feature

ಕಾರ್ಪುರಿ ಠಾಕೂರ್ ಅವರಿಗೆ ಭಾರತ ರತ್ನ ದೊರೆತಿರುವುದು ಸ್ವಾಗತಾರ್ಹ

ಸಮಾಜದಲ್ಲಿ ಅತ್ಯಂತ ಹಿಂದುಳಿದ ಸಮುದಾಯಗಳನ್ನು ಮೇಲೆತ್ತುವ ಉದ್ದೇಶದಿಂದ ಮುಂಗೇರಿ ಲಾಲ್ ಸಮಿತಿಯನ್ನು ರಚಿಸಿ ಅದರ ವರದಿಯ ಆಧಾರದ ಮೇಲೆ ಬಿಹಾರದಲ್ಲಿ ಅತ್ಯಂತ ಹಿಂದುಳಿದ ವರ್ಗಗಳ ಜನರಿಗೆ, ಅದರಲ್ಲಿ ಅತಿ ಹಿಂದುಳಿದಿದ್ದ ಮುಸ್ಲಿಮರನ್ನೂ ಸೇರಿಸಿ ಶೇ. 26% ಮೀಸಲಾತಿ ಒದಗಿಸಿ ಕೊಟ್ಟವರು ಅಂದಿನ ಬಿಹಾರದ ಮುಖ್ಯ ಮಂತ್ರಿಯಾಗಿದ್ದ ಕಾರ್ಪುರಿ ಠಾಕೂರ್. ಆ ಮೂಲಕ ಕರ್ನಾಟಕದಲ್ಲಿ 2B ಮೀಸಲಾತಿಗೆ ಮತ್ತು ದೇಶದ ಎಲ್ಲ ರಾಜ್ಯಗಳಲ್ಲಿ ಹಿಂದುಳಿದ ವರ್ಗಗಳಿಗೆ ಮೀಸಲಾತಿ ಒದಗಿಸುವ ನಿಟ್ಟಿನಲ್ಲಿ ಅಲ್ಲಿನ ಸರ್ಕಾರಗಳಿಗೆ ಪ್ರೇರಣೆಯಾದರು. ಮುಂದೆ ಮಂಡಲ್ ಕಮಿಷನ್ ನೇಮಕಕ್ಕೂ ಇದು ಪ್ರೇರಣೆಯಾಯಿತು. ಅದೇ ಕಾರಣಕ್ಕೆ ಅಂದು RSS ನಾಯಕರು ಅವರನ್ನು ಬಹಿರಂಗವಾಗೇ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದರು. ಅವರ ತಾಯಿಯ ಬಗ್ಗೆ ಕೆಟ್ಟ, ಕೆಟ್ಟ ಘೊಷಣೆಗಳನ್ನು ಬೀದಿ, ಬೀದಿಗಳಲ್ಲಿ ಕೂಗಿದ್ದರು. ಇಂದು ಮಹಾ ಚುನಾವಣೆಯಲ್ಲಿ ಬಿಹಾರದ ಜನರ ಮತ ಸೆಳೆಯುವ ಉದ್ದೇಶದಿಂದ ಮೋದಿ ಸರ್ಕಾರ ಅವರಿಗೆ ಭಾರತ ರತ್ನ ಘೋಷಿಸಿದೆ. ಬಿಜೆಪಿಯ ತಂತ್ರ ಏನೇ ಇರಲಿ. ಕಾರ್ಪುರಿ ಠಾಕೂರ್ ಅವರಿಗೆ ಭಾರತ ರತ್ನ ದೊರೆತಿರುವುದು ಭಾರತದ ಸಾಮಾಜಿಕ ನ್ಯಾಯಕ್ಕಾಗಿ ದುಡಿ ಒಬ್ಬ ಧೀಮಂತ ವ್ಯಕ್ತಿಗೆ ಸಂದ ಗೌರವ. ಇದನ್ನು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ಸ್ವಾಗತಿಸುತ್ತದೆ.

admin

Recent Posts

ಕಾನೂನಿನ ಮುಂದೆ ಎಲ್ಲರೂ ಸಮಾನರು.

ಪೊಲೀಸರು CT ರವಿಯ ಮೇಲೆ FIR ಆಗಿರುವ ಕಾರಣ ಕಾನೂನಿನ ಪ್ರಕ್ರಿಯೆಯ ಭಾಗವಾಗಿ ನೋಟಿಸ್ ನೀಡಲು ತೆರಳಿದಾಗ, ಅವರ ಕರ್ತವ್ಯಕ್ಕೆ…

1 week ago

ಬಿಡದಿ ಟೌನ್‌ಶಿಪ್ ಯೋಜನೆ: ರೈತರ ಹಿತಾಸಕ್ತಿ ಮತ್ತು ಪಾರದರ್ಶಕತೆಯನ್ನು ಸರ್ಕಾರ ಎತ್ತಿಹಿಡಿಯಲಿ : SDPI

ಬೆಂಗಳೂರು, ಜುಲೈ 21-2026ಬಿಡದಿ ಪ್ರದೇಶದಲ್ಲಿ ಪ್ರಸ್ತಾಪಿತ ಗ್ರೇಟರ್ ಬೆಂಗಳೂರು ಇಂಟಿಗ್ರೇಟೆಡ್ ಟೌನ್‌ಶಿಪ್ ಯೋಜನೆಯ ಸುತ್ತ ಜೆಡಿಎಸ್ ಮತ್ತು ಕಾಂಗ್ರೆಸ್ ನಾಯಕರ…

2 weeks ago

ಸಂತಾಪಗಳು

ಶ್ರೀಮತಿ ಚೆನ್ನಮ್ಮ ಭಾರತದ ಮಾಜಿ ಪ್ರಧಾನಮಂತ್ರಿ ಶ್ರೀ ಎಚ್. ಡಿ. ದೇವೇಗೌಡ ಅವರ ಧರ್ಮಪತ್ನಿ ಭಾರತದ ಮಾಜಿ ಪ್ರಧಾನಮಂತ್ರಿ ಶ್ರೀ…

2 weeks ago