Categories: featureNewsPolitics

ಚಾಮರಾಜನಗರ ಆಕ್ಸಿಜನ್ ದುರಂತ: ಮೃತರ ಕುಟುಂಬದ ಸದಸ್ಯರೊಬ್ಬರಿಗೆ ಸರ್ಕಾರಿ ಉದ್ಯೋಗ ಕಲ್ಪಿಸಲು ಸರ್ಕಾರಕ್ಕೆ ಎಸ್‌ಡಿಪಿಐ ಒತ್ತಾಯ

ಜಾಮರಾಜನಗರ, ಡಿ 4, 2023: ಜಾಮರಾಜನಗರ ಜಿಲ್ಲೆಯಲ್ಲಿ ಕೋವಿಡ್ ಸಂದರ್ಭದಲ್ಲಿ ಸಂಭವಿಸಿದ ಅಕ್ಸಿಜನ್‌ ದುರಂತದಲ್ಲಿ ಮಡಿದ ಸಂತ್ರಸ್ತರ ಕುಟುಂಬ ಸದಸ್ಯರೊಬ್ಬರಿಗೆ ಉದ್ಯೋಗ ನೀಡುವ ಸರ್ಕಾರದ ಭರವಸೆ ಇಂದಿಗೂ ಈಡೇರಿಲ್ಲ.ಸುಮಾರು 32 ಜನರ ಪಟ್ಟಿಯನ್ನು ಸರ್ಕಾರಕ್ಕೆ ಸಲ್ಲಿಸಿರುವುದಾಗಿ ಜಿಲ್ಲಾಧಿಕಾರಿ ಸಿ ಟಿ ಶಿಲ್ಪಾನಾಗ್‌ ಮಾಹಿತಿ ನೀಡಿದರು. ಚಾಮರಾಜನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಆಕ್ಸಿಜನ್‌ ಸಂತ್ರಸ್ತ ಕುಟುಂಬಸ್ಥರು ಮನವಿ ಸಲ್ಲಿಸಿದ ವೇಳೆ ಮಾತನಾಡಿದ ಜಿಲ್ಲಾಧಿಕಾರಿ ಶಿಲ್ಪಾನಾಗ್‌ ಅಕ್ಸಿಜನ್ ದುರಂತದಲ್ಲಿ ಮೃತಪಟ್ಟ ಕುಟುಂಬಸ್ಥರಿಗೆ ಉದ್ಯೋಗ ಕಲ್ಪಿಸುವ ನಿಟ್ಟಿನಲ್ಲಿ ಸುಮಾರು 32 ಜನರ ಹೆಸರನ್ನು ಸರ್ಕಾರಕ್ಕೆ ಕಳುಹಿಸಿಕೊಡಲಾಗಿದೆ.
ಈ‌ ಮೊದಲು 24 ಜನರನ್ನು ಪಟ್ಟಿ ಮಾಡಲಾಗಿತ್ತು. ಈಗ ಒಟ್ಟು 32 ಮಂದಿಯ ಹೆಸರನ್ನು ಕಳುಹಿಸಿಕೊಡಲಾಗಿದೆ. ಚಾಮರಾಜನಗರ ವೈದ್ಯಕೀಯ ಕಾಲೇಜು, ಅರೋಗ್ಯ ಇಲಾಖೆ ಅಥವಾ ಇನ್ನಿತರ ಇಲಾಖೆಗಳಲ್ಲಿ ಖಾಲಿ ಇರುವ ಸರ್ಕಾರಿ ಉದ್ಯೋಗ ಕಲ್ಪಿಸಿ ಕೊಡುವಂತೆ ಕ್ರಮ ವಹಿಸಲಾಗಿದೆ’ ಎಂದು ಸಂತ್ರಸ್ತ ಕುಟುಂಬಗಳಿಗೆ ಭರವಸೆ ನೀಡಿದರು. ಅದಷ್ಟು ಬೇಗ ಸಂತ್ರಸ್ತ ಕುಟುಂಬಸ್ಥರಿಗೆ ಉದ್ಯೋಗ ದೊರಕಿಸಿಕೊಡುವ ನಿಟ್ಟಿನಲ್ಲಿ ಪ್ರಯತ್ನ ಮಾಡಲಾಗುವುದು’ ಎಂದರು.
ಇದೇ ಸಂದರ್ಭದಲ್ಲಿ ಎಸ್‌ಡಿಪಿಐ ಜಿಲ್ಲಾಧ್ಯಕ್ಷ ಅಬ್ರಾರ್‌ ಅಹಮ್ಮದ್‌ ಮಾತನಾಡಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಿಲ್ಲೆಗೆ ಭೇಟಿ ನೀಡಿದ್ದ ಸಮಯದಲ್ಲಿ, ಆಕ್ಸಿಜನ್‌ ದುರಂತವನ್ನು ವಿಶೇಷ ಪ್ರಕರಣ ಎಂದು ಪರಿಗಣಿಸಿ ಮೃತ ಕುಟುಂಬಸ್ಥರಿಗೆ ಉದ್ಯೋಗ ನೀಡುವುದಾಗಿ ಭರವಸೆ ನೀಡಿದ್ದರು. ಈ ನಿಟ್ಟಿನಲ್ಲಿ ಆಕ್ಸಿಜನ್‌ದುರಂತದಲ್ಲಿ ಮೃತಪಟ್ಟ ಕುಟುಂಬಸ್ಥರಲ್ಲಿ ಒಬ್ಬರಿಗೆ ಆದಷ್ಟು ಬೇಗ ಸರ್ಕಾರಿ ಉದ್ಯೋಗ ಕಲ್ಪಿಸಬೇಕು ಎಂದು ಒತ್ತಾಯಿಸಿದರು. ಜಿಲ್ಲಾಧಿಕಾರಿ ಶಿಲ್ಪಾನಾಗ್‌ ಅವರಿಗೆ ಸಂತ್ರಸ್ತ ಕುಟುಂಬಸ್ಥರು SDPI ನಾಯಕರೊಂದಿಗೆ ಮನವಿ ಸಲ್ಲಿಸಿದರು.

admin

Recent Posts

ದೇಶ ಹಾಗೂ ದೇಶದ ಬಡಜನತೆ, ಶೋಷಿತರು ಉಳಿಯಬೇಕಾದರೆ, ಸಂವಿಧಾನವನ್ನು ಉಳಿಸಬೇಕು;

~ಅಬ್ದುಲ್ ಮಜೀದ್,ರಾಜ್ಯಾಧ್ಯಕ್ಷರು ಬೆಳ್ತಂಗಡಿ: ದೇಶ ಹಾಗೂ ದೇಶದ ಬಡಜನತೆ, ಶೋಷಿತರು ಉಳಿಯಬೇಕಾದರೆ, ಸಂವಿಧಾನವನ್ನು ಉಳಿಸಬೇಕು ಎಂದು ಎಸ್‌ಡಿಪಿಐ ಕರ್ನಾಟಕ ರಾಜ್ಯಾಧ್ಯಕ್ಷರಾದ…

7 hours ago

ಪ್ರಿಯ ಸ್ನೇಹಿತರೇ, ಗಣರಾಜ್ಯೋತ್ಸವದ ಈ ಶುಭ ಸಂದರ್ಭದಲ್ಲಿ, ನಮ್ಮ ಭಾರತದ ಸಂವಿಧಾನದ ಮೌಲ್ಯಗಳನ್ನು ಸ್ಮರಿಸುತ್ತಾ, ನಾವು ಸ್ವಾತಂತ್ರ್ಯ, ಸಮಾನತೆ, ನ್ಯಾಯ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯದ ಆಶಯಗಳನ್ನು ಎತ್ತಿ ಹಿಡಿಯುವ ಗಣರಾಜ್ಯದ ಕನಸನ್ನು ನನಸಾಗಿಸಬೇಕಿದೆ . ಆದರೆ, ಇತ್ತೀಚಿನ ಕಾಲದಲ್ಲಿ ಸಂವಿಧಾನ ವಿರೋಧಿ ಕರಾಳ ಕಾನೂನುಗಳು, NIA ಮತ್ತು ED ಸಂಸ್ಥೆಗಳ ದುರುಪಯೋಗ, ಸರ್ಕಾರವನ್ನು ಪ್ರಶ್ನಿಸುವವರ ಮೇಲೆ UAPA ಹೇರಿ ಅಕ್ರಮ ಬಂಧನಗಳ ಮೂಲಕ ಧ್ವನಿ ಎತ್ತುವವರನ್ನು ಮೌನವಾಗಿಸುವ ಆಳುವವರ ಷಡ್ಯಂತ್ರಗಳು ನಮ್ಮ ಸಂವಿಧಾನದ ಆತ್ಮವನ್ನೇ ದುರ್ಬಲಗೊಳಿಸುತ್ತಿವೆ.

ಈ ಎಲ್ಲಾ ಸವಾಲುಗಳ ನಡುವೆಯೂ, ನಮ್ಮ ಸಂವಿಧಾನದ ಮೌಲ್ಯಗಳು ಸಂರಕ್ಷಣೆಗೊಳ್ಳಲು ಒಗ್ಗಟ್ಟಿನ ಹೋರಾಟದ ಅಗತ್ಯವಿದೆ, ಪ್ರಜಾಪ್ರಭುತ್ವದ ಆಧಾರಸ್ತಂಭಗಳು ದೃಢವಾಗಲಿ, ಮತ್ತು…

1 day ago