIN PHANS'TI HUI RIYAASTI CONGRESS HUKUMAT -QURBANI KE BAKRAY BAN…

2 days ago

ಪತ್ರಿಕಾ ಪ್ರಕಟಣೆ

ಮತ್ತೆ ಮತ್ತೆ ಆರ್ ಎಸ್ಎಸ್ ಖೇಡ್ದಾಕ್ಕೆ ಬೀಳುತ್ತಿರುವ ರಾಜ್ಯ ಕಾಂಗ್ರೇಸ್ ಸರ್ಕಾರ - ಬಲಿ ಪಶುಗಳಾಗುತ್ತಿರುವ ಮುಸ್ಲಿಮರು ಬೆಂಗಳೂರು :…

2 days ago