Categories: featureNewsPolitics

SDPI ರಾಜ್ಯ ಕಾರ್ಯಕಾರಿಣಿ ಸಭೆ 16.11.2023 ರಂದು ರಾಜ್ಯಧ್ಯಕ್ಷ ಅಬ್ದುಲ್ ಮಜೀದ್ ಅವರ ನೇತೃತ್ವದಲ್ಲಿ ಬೆಂಗಳೂರಿನ ಮುಖ್ಯ ಕಚೇರಿಯಲ್ಲಿ ನಡೆಯಿತು. ಸಭೆಯಲ್ಲಿ ಪಕ್ಷದ ದೇಣಿಗೆ ಸಂಗ್ರಹದ ಅವಲೋಕನ ನಡೆಯಿತು. ಸಭೆಯಲ್ಲಿ ಪ್ರಮುಖ ನಿರ್ಣಯಗಳನ್ನು ಕೈಗೊಳ್ಳಲಾಯಿತು.

  1. ಕಾಂತರಾಜ್ ಆಯೋಗದ ವರದಿಯನ್ನು ಸ್ವೀಕರಿಸಿ ಸಾರ್ವಜನಿಕಗೊಳಿಸಲು ಮತ್ತು ಮುಸ್ಲಿಮರ 2B ಮೀಸಲಾತಿ ಮರುಸ್ಥಾಪನೆ ಮತ್ತು ಶೇಕಡ 8 ಕ್ಕೆ ಏರಿಸಲು ಒತ್ತಾಯ.

ಹಿಂದಿನ ಬಿಜೆಪಿ ಸರ್ಕಾರ ರದ್ದುಪಡಿಸಿರುವ ಮುಸ್ಲಿಮರ 2B ಮೀಸಲಾತಿ ಮರುಸ್ಥಾಪಿಸನೆ ಮಾಡುವಂತೆ ಮತ್ತು ಮೀಸಲಾತಿ ಪ್ರಮಾಣವನ್ನು ಶೇಕಡ 8 ಕ್ಕೆ ಏರಿಸಲು ಹಾಗೂ ಕಾಂತರಾಜ್ ಆಯೋಗದ ವರದಿಯನ್ನು ಸ್ವೀಕರಿಸಿ ಸಾರ್ವಜನಿಕಗೊಳಿಸಲು ಮುಂದಿನ ಚಳಿಗಾಲ ಅಧಿವೇಶನದಲ್ಲಿ ಒತ್ತಾಯ ಪಡಿಸಬೇಕು ಎಂದು ಆಗ್ರಹಿಸಲು ಪಕ್ಷದ ವತಿಯಿಂದ ರಾಜ್ಯದ ಎಲ್ಲಾ ಶಾಸಕರನ್ನು ಭೇಟಿ ಮಾಡಿ ಮನವಿ ಪತ್ರ ಸಲ್ಲಿಸಲು ನಿರ್ಣಯವನ್ನು ಕೈಗೊಳ್ಳಲಾಯಿತು.

  1. ನೂತನ ರಾಜ್ಯ ಕಾರ್ಯದರ್ಶಿಗಳ ನೇಮಕ.

ಅಬ್ದುಲ್ ರಹಿಮ್ ಪಟೇಲ್ ಗುಲ್ಬರ್ಗ ಮತ್ತು ಮುಜಾಹೀದ್ ಪಾಷಾ ಬೆಂಗಳೂರು ಅವರನ್ನು ನೂತನವಾಗಿ ರಾಜ್ಯ ಕಾರ್ಯದರ್ಶಿಗಳಾಗಿ ನೇಮಕ ಮಾಡುವ ನಿರ್ಣಯವನ್ನು ಕೈಗೊಳ್ಳಲಾಯಿತು.

  1. ಉಡುಪಿಯಲ್ಲಿ ನಡೆದ ತಾಯಿ ಮತ್ತು ಮೂರು ಮಕ್ಕಳ ಕೊಲೆಗೆ ನ್ಯಾಯ ದೊರೆಯಬೇಕು.

ಉಡುಪಿಯಲ್ಲಿ ಕ್ರೂರಿ ಪ್ರವೀಣ್ ಚೌಗಲೆ ಕೈಯ್ಯಲ್ಲಿ ಬರ್ಬರವಾಗಿ ಕೊಲೆಯಾದ ಹಸೀನಾ ಮತ್ತು ಆಕೆಯ ಮೂರು ಮಕ್ಕಳ ಸಾವಿಗೆ ನ್ಯಾಯ ಸಿಗಬೇಕು. ಆರೋಪಿಗೆ ಕಠಿಣ ಶಿಕ್ಷೆಗೊಳಪಡಿಸಬೇಕು ಎಂದು ಒತ್ತಾಯಿಸುವ ನಿರ್ಣಯವನ್ನು ಕೈಗೊಳ್ಳಲಾಯಿತು.

admin

Recent Posts

ಸಂತಾಪಗಳು

ಲಿಯಾಕತ್ ಆಲಿ 3. 2026 ಕೊಡಗು ಜಿಲ್ಲೆಯ ಮಡಿಕೇರಿ ನಿವಾಸಿಯಾದ ಮಡಿಕೇರಿ ಹಿಂದಿನ ಪುರಸಭೆಯ ಮಾಜಿ ಉಪಾಧ್ಯಕ್ಷ ಲಿಯಾಕತ್ ಆಲಿ…

2 days ago

ಪಶ್ಚಿಮ ಏಷ್ಯಾ ಸಂಘರ್ಷದಿಂದ ಉಂಟಾಗಿರುವ ಎಲ್‌.ಪಿ.ಜಿ ಕೊರತೆ ಮತ್ತು ರೆಸ್ಟೋರೆಂಟ್‌ಗಳ ಸಂಕಷ್ಟ – ಕೇಂದ್ರ ಸರ್ಕಾರದ ನಿರ್ಲಕ್ಷ ನಡೆಗೆ ತೀವ್ರಖಂಡನೆ: ಎಸ್.ಡಿ.ಪಿ.ಐ.

ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಯಾಸ್ಮಿನ್ ಫಾರೂಖಿ ಅವರು, ಪಶ್ಚಿಮ ಏಷ್ಯಾದಲ್ಲಿ…

4 days ago

تعزيتي خطاب مرحومهعائشہ شبیر

آج بنگلورو میں سوشیل ڈیموکریٹک پارٹی آف انز ٹی آف انڈیا (SDPI) کی اسٹیٹ کمیٹی…

6 days ago

ಸಾಂತ್ವನ ಸಭೆ ಆಯಿಷಾ ಶಬ್ಬಿರ್

ಇಂದು ಬೆಂಗಳೂರಿನಲ್ಲಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ರಾಜ್ಯ ಸಮಿತಿ ಸದಸ್ಯೆಯಾಗಿದ್ದ ದಿವಂಗತ ಆಯಿಷಾ ಶಬ್ಬಿರ್ ಅವರ…

6 days ago

Taziyati Jalsa Marhooma Ayesha Shabbir

Aaj Bengaluru mein Social Democratic Party of India (SDPI) ki State Committee Member marhooma Ayesha…

6 days ago

ಸಂತಾಪ ಸಭೆ

ಮರ್ಹೂಮಾ ಆಯಿಷಾ ಶಬೀರ್ تعزیتی اجلاس مرحومہ عائشہ شبیر آپ کی جدوجہد، اخلاص اور خدمت ملت…

1 week ago