Categories: featureNewsPolitics

ಮೈಸೂರಿನಲ್ಲಿ ಡಿಸೆಂಬರ್ 12 ಮತ್ತು 13, 2023 ರಂದು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾದ ರಾಷ್ಟ್ರೀಯ ಕಾರ್ಯಕಾರಿಣಿ ಸಮಿತಿ ಸಭೇಯಲ್ಲಿ ಅಂಗೀಕರಿಸಲಾದ ನಿರ್ಣಯಗಳು.

  1. ದಲಿತರ ಮೇಲಿನ ದೌರ್ಜನ್ಯಗಳ ಏರಿಕೆ ಬಹಳ ಕಳವಳಕಾರಿ

ಭಾರತದಲ್ಲಿ ದಲಿತರ ಮೇಲಿನ ದೌರ್ಜನ್ಯಗಳು ಸಾಮಾನ್ಯವಾಗಿವೆ. ಮೇಲ್ವರ್ಗದ ಜನರು ಚಾತುರ್ವರ್ಣ ವ್ಯವಸ್ಥೆಯ ಪರಿಧಿಯಿಂದ ಹೊರಗಿರುವ ದಲಿತರನ್ನು ಅಸ್ಪೃಶ್ಯರಾಗಿ ಕಾಣುತ್ತಾರೆ. ಅವರನ್ನು ಮನುಷ್ಯರೆಂದು ಪರಿಗಣಿಸುವುದಿಲ್ಲ. ಈ ದೇಶದಲ್ಲಿ ಗೋವುಗಳಿಗೆ ಸಿಗುವ ಕನಿಷ್ಠ ಗೌರವ, ಘನತೆ ಕೂಡ ದಲಿತರಿಗೆ ಸಿಗುತ್ತಿಲ್ಲ. ಅವರಿಗೆ ನಾಗರಿಕ, ಮೂಲಭೂತ ಮತ್ತು ಮಾನವ ಹಕ್ಕುಗಳನ್ನು ನಿರಾಕರಿಸಲಾಗಿದೆ ಮತ್ತು ಉಲ್ಲಂಘಿಸಲಾಗಿದೆ. ಅವರು ಮೇಲ್ಜಾತಿಗಳಿಂದ ನಾಗರಿಕ ತಲೆತಗ್ಗಿಸುವಂತ ಅಮಾನವೀಯ ವರ್ತನೆಗೆ ಒಳಪಡುತ್ತಾರೆ. ಯುಪಿ, ಗುಜರಾತ್, ಮಧ್ಯಪ್ರದೇಶ, ಬಿಹಾರ ಮತ್ತು ರಾಜಸ್ಥಾನದಂತಹ ರಾಜ್ಯಗಳಲ್ಲಿ ದಲಿತರ ಮೇಲೆ ಮೂತ್ರ ವಿಸರ್ಜನೆ ಮಾಡುವುದು , ಮೂತ್ರ ಕುಡಿಯಲು ಒತ್ತಾಯಿಸುವುದು, ಬೀದಿಗಳಲ್ಲಿ ಬೆತ್ತಲೆಯಾಗಿ ಮೆರವಣಿಗೆ ಮಾಡುವುದು ಮುಂತಾದ ಎಲ್ಲಾ ರೀತಿಯ ದೌರ್ಜನ್ಯಗಳಿಗೆ ಗುರಿಯಾಗುತ್ತಾರೆ. ಅವರಿಗೆ ದೇವಸ್ಥಾನಗಳಲ್ಲಿ ಪೂಜೆ ಸಲ್ಲಿಸಲು ಅಥವಾ ಮೇಲ್ಜಾತಿಯ ಜನರೊಂದಿಗೆ ನೀರು ಕುಡಿಯಲು ಅಥವಾ ಊಟ ಮಾಡಲು ಅವಕಾಶವಿಲ್ಲ.

ದೇಶದಾದ್ಯಂತ ಪ್ರತಿ ವರ್ಷ ಸುಮಾರು 60,000 ದಲಿತ ದೌರ್ಜನ್ಯ ಪ್ರಕರಣಗಳು ದಾಖಲಾಗುತ್ತವೆ. ಈ ಅಂಕಿಗಳು ಇದರ ಗಂಭೀರತೆಯನ್ನು ತೋರಿಸುತ್ತವೆ. ದೇಶದಲ್ಲಿ ಜನರನ್ನು ಅವರ ಜಾತಿ ಅಥವಾ ಧರ್ಮದ ಹೊರತಾಗಿ ಸಮಾನವಾಗಿ ಪರಿಗಣಿಸುವವರೆಗೆ ಮತ್ತು ಅವರ ಘನತೆಯನ್ನು ಗೌರವಿಸದ ಹೊರತು ಈ ಸನ್ನಿವೇಶ ಬದಲಾಗುವುದಿಲ್ಲ.

ದೇಶದಲ್ಲಿ ದಲಿತ ಸಮುದಾಯದ ಮೇಲೆ ಹೆಚ್ಚುತ್ತಿರುವ ದೌರ್ಜನ್ಯಗಳ ಬಗ್ಗೆ SDPI ತೀವ್ರ ಕಳವಳವನ್ನು ದಾಖಲಿಸುತ್ತದೆ. ದೇಶದ ವಿವಿಧ ಭಾಗಗಳಲ್ಲಿ ದಲಿತರನ್ನು ಮೇಲ್ಜಾತಿಯವರು ನಡೆಸಿಕೊಳ್ಳುತ್ತಿರುವ ರೀತಿ ಅತ್ಯಂತ ಅಮಾನವೀಯ ಮತ್ತು ನಾಗರೀಕ ಸಮಾಜಕ್ಕೆ ಅವಮಾನ. ಈ ದುಷ್ಕೃತ್ಯಗಳನ್ನು ಕೊನೆಗೊಳಿಸಲು ಆಡಳಿತಾರೂಢ ಸರ್ಕಾರಗಳು ಅಪರಾಧಿಗಳ ವಿರುದ್ಧ ಕಠಿಣ ಕ್ರಮಗಳನ್ನು ಪ್ರಾರಂಭಿಸಬೇಕು ಎಂದು SDPI ಈ ಮೂಲಕ ಆಗ್ರಹಿಸುತ್ತದೆ.

admin

Recent Posts

ಜಿಲ್ಲಾ ಪ್ರತಿನಿಧಿ ಸಭೆDISTRICT REPRESENTATIVE COUNCIL

Hearty Welcome MUJAHID PASHAState General Secretary RIYAZ KADAMBUState Secretary SALEEM AHMEDDistrict President DR. SHAIK TABREZDistrict…

9 hours ago

WORLD ENVIRONMENT DAY

ವಿಶ್ವ ಪರಿಸರ ದಿನಾಚರಣೆ 05 JUNE ಪರಿಸರ ಸಂರಕ್ಷಣೆ ನಮ್ಮೆಲ್ಲರ ಹೊಣೆ! ಇಂದು ನಾವು ನೆಡುವ ಒಂದು ಸಣ್ಣಗಿಡ, ನಾಳಿನ…

2 days ago

SDPI ಮಂಗಳೂರು ಗ್ರಾಮಾಂತರ ಜಿಲ್ಲಾ ಸಮಿತಿಯ ಸದಸ್ಯರು, ಪುತ್ತೂರಿನ ಹಿರಿಯ ಉದ್ಯಮಿ, ಸಮಾಜಸೇವಕರು ಹಾಗೂ ವಿವಿಧ ಧಾರ್ಮಿಕ ಮತ್ತು ಸಾಮಾಜಿಕ ಸಂಘಟನೆಗಳಲ್ಲಿ ಮಹತ್ವದ ಜವಾಬ್ದಾರಿಗಳನ್ನು ನಿರ್ವಹಿಸಿದ್ದ ಸಾಗರ್ ಇಬ್ರಾಹಿಂ ಹಾಜಿ ಅವರ ನಿಧನದ ಸುದ್ದಿ ಅತ್ಯಂತ ದುಃಖವನ್ನುಂಟು ಮಾಡಿದೆ.ಅವರು ಸಮಾಜದ ಅಭಿವೃದ್ಧಿ, ಧಾರ್ಮಿಕ ಸೇವೆ ಹಾಗೂ ಜನಸಾಮಾನ್ಯರ ಕಲ್ಯಾಣಕ್ಕಾಗಿ ಸಲ್ಲಿಸಿದ ಕೊಡುಗೆಗಳು ಸದಾ ಸ್ಮರಣೀಯವಾಗಿರಲಿವೆ. ಅವರ ಅಗಲಿಕೆಯಿಂದ ಕುಟುಂಬಕ್ಕೆ ಮಾತ್ರವಲ್ಲ, ಪುತ್ತೂರು ಭಾಗದ ಸಮುದಾಯಕ್ಕೂ ಮತ್ತು SDPI ಪಕ್ಷಕ್ಕೂ ತುಂಬಲಾರದ ನಷ್ಟ ಉಂಟಾಗಿದೆ.ಅಲ್ಲಾಹು ತಆಲಾ ಮರ್ಹೂಮ್ ಸಾಗರ್ ಇಬ್ರಾಹಿಂ ಹಾಜಿಯವರ ಸಕಲ ಸತ್ಕರ್ಮಗಳನ್ನು ಸ್ವೀಕರಿಸಿ, ಅವರಿಗೆ ಜನ್ನತುಲ್ ಫಿರ್ದೌಸ್ ಅನುಗ್ರಹಿಸಲಿ. ಅವರ ಕುಟುಂಬಸ್ಥರು, ಬಂಧುಬಳಗ ಮತ್ತು ಅಭಿಮಾನಿಗಳಿಗೆ ಈ ದುಃಖವನ್ನು ಸಹಿಸುವ ಶಕ್ತಿ ಮತ್ತು ತಾಳ್ಮೆಯನ್ನು ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ.

~ಅಬ್ದುಲ್ ಮಜೀದ್,ರಾಜ್ಯಾಧ್ಯಕ್ಷರು, SDPI ಕರ್ನಾಟಕ SDPIKarnataka #Mangalore

2 days ago

ಜಿಲ್ಲಾ ಪ್ರತಿನಿಧಿ ಸಭೆ

DRC DISTRICT REPRESENTATIVE COUNCIL Heartly Welcome ABDUL HANNANState Vice President MAULANA AKRAMState Secretary ABDUL RAHEEM…

7 days ago

HAPPY Eid Al-Adha

Wishing you a beautiful and blessed Eid. Warm Wishes on Eid ul Adha May the…

1 week ago