Categories: featureNewsPolitics

ಮೈಸೂರಿನಲ್ಲಿ ಡಿಸೆಂಬರ್ 12 ಮತ್ತು 13, 2023 ರಂದು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾದ ರಾಷ್ಟ್ರೀಯ ಕಾರ್ಯಕಾರಿಣಿ ಸಮಿತಿ ಸಭೇಯಲ್ಲಿ ಅಂಗೀಕರಿಸಲಾದ ನಿರ್ಣಯಗಳು.

  1. ಸಮಸ್ಯೆಗಳು ಮತ್ತು ಸಂಕಷ್ಟಗಳನ್ನು ಗುರುತಿಸಲು ಮತ್ತು ಪರಿಹರಿಸಲು ಜಾತಿ ಗಣತಿ

ಭಾರತವು ವಿವಿಧ ಜಾತಿಗಳು ಮತ್ತು ಧರ್ಮಗಳ ದೇಶವಾಗಿದೆ. ಅನಾದಿಕಾಲದಿಂದಲೂ ಪ್ರಾಬಲ್ಯದ ಮೇಲ್ಜಾತಿಗಳು ಕೆಳಜಾತಿಗಳನ್ನು ಮತ್ತು ಧಾರ್ಮಿಕ ಅಲ್ಪಸಂಖ್ಯಾತರನ್ನು ಸಾಮಾಜಿಕ ಜೀವನದ ಹೊರವಲಯದಲ್ಲಿ ಇರಿಸಲು ಸದಾ ಉತ್ಸುಕವಾಗಿವೆ. ಇದು ಸ್ವಾತಂತ್ರ್ಯದ ಸುಮಾರು ಎಂಟು ದಶಕಗಳ ನಂತರವೂ ಸಾಮಾಜಿಕ, ಸಾಂಸ್ಕೃತಿಕ ಮತ್ತು ರಾಜಕೀಯ ಸ್ಥಾನಮಾನ, ಬಡತನ, ಶಿಕ್ಷಣ, ಆರೋಗ್ಯ, ಉದ್ಯೋಗ, ಹಸಿವು, ಅಪೌಷ್ಟಿಕತೆ, ನೈರ್ಮಲ್ಯ ಇತ್ಯಾದಿಗಳ ವಿಷಯದಲ್ಲಿ ಸಮಾಜದ ಈ ವಿಭಾಗಗಳನ್ನು ಭಯಾನಕ ಸ್ಥಿತಿಯಲ್ಲಿ ಇರಿಸಲು ಕಾರಣವಾಯಿತು. ದೇಶದಲ್ಲಿ ಬಡವರು ಮತ್ತು ಶ್ರೀಮಂತರ ನಡುವಿನ ಸಂಪತ್ತಿನ ಹಂಚಿಕೆಯಲ್ಲಿ ಅಸಮಾನತೆ ಅಗಾಧವಾಗಿದೆ. ಇತ್ತೀಚೆಗೆ ಪ್ರಕಟವಾದ ಆಕ್ಸ್ಫ್ಯಾಮ್ ವರದಿಯ ಪ್ರಕಾರ, ಭಾರತದ ಅಗ್ರ 1% ಜನರು ದೇಶದ ಒಟ್ಟು ಸಂಪತ್ತಿನ 40.5% ಕ್ಕಿಂತ ಹೆಚ್ಚು ಆಸ್ತಿಯನ್ನು ಹೊಂದಿದ್ದಾರೆ. ಆದರೆ ಜನಸಂಖ್ಯೆಯ ಅರ್ಧದಷ್ಟು ಜನರು ಒಟ್ಟಾಗಿ ಕೇವಲ 3% ಸಂಪತ್ತನ್ನು ಹೊಂದಿದ್ದಾರೆ. ದೇಶದಲ್ಲಿ ಶತಕೋಟ್ಯಾಧಿಪತಿಗಳ ಸಂಖ್ಯೆ 2020 ರಲ್ಲಿ 102 ರಿಂದ 2022 ರಲ್ಲಿ 166 ಕ್ಕೆ ಏರಿತು. ವರದಿಯ ಪ್ರಕಾರ “ಭಾರತದಲ್ಲಿ ಬಡವರು ಬದುಕಲು ಮೂಲಭೂತ ಅವಶ್ಯಕತೆಗಳನ್ನು ಸಹ ಪಡೆಯಲು ಸಾಧ್ಯವಾಗುತ್ತಿಲ್ಲ”. ಆ 3% ಆಸ್ತಿ ಹೊಂದಿರುವವರು ಈ ದೇಶದ ಕೆಳ ಜಾತಿಯ ಸಮುದಾಯಗಳು ಮತ್ತು ಧಾರ್ಮಿಕ ಅಲ್ಪಸಂಖ್ಯಾತರು.

ಜಾತಿ, ಧರ್ಮ, ಪ್ರದೇಶ, ಮೈಬಣ್ಣ, ಜನಾಂಗ ಅಥವಾ ಭಾಷೆಯ ಭೇದವಿಲ್ಲದೆ ಎಲ್ಲರೂ ಅಭಿವೃದ್ಧಿಗೊಂಡಾಗ ಮಾತ್ರ ದೇಶದ ಬೆಳವಣಿಗೆ ಮತ್ತು ಅಭಿವೃದ್ಧಿಯನ್ನು ಸಾಧಿಸಬಹುದಾಗಿದೆ. ತನ್ನ ಕ್ರೂರ ಬಂಡವಾಳಶಾಹಿಗಳ ಹಿತಾಸಕ್ತಿಗಳನ್ನು ಪೋಷಿಸಲು ಟೊಂಕ ಕಟ್ಟಿ ನಿಂತಿರುವ ಸರ್ಕಾರ, ಬಡ ಜನರ ಕಲ್ಯಾಣ, ಬೆಳವಣಿಗೆ ಮತ್ತು ಅಭಿವೃದ್ಧಿಯ ಬಗ್ಗೆ ಕನಿಷ್ಠ ಕಾಳಜಿಯನ್ನೂ ವಹಿಸುತ್ತಿಲ್ಲ. ಕೆಳಜಾತಿಗಳು ಮತ್ತು ಅಲ್ಪಸಂಖ್ಯಾತರು ದೇಶದ ಅತ್ಯಂತ ಕೆಳವರ್ಗದ ಮತ್ತು ಬದುಕಲು ಹೆಣಗಾಡುತ್ತಿರುವ ಗುಂಪುಗಳಾಗಿವೆ. ಈ ಜನರ ಸಾಮಾಜಿಕ, ರಾಜಕೀಯ, ಆರ್ಥಿಕ ಮತ್ತು ಶೈಕ್ಷಣಿಕ ಸ್ಥಿತಿಯ ಸಮಗ್ರ ವಿಶ್ಲೇಷಣೆಯನ್ನು ಕೈಗೊಳ್ಳಲು, ಅವರ ಜಾತಿ ಮತ್ತು ಧರ್ಮದ ಆಧಾರದ ಮೇಲೆ ನಿಖರವಾದ ಮಾಹಿತಿ ಅನಿವಾರ್ಯವಾಗಿದೆ. ಜಾತಿ-ಆಧಾರಿತ ಜನಗಣತಿ ಈ ಡೇಟಾವನ್ನು ಸಂಗ್ರಹಿಸಲು ಸಹಾಯ ಮಾಡುತ್ತದೆ ಮತ್ತು ಈ ಕೆಳವರ್ಗದ ಜಾತಿಗಳು ಮತ್ತು ಅಲ್ಪಸಂಖ್ಯಾತ ಜನರನ್ನು ಅವರ ಪ್ರಸ್ತುತ ಘೋರ ಸ್ಥಿತಿಯಿಂದ ಮೇಲೆತ್ತಲು ಕ್ರಮಗಳಿಗೆ ಆಧಾರವಾಗಿರುತ್ತದೆ.

ವಿವಿಧ ಜಾತಿಗಳು ಮತ್ತು ಅಲ್ಪಸಂಖ್ಯಾತರ ಸಮಸ್ಯೆಗಳು ಮತ್ತು ಸಂಕಷ್ಟಗಳನ್ನು ಗುರುತಿಸಲು ಮತ್ತು ಪರಿಹರಿಸಲು ರಾಷ್ಟ್ರೀಯ ಮಟ್ಟದಲ್ಲಿ ಜಾತಿ ಗಣತಿಯನ್ನು ನಡೆಸಬೇಕೆಂದು SDPI ಈ ಸಭೆಯ ಮೂಲಕ ಒತ್ತಾಯಿಸುತ್ತದೆ.

SDPIKarnataka

admin

Recent Posts

ಸಂತಾಪಗಳು

ಲಿಯಾಕತ್ ಆಲಿ 3. 2026 ಕೊಡಗು ಜಿಲ್ಲೆಯ ಮಡಿಕೇರಿ ನಿವಾಸಿಯಾದ ಮಡಿಕೇರಿ ಹಿಂದಿನ ಪುರಸಭೆಯ ಮಾಜಿ ಉಪಾಧ್ಯಕ್ಷ ಲಿಯಾಕತ್ ಆಲಿ…

2 days ago

ಪಶ್ಚಿಮ ಏಷ್ಯಾ ಸಂಘರ್ಷದಿಂದ ಉಂಟಾಗಿರುವ ಎಲ್‌.ಪಿ.ಜಿ ಕೊರತೆ ಮತ್ತು ರೆಸ್ಟೋರೆಂಟ್‌ಗಳ ಸಂಕಷ್ಟ – ಕೇಂದ್ರ ಸರ್ಕಾರದ ನಿರ್ಲಕ್ಷ ನಡೆಗೆ ತೀವ್ರಖಂಡನೆ: ಎಸ್.ಡಿ.ಪಿ.ಐ.

ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಯಾಸ್ಮಿನ್ ಫಾರೂಖಿ ಅವರು, ಪಶ್ಚಿಮ ಏಷ್ಯಾದಲ್ಲಿ…

4 days ago

تعزيتي خطاب مرحومهعائشہ شبیر

آج بنگلورو میں سوشیل ڈیموکریٹک پارٹی آف انز ٹی آف انڈیا (SDPI) کی اسٹیٹ کمیٹی…

6 days ago

ಸಾಂತ್ವನ ಸಭೆ ಆಯಿಷಾ ಶಬ್ಬಿರ್

ಇಂದು ಬೆಂಗಳೂರಿನಲ್ಲಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ರಾಜ್ಯ ಸಮಿತಿ ಸದಸ್ಯೆಯಾಗಿದ್ದ ದಿವಂಗತ ಆಯಿಷಾ ಶಬ್ಬಿರ್ ಅವರ…

6 days ago

Taziyati Jalsa Marhooma Ayesha Shabbir

Aaj Bengaluru mein Social Democratic Party of India (SDPI) ki State Committee Member marhooma Ayesha…

6 days ago

ಸಂತಾಪ ಸಭೆ

ಮರ್ಹೂಮಾ ಆಯಿಷಾ ಶಬೀರ್ تعزیتی اجلاس مرحومہ عائشہ شبیر آپ کی جدوجہد، اخلاص اور خدمت ملت…

1 week ago