ಸಮಾಜದಲ್ಲಿ ಅತ್ಯಂತ ಹಿಂದುಳಿದ ಸಮುದಾಯಗಳನ್ನು ಮೇಲೆತ್ತುವ ಉದ್ದೇಶದಿಂದ ಮುಂಗೇರಿ ಲಾಲ್ ಸಮಿತಿಯನ್ನು ರಚಿಸಿ ಅದರ ವರದಿಯ ಆಧಾರದ ಮೇಲೆ ಬಿಹಾರದಲ್ಲಿ ಅತ್ಯಂತ ಹಿಂದುಳಿದ ವರ್ಗಗಳ ಜನರಿಗೆ, ಅದರಲ್ಲಿ ಅತಿ ಹಿಂದುಳಿದಿದ್ದ ಮುಸ್ಲಿಮರನ್ನೂ ಸೇರಿಸಿ ಶೇ. 26% ಮೀಸಲಾತಿ ಒದಗಿಸಿ ಕೊಟ್ಟವರು ಅಂದಿನ ಬಿಹಾರದ ಮುಖ್ಯ ಮಂತ್ರಿಯಾಗಿದ್ದ ಕಾರ್ಪುರಿ ಠಾಕೂರ್. ಆ ಮೂಲಕ ಕರ್ನಾಟಕದಲ್ಲಿ 2B ಮೀಸಲಾತಿಗೆ ಮತ್ತು ದೇಶದ ಎಲ್ಲ ರಾಜ್ಯಗಳಲ್ಲಿ ಹಿಂದುಳಿದ ವರ್ಗಗಳಿಗೆ ಮೀಸಲಾತಿ ಒದಗಿಸುವ ನಿಟ್ಟಿನಲ್ಲಿ ಅಲ್ಲಿನ ಸರ್ಕಾರಗಳಿಗೆ ಪ್ರೇರಣೆಯಾದರು. ಮುಂದೆ ಮಂಡಲ್ ಕಮಿಷನ್ ನೇಮಕಕ್ಕೂ ಇದು ಪ್ರೇರಣೆಯಾಯಿತು. ಅದೇ ಕಾರಣಕ್ಕೆ ಅಂದು RSS ನಾಯಕರು ಅವರನ್ನು ಬಹಿರಂಗವಾಗೇ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದರು. ಅವರ ತಾಯಿಯ ಬಗ್ಗೆ ಕೆಟ್ಟ, ಕೆಟ್ಟ ಘೊಷಣೆಗಳನ್ನು ಬೀದಿ, ಬೀದಿಗಳಲ್ಲಿ ಕೂಗಿದ್ದರು. ಇಂದು ಮಹಾ ಚುನಾವಣೆಯಲ್ಲಿ ಬಿಹಾರದ ಜನರ ಮತ ಸೆಳೆಯುವ ಉದ್ದೇಶದಿಂದ ಮೋದಿ ಸರ್ಕಾರ ಅವರಿಗೆ ಭಾರತ ರತ್ನ ಘೋಷಿಸಿದೆ. ಬಿಜೆಪಿಯ ತಂತ್ರ ಏನೇ ಇರಲಿ. ಕಾರ್ಪುರಿ ಠಾಕೂರ್ ಅವರಿಗೆ ಭಾರತ ರತ್ನ ದೊರೆತಿರುವುದು ಭಾರತದ ಸಾಮಾಜಿಕ ನ್ಯಾಯಕ್ಕಾಗಿ ದುಡಿ ಒಬ್ಬ ಧೀಮಂತ ವ್ಯಕ್ತಿಗೆ ಸಂದ ಗೌರವ. ಇದನ್ನು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ಸ್ವಾಗತಿಸುತ್ತದೆ.
ಒಡಿಶಾದ ಕಟಕ್ನಲ್ಲಿ ದುರ್ಗಾ ಪೂಜೆಯ ವಿಗ್ರಹ ಮೆರವಣಿಗೆ ಸಮಯದಲ್ಲಿ ಒಂದು ನಿರ್ದಿಷ್ಟ ಸಮುದಾಯವನ್ನು ಗುರಿಯಾಗಿಸಿ ಮಾಡಿದ ಹಿಂಸಾಚಾರ ಅತ್ಯಂತ ಆತಂಕಕಾರಿ…
ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಬಿ.ಆರ್ ಗವಾಯಿ ಅವರ ಮೇಲೆ ಶೂ ಎಸೆಯಲು ಪ್ರಯತ್ನ ಪಟ್ಟ ಘಟನೆಯನ್ನು ಸೋಶಿಯಲ್ ಡೆಮಾಕ್ರಟಿಕ್…
کے․جی․ ہلّی اور ڈی․جی․ ہلّی مقدمے میں گرفتار دو افراد کوسپریم کورٹ نے ضمانت منظور…
ನೀವು ಜ್ಞಾನ, ಹಣ, ಪ್ರತಿಷ್ಠೆ, ಶಕ್ತಿಯನ್ನು ಸಂಗ್ರಹಿಸಬಹುದು. ಆದರೆ ಇದೆಲ್ಲದರ ನಡುವೆ ಪ್ರೀತಿಯನ್ನು ಕಳೆದುಕೊಂಡಿದ್ದರೆ ನೀವು ನಿಜವಾದ ಬದುಕನ್ನೇ ಕಳೆದುಕೊಂಡಿದ್ದೀರಿ…
عبد الحنان ریاستی نائب صدر - ایس۔ ڈی۔ پی۔ آئی ہے بنگلور، 5 اکتوبر: توانائی…