Categories: featureNewsPolitics

ಮೈಸೂರಿನಲ್ಲಿ ಡಿಸೆಂಬರ್ 12 ಮತ್ತು 13, 2023 ರಂದು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾದ ರಾಷ್ಟ್ರೀಯ ಕಾರ್ಯಕಾರಿಣಿ ಸಮಿತಿ ಸಭೇಯಲ್ಲಿ ಅಂಗೀಕರಿಸಲಾದ ನಿರ್ಣಯಗಳು.

  1. ಜನರ ಒಗ್ಗಟ್ಟು 2024 ಲೋಕಸಭಾ ಚುನಾವಣೆಯಲ್ಲಿ ಪ್ರಜಾಪ್ರಭುತ್ವವನ್ನು ರಕ್ಷಿಸಬಹುದು

ಪ್ರಜಾಪ್ರಭುತ್ವ ಮತ್ತು ಜಾತ್ಯತೀತತೆ ನಮ್ಮ ರಾಷ್ಟ್ರದ ಬುನಾದಿಯಾಗಿದ್ದು ಅದು ಈಗ ಸರ್ವಾಧಿಕಾರಿ ಮತ್ತು ಬಲಪಂಥೀಯ ಫ್ಯಾಸಿಸ್ಟ್ ಆಡಳಿತದ ಅಡಿಯಲ್ಲಿ ನಲುಗುತ್ತಿದೆ. ಈ ಸರ್ಕಾರದ ಭ್ರಷ್ಟ ಮತ್ತು ಸಂವಿಧಾನ ವಿರೋಧಿ ನೀತಿಗಳ ವಿರುದ್ಧ ಮಾತನಾಡಿದ ವಿರೋಧ ಪಕ್ಷಗಳ ನಾಯಕರು ಸಂಸತ್ತಿನಿಂದ ಉಚ್ಚಾಟನೆಯಾಗುವ ಬೆದರಿಕೆಯನ್ನು ಎದುರಿಸುತ್ತಿದ್ದಾರೆ. ಪ್ರಾಮಾಣಿಕವಾಗಿ ಮಾತನಾಡುವ ಮತ್ತು ಬರೆಯುವ ಮಾಧ್ಯಮಗಳ ಮೇಲೆ ತನಿಖಾ ಸಂಸ್ಥೆಗಳು ದಾಳಿ ನಡೆಸುತ್ತಿವೆ ಮತ್ತು ಪತ್ರಕರ್ತರನ್ನು ಜೈಲುಗಳಿಗೆ ತಳ್ಳಲಾಗುತ್ತಿದೆ. ಸಂಸತ್ತಿನ ಒಳಗೆ ಮತ್ತು ಹೊರಗೆ ಅವಾಚ್ಯ, ಪ್ರಚೋದನಕಾರಿ ಮತ್ತು ಜನಾಂಗೀಯ ದ್ವೇಷಿ ಭಾಷೆ ಬಳಸಲು ನಾಚಿಕೆಪಡದಂತಹ ಕೀಳು ಮಟ್ಟಕ್ಕೆ ಆಡಳಿತಾರೂಢ ಶಾಸಕರು ಕುಸಿದಿದ್ದಾರೆ. ಇನ್ನೊಂದೆಡೆ ಕಾರ್ಪೊರೇಟ್ ಸಂಸ್ಥೆಗಳಿಂದ ಬರಬೇಕಿದ್ದ 2.69 ಲಕ್ಷ ಕೋಟಿ ಬ್ಯಾಂಕ್ ಸಾಲಗಳನ್ನು ಮನ್ನಾ ಮಾಡಲಾಗಿದೆ. ಆದರೆ ಬಡವರು ಮತ್ತು ರೈತರು ನಿರುದ್ಯೋಗ, ಬ್ಯಾಂಕ್ ಸಾಲಗಳು ಮತ್ತು ಅಪೌಷ್ಟಿಕತೆಯ ಪರಿಣಾಮವಾಗಿ ಆತ್ಮಹತ್ಯೆಗೆ ಶರಣಾಗುತ್ತಿದ್ದಾರೆ. ಚುನಾವಣಾ ಪ್ರಚಾರದಲ್ಲಿ ಆಡಳಿತ ಪಕ್ಷದ ಅಜೆಂಡಾ ಅಭಿವೃದ್ಧಿಯಲ್ಲ ಕೋಮು ದ್ವೇಷವಾಗಿದೆ. ಆದ್ದರಿಂದ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕೋಮುವಾದಿ ಶಕ್ತಿಗಳು ಮತ್ತೆ ಅಧಿಕಾರ ಹಿಡಿಯದಂತೆ ತಡೆಯಲು ಎಲ್ಲಾ ಸಮುದಾಯಗಳ ಜನರು ಜೊತೆಗೆ ಸಣ್ಣ ಅಥವಾ ದೊಡ್ಡ ಪಕ್ಷಗಳನ್ನು ಒಳಗೊಂಡ ವಿಶಾಲ ತಳಹದಿಯ ಮೈತ್ರಿಯನ್ನು ರೂಪಿಸಬೇಕು ಎಂದು SDPI ಮನವಿ ಮಾಡಿದೆ.

admin

Recent Posts

ಕಟಕ್‌ ದಂಗೆ ಆತಂಕಕಾರಿ – ನಿಷ್ಪಕ್ಷಪಾತ ತನಿಖೆ ಮತ್ತು ಆರೋಪಿಗಳ ವಿರುದ್ಧ ಕಠಿಣ ಕ್ರಮಕ್ಕೆ SDPI ಆಗ್ರಹ

ಒಡಿಶಾದ ಕಟಕ್‌ನಲ್ಲಿ ದುರ್ಗಾ ಪೂಜೆಯ ವಿಗ್ರಹ ಮೆರವಣಿಗೆ ಸಮಯದಲ್ಲಿ ಒಂದು ನಿರ್ದಿಷ್ಟ ಸಮುದಾಯವನ್ನು ಗುರಿಯಾಗಿಸಿ ಮಾಡಿದ ಹಿಂಸಾಚಾರ ಅತ್ಯಂತ ಆತಂಕಕಾರಿ…

1 day ago

ಮುಖ್ಯ ನ್ಯಾಯಮೂರ್ತಿ ಗವಾಯಿ ಮೇಲೆ ದಾಳಿ ಎಸ್.ಡಿ.ಪಿ.ಐ ಖಂಡನೆ.

ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಬಿ.ಆರ್ ಗವಾಯಿ ಅವರ ಮೇಲೆ ಶೂ ಎಸೆಯಲು ಪ್ರಯತ್ನ ಪಟ್ಟ ಘಟನೆಯನ್ನು ಸೋಶಿಯಲ್ ಡೆಮಾಕ್ರಟಿಕ್…

2 days ago

انصاف کی جیت

کے․جی․ ہلّی اور ڈی․جی․ ہلّی مقدمے میں گرفتار دو افراد کوسپریم کورٹ نے ضمانت منظور…

2 days ago

ಮಹರ್ಷಿ ವಾಲ್ಮೀಕಿ ಜಯಂತಿಯ ಶುಭಾಶಯಗಳು

ನೀವು ಜ್ಞಾನ, ಹಣ, ಪ್ರತಿಷ್ಠೆ, ಶಕ್ತಿಯನ್ನು ಸಂಗ್ರಹಿಸಬಹುದು. ಆದರೆ ಇದೆಲ್ಲದರ ನಡುವೆ ಪ್ರೀತಿಯನ್ನು ಕಳೆದುಕೊಂಡಿದ್ದರೆ ನೀವು ನಿಜವಾದ ಬದುಕನ್ನೇ ಕಳೆದುಕೊಂಡಿದ್ದೀರಿ…

2 days ago

ನ್ಯಾಯದ ಜಯ

ಕೆ.ಜಿ.ಹಳ್ಳಿ ಮತ್ತು ಡಿ.ಜೆ.ಹಳ್ಳಿ ಪ್ರಕರಣದಲ್ಲಿ ಬಂಧಿತರಾದ ಇಬ್ಬರಿಗೆ ಸರ್ವೋಚ್ಚ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ ಇದು ನ್ಯಾಯ ಮತ್ತು ಸತ್ಯದ…

2 days ago

کے۔ جے، جارج کے استعفی کا ایس ڈی پی آئی کا مطالبہ

عبد الحنان ریاستی نائب صدر - ایس۔ ڈی۔ پی۔ آئی ہے بنگلور، 5 اکتوبر: توانائی…

4 days ago