ಹಿಂದಿನ ಬಿಜೆಪಿ ಸರ್ಕಾರ ರದ್ದುಪಡಿಸಿರುವ ಮುಸ್ಲಿಮರ 2B ಮೀಸಲಾತಿ ಮರುಸ್ಥಾಪಿಸನೆ ಮಾಡುವಂತೆ ಮತ್ತು ಮೀಸಲಾತಿ ಪ್ರಮಾಣವನ್ನು ಶೇಕಡ 8 ಕ್ಕೆ ಏರಿಸಲು ಹಾಗೂ ಕಾಂತರಾಜ್ ಆಯೋಗದ ವರದಿಯನ್ನು ಸ್ವೀಕರಿಸಿ ಸಾರ್ವಜನಿಕಗೊಳಿಸಲು ಮುಂದಿನ ಚಳಿಗಾಲ ಅಧಿವೇಶನದಲ್ಲಿ ಒತ್ತಾಯ ಪಡಿಸಬೇಕು ಎಂದು ಆಗ್ರಹಿಸಲು ಪಕ್ಷದ ವತಿಯಿಂದ ರಾಜ್ಯದ ಎಲ್ಲಾ ಶಾಸಕರನ್ನು ಭೇಟಿ ಮಾಡಿ ಮನವಿ ಪತ್ರ ಸಲ್ಲಿಸಲು ನಿರ್ಣಯವನ್ನು ಕೈಗೊಳ್ಳಲಾಯಿತು.
ಅಬ್ದುಲ್ ರಹಿಮ್ ಪಟೇಲ್ ಗುಲ್ಬರ್ಗ ಮತ್ತು ಮುಜಾಹೀದ್ ಪಾಷಾ ಬೆಂಗಳೂರು ಅವರನ್ನು ನೂತನವಾಗಿ ರಾಜ್ಯ ಕಾರ್ಯದರ್ಶಿಗಳಾಗಿ ನೇಮಕ ಮಾಡುವ ನಿರ್ಣಯವನ್ನು ಕೈಗೊಳ್ಳಲಾಯಿತು.
ಉಡುಪಿಯಲ್ಲಿ ಕ್ರೂರಿ ಪ್ರವೀಣ್ ಚೌಗಲೆ ಕೈಯ್ಯಲ್ಲಿ ಬರ್ಬರವಾಗಿ ಕೊಲೆಯಾದ ಹಸೀನಾ ಮತ್ತು ಆಕೆಯ ಮೂರು ಮಕ್ಕಳ ಸಾವಿಗೆ ನ್ಯಾಯ ಸಿಗಬೇಕು. ಆರೋಪಿಗೆ ಕಠಿಣ ಶಿಕ್ಷೆಗೊಳಪಡಿಸಬೇಕು ಎಂದು ಒತ್ತಾಯಿಸುವ ನಿರ್ಣಯವನ್ನು ಕೈಗೊಳ್ಳಲಾಯಿತು.
SDPIKarnataka #NepalFloods
ಜೈಪುರದಲ್ಲಿ ಸರ್ಕಾರಿ ಶಾಲಾ ತಪಾಸಣೆಗೆ ತೆರಳಿದ್ದ ತಂಡದ ಮೇಲೆ ದಾಳಿ ಖಂಡನೀಯ: ನ್ಯಾಯಾಂಗ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ…