Categories: featureNewsPolitics

ಮೈಸೂರಿನಲ್ಲಿ ಡಿಸೆಂಬರ್ 12 ಮತ್ತು 13, 2023 ರಂದು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾದ ರಾಷ್ಟ್ರೀಯ ಕಾರ್ಯಕಾರಿಣಿ ಸಮಿತಿ ಸಭೇಯಲ್ಲಿ ಅಂಗೀಕರಿಸಲಾದ ನಿರ್ಣಯಗಳು.

  1. ಸಮಸ್ಯೆಗಳು ಮತ್ತು ಸಂಕಷ್ಟಗಳನ್ನು ಗುರುತಿಸಲು ಮತ್ತು ಪರಿಹರಿಸಲು ಜಾತಿ ಗಣತಿ

ಭಾರತವು ವಿವಿಧ ಜಾತಿಗಳು ಮತ್ತು ಧರ್ಮಗಳ ದೇಶವಾಗಿದೆ. ಅನಾದಿಕಾಲದಿಂದಲೂ ಪ್ರಾಬಲ್ಯದ ಮೇಲ್ಜಾತಿಗಳು ಕೆಳಜಾತಿಗಳನ್ನು ಮತ್ತು ಧಾರ್ಮಿಕ ಅಲ್ಪಸಂಖ್ಯಾತರನ್ನು ಸಾಮಾಜಿಕ ಜೀವನದ ಹೊರವಲಯದಲ್ಲಿ ಇರಿಸಲು ಸದಾ ಉತ್ಸುಕವಾಗಿವೆ. ಇದು ಸ್ವಾತಂತ್ರ್ಯದ ಸುಮಾರು ಎಂಟು ದಶಕಗಳ ನಂತರವೂ ಸಾಮಾಜಿಕ, ಸಾಂಸ್ಕೃತಿಕ ಮತ್ತು ರಾಜಕೀಯ ಸ್ಥಾನಮಾನ, ಬಡತನ, ಶಿಕ್ಷಣ, ಆರೋಗ್ಯ, ಉದ್ಯೋಗ, ಹಸಿವು, ಅಪೌಷ್ಟಿಕತೆ, ನೈರ್ಮಲ್ಯ ಇತ್ಯಾದಿಗಳ ವಿಷಯದಲ್ಲಿ ಸಮಾಜದ ಈ ವಿಭಾಗಗಳನ್ನು ಭಯಾನಕ ಸ್ಥಿತಿಯಲ್ಲಿ ಇರಿಸಲು ಕಾರಣವಾಯಿತು. ದೇಶದಲ್ಲಿ ಬಡವರು ಮತ್ತು ಶ್ರೀಮಂತರ ನಡುವಿನ ಸಂಪತ್ತಿನ ಹಂಚಿಕೆಯಲ್ಲಿ ಅಸಮಾನತೆ ಅಗಾಧವಾಗಿದೆ. ಇತ್ತೀಚೆಗೆ ಪ್ರಕಟವಾದ ಆಕ್ಸ್ಫ್ಯಾಮ್ ವರದಿಯ ಪ್ರಕಾರ, ಭಾರತದ ಅಗ್ರ 1% ಜನರು ದೇಶದ ಒಟ್ಟು ಸಂಪತ್ತಿನ 40.5% ಕ್ಕಿಂತ ಹೆಚ್ಚು ಆಸ್ತಿಯನ್ನು ಹೊಂದಿದ್ದಾರೆ. ಆದರೆ ಜನಸಂಖ್ಯೆಯ ಅರ್ಧದಷ್ಟು ಜನರು ಒಟ್ಟಾಗಿ ಕೇವಲ 3% ಸಂಪತ್ತನ್ನು ಹೊಂದಿದ್ದಾರೆ. ದೇಶದಲ್ಲಿ ಶತಕೋಟ್ಯಾಧಿಪತಿಗಳ ಸಂಖ್ಯೆ 2020 ರಲ್ಲಿ 102 ರಿಂದ 2022 ರಲ್ಲಿ 166 ಕ್ಕೆ ಏರಿತು. ವರದಿಯ ಪ್ರಕಾರ “ಭಾರತದಲ್ಲಿ ಬಡವರು ಬದುಕಲು ಮೂಲಭೂತ ಅವಶ್ಯಕತೆಗಳನ್ನು ಸಹ ಪಡೆಯಲು ಸಾಧ್ಯವಾಗುತ್ತಿಲ್ಲ”. ಆ 3% ಆಸ್ತಿ ಹೊಂದಿರುವವರು ಈ ದೇಶದ ಕೆಳ ಜಾತಿಯ ಸಮುದಾಯಗಳು ಮತ್ತು ಧಾರ್ಮಿಕ ಅಲ್ಪಸಂಖ್ಯಾತರು.

ಜಾತಿ, ಧರ್ಮ, ಪ್ರದೇಶ, ಮೈಬಣ್ಣ, ಜನಾಂಗ ಅಥವಾ ಭಾಷೆಯ ಭೇದವಿಲ್ಲದೆ ಎಲ್ಲರೂ ಅಭಿವೃದ್ಧಿಗೊಂಡಾಗ ಮಾತ್ರ ದೇಶದ ಬೆಳವಣಿಗೆ ಮತ್ತು ಅಭಿವೃದ್ಧಿಯನ್ನು ಸಾಧಿಸಬಹುದಾಗಿದೆ. ತನ್ನ ಕ್ರೂರ ಬಂಡವಾಳಶಾಹಿಗಳ ಹಿತಾಸಕ್ತಿಗಳನ್ನು ಪೋಷಿಸಲು ಟೊಂಕ ಕಟ್ಟಿ ನಿಂತಿರುವ ಸರ್ಕಾರ, ಬಡ ಜನರ ಕಲ್ಯಾಣ, ಬೆಳವಣಿಗೆ ಮತ್ತು ಅಭಿವೃದ್ಧಿಯ ಬಗ್ಗೆ ಕನಿಷ್ಠ ಕಾಳಜಿಯನ್ನೂ ವಹಿಸುತ್ತಿಲ್ಲ. ಕೆಳಜಾತಿಗಳು ಮತ್ತು ಅಲ್ಪಸಂಖ್ಯಾತರು ದೇಶದ ಅತ್ಯಂತ ಕೆಳವರ್ಗದ ಮತ್ತು ಬದುಕಲು ಹೆಣಗಾಡುತ್ತಿರುವ ಗುಂಪುಗಳಾಗಿವೆ. ಈ ಜನರ ಸಾಮಾಜಿಕ, ರಾಜಕೀಯ, ಆರ್ಥಿಕ ಮತ್ತು ಶೈಕ್ಷಣಿಕ ಸ್ಥಿತಿಯ ಸಮಗ್ರ ವಿಶ್ಲೇಷಣೆಯನ್ನು ಕೈಗೊಳ್ಳಲು, ಅವರ ಜಾತಿ ಮತ್ತು ಧರ್ಮದ ಆಧಾರದ ಮೇಲೆ ನಿಖರವಾದ ಮಾಹಿತಿ ಅನಿವಾರ್ಯವಾಗಿದೆ. ಜಾತಿ-ಆಧಾರಿತ ಜನಗಣತಿ ಈ ಡೇಟಾವನ್ನು ಸಂಗ್ರಹಿಸಲು ಸಹಾಯ ಮಾಡುತ್ತದೆ ಮತ್ತು ಈ ಕೆಳವರ್ಗದ ಜಾತಿಗಳು ಮತ್ತು ಅಲ್ಪಸಂಖ್ಯಾತ ಜನರನ್ನು ಅವರ ಪ್ರಸ್ತುತ ಘೋರ ಸ್ಥಿತಿಯಿಂದ ಮೇಲೆತ್ತಲು ಕ್ರಮಗಳಿಗೆ ಆಧಾರವಾಗಿರುತ್ತದೆ.

ವಿವಿಧ ಜಾತಿಗಳು ಮತ್ತು ಅಲ್ಪಸಂಖ್ಯಾತರ ಸಮಸ್ಯೆಗಳು ಮತ್ತು ಸಂಕಷ್ಟಗಳನ್ನು ಗುರುತಿಸಲು ಮತ್ತು ಪರಿಹರಿಸಲು ರಾಷ್ಟ್ರೀಯ ಮಟ್ಟದಲ್ಲಿ ಜಾತಿ ಗಣತಿಯನ್ನು ನಡೆಸಬೇಕೆಂದು SDPI ಈ ಸಭೆಯ ಮೂಲಕ ಒತ್ತಾಯಿಸುತ್ತದೆ.

SDPIKarnataka

admin

Recent Posts

ರಾಜ್ಯ ಮತ್ತು ಜಿಲ್ಲಾ SDPI ನಾಯಕರಿಗೆ

ಸುಸ್ವಾಗತ ರಾಜ್ಯ ಪ್ರತಿನಿಧಿ ಸಭೆ - 2026 SRC STATE REPRESENTATIVE COUNCIL-2026 @RAICHUR, Karnataka | 28.6.2026 Welcome…

1 day ago

SRC-ರಾಜ್ಯ ಪ್ರತಿನಿಧಿ ಸಭೆ 2026 ಕರ್ನಾಟಕ

ಗ್ರೀನ್ ಪ್ಯಾಲೆಸ್ ಸಭಾಂಗಣ | ರಾಯಚೂರು । 28 JUNE 2026 ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಕರ್ನಾಟಕ…

4 days ago

ಪರ್ಯಾಯ ರಾಜಕಾರಣದ

ಸಕಾರಾತ್ಮಕ ಹೆಜ್ಜೆ 18 ನೇ ವರ್ಷಕ್ಕೆ SDPI ಸಂಸ್ಥಾಪನಾ ದಿನಾಚರಣೆ SDPI FORMATION DAY SIDDIQ MULKY SWC Member…

6 days ago

ಪರ್ಯಾಯ ರಾಜಕಾರಣದ

ಸಕಾರಾತ್ಮಕ ಹೆಜ್ಜೆ 18 ನೇ ವರ್ಷಕ್ಕೆ SDPI ಸಂಸ್ಥಾಪನಾ ದಿನಾಚರಣೆ SDPI FORMATION DAY FAIROZE ULLA SHAREEF SWC…

6 days ago

ಪರ್ಯಾಯ ರಾಜಕಾರಣದ

ಸಕಾರಾತ್ಮಕ ಹೆಜ್ಜೆ 18 ನೇ ವರ್ಷಕ್ಕೆ SDPI ಸಂಸ್ಥಾಪನಾ ದಿನಾಚರಣೆ SDPI FORMATION DAY MOHAMMED SIDDIQ SWC Member…

6 days ago