feature

ಧರ್ಮನಿಷ್ಠೆ ಕೇವಲ ಮುಖವಾಡ ಅಷ್ಟೆಹಣ ಮತ್ತು ಅಧಿಕಾರ ನಿಜವಾದ ಗುರಿ

ಸಂಘಪರಿವಾರದ ಗುರಿ ಅಧಿಕಾರ ಮತ್ತು ಹಣ ಗಳಿಸುವುದಾಗಿದೆ. ಅದನ್ನು ಸಾಧಿಸಲು ಅವರು ತೋರುವ ಧರ್ಮನಿಷ್ಠೆ ಮತ್ತು ಭಕ್ತಿ ಕೇವಲ ಮುಖವಾಡವಾಗಿದೆ. ಬಾಬರಿ ಮಸೀದಿಯ ಅತಿಕ್ರಮಿಸಿದ ಭೂಮಿಯಲ್ಲಿ ನಿರ್ಮಿಸಿಲಾದ ಕಟ್ಟಡದ ಉದ್ಘಾಟನೆಯನ್ನು ಸಂಘಪರಿವಾರ ರಾಷ್ಟ್ರೀಯ ಹಬ್ಬವೆಂಬಂತೆ ಬಿಂಬಿಸಿದೆ. ಇದೇ ಸಂದರ್ಭದಲ್ಲಿ, ದೇವಾಲಯ ಎಂದು ಕರೆಯಲ್ಪಡುವ ಕಟ್ಟದ ಸುತ್ತಮುತ್ತಲ ಜೌಗು ಭೂಮಿಯ ದಂಧೆಯ ಸುದ್ದಿಗಳು ಹೊರಬಿದ್ದಿವೆ.

ಬಾಬರಿ ಮಸೀದಿಯ ಭೂಮಿಯಲ್ಲಿ ನಿರ್ಮಿಸಲಾಗಿರುವ ದೇವಾಲಯವನ್ನು ಜನಾಂಗೀಯ ದ್ವೇಷಕ್ಕೆ ಬಳಸಿಕೊಂಡು ಆ ಮೂಲಕ ಅಧಿಕಾರವನ್ನು ಹಿಡಿಯಲು ಸಂಘಪರಿವಾರ ಮಾಡಿಕೊಂಡಿರುವ ಒಂದು ರಾಜಕೀಯ ತಂತ್ರವಾಗಿದೆ. ಅದರ ಉದ್ಘಾಟನೆಯನ್ನು ವರ್ಣರಂಜಿತ ಮತ್ತು ಸದ್ದಿನೊಂದಿಗೆ ನಡೆಸಿದ್ದರ ಹಿಂದೆ ಆ ಪ್ರದೇಶವನ್ನು ಪ್ರವಾಸಿ ತಾಣವನ್ನಾಗಿ ಮಾಡುವ ಷಡ್ಯಂತ್ರ ಅಡಗಿದೆ. ಇದು ಸಂಘ ಪರಿವಾರಕ್ಕೆ ಬಹಳ ದೊಡ್ಡ ಲಾಭವನ್ನು ತಂದುಕೊಡುವ ಉದ್ದೇಶ ಹೊಂದಿದೆ. ಅದರಿಂದ ದೊಡ್ಡಮಟ್ಟದ ಆರ್ಥಿಕ ಲಾಭ ಪಡೆಯಲು ಹೊಸ ದೇವಸ್ಥಾನದ ಸುತ್ತಲಿನ ಪ್ರದೇಶದ ಭೂಮಿಯನ್ನು ಬಂಡವಾಳಶಾಹಿ ಪರ ಬಿಜೆಪಿ ನಾಯಕರ ನೇತೃತ್ವದ ಗುಂಪು ಅದಾನಿಗೆ ಭಾರಿ ಮೊತ್ತಕ್ಕೆ ಮಾರಾಟ ಮಾಡಿರುವುದು ಅಂತಹ ಪ್ರಯತ್ನಗಳಲ್ಲಿ ಒಂದಾಗಿದೆ. ಹೊಸ ದೇವಸ್ಥಾನದಿಂದ ಕೇವಲ 5 ಕಿ.ಮೀ ದೂರದಲ್ಲಿರುವ ಮಜ್ಹಾ ಜಮ್ತಾರಾದಲ್ಲಿ ಒಂದು ಹೆಕ್ಟೇರ್ಗಿಂತಲೂ ಹೆಚ್ಚು ವಿಸ್ತೀರ್ಣದ ನೀರಾವರಿ ಭೂಮಿಯನ್ನು ಆರಂಭದಲ್ಲಿ ಇಬ್ಬರು ಬಿಜೆಪಿ ನಾಯಕರ ಒಡೆತನದ ಟೈಮ್ ಸಿಟಿ ಎಂಬ ರಿಯಲ್ ಎಸ್ಟೇಟ್ ಸಂಸ್ಥೆ ಖರೀದಿಸಿತು. ಅವರಲ್ಲಿ ಒಬ್ಬರು ಈ ಮೊದಲು ಶಾಸಕರಾಗಿದ್ದವರು. ಬಡ ರೈತರನ್ನು ವಂಚಿಸಿ ಮಾರುಕಟ್ಟೆ ಬೆಲೆಗಿಂದ ಕಡಿಮೆ ಬೆಲೆಯಾದ 1.13 ಕೋಟಿಗೆ ಅದನ್ನು ಖರೀದಿಸಿ ನಂತರ ಅದನ್ನು ಅದಾನಿ ಸಮೂಹಕ್ಕೆ 3.57 ಕೋಟಿಗೆ ಮಾರಾಟ ಮಾಡಲಾಯಿತು.

ಅದಾನಿ ಸಮೂಹವು ಈ ಭೂಮಿಯನ್ನು ಇಷ್ಟು ದೊಡ್ಡ ಮೊತ್ತಕ್ಕೆ ಖರೀದಿಸಿರುವುದು ಆ ಭೂಮಿಯನ್ನು ರಕ್ಷಿಸಲು ಅಲ್ಲ, ಆದರೆ ವ್ಯಾಪಾರ ಉದ್ದೇಶಕ್ಕಾಗಿ ಎಂಬುದು ಖಚಿತವಾಗಿದೆ. ಈ ಒಪ್ಪಂದದಲ್ಲಿ ಲಾಭ ಗಳಿಸಿದವರೆಲ್ಲ ಸಂಘ ಪರಿವಾರದ ನಾಯಕರು ಮತ್ತು ಅದರ ಜೊತೆ ಕೈ ಜೋಡಿಸಿರುವ ಕ್ರೂರಿ ಬಂಡವಾಳಶಾಹಿಗಳು. ಕಳೆದುಕೊಂಡವರು ತಮ್ಮ ಜೀವನೋಪಾಯಕ್ಕಾಗಿ ಈ ಭೂಮಿಯಲ್ಲಿ ಸಾಗುವಳಿ ಮಾಡುತ್ತಿದ್ದ ಬಡ ರೈತರು.

ಈ ಸಂದರ್ಭದಲ್ಲಿ ಡಿಮಾನಿಟೈಸೇಶನ್ನ ಪ್ರಮುಖ ಆರ್ಥಿಕ ಲಾಭ ಪಡೆದವರು ಬಿಜೆಪಿ ನಾಯಕರು ಎಂದು ನೆನಪಿಸಿಕೊಳ್ಳುವುದು ಸೂಕ್ತವೆನಿಸುತ್ತದೆ.

ಟೈಮ್ ಸಿಟಿ ಅದಾನಿ ಗ್ರೂಪ್ಗೆ ಮಾರಾಟ ಮಾಡಿರುವ ಮಝಾ ಜಮ್ತಾರಾದಲ್ಲಿನ ಜೌಗುಭೂಮಿಯಲ್ಲಿ ಭೂಮಿಯಲ್ಲಿ ಯಾವುದೇ ನಿರ್ಮಾಣ ಕಾರ್ಯಗಳಿಗೆ ಅಯೋಧ್ಯೆ ಅಭಿವೃದ್ಧಿ ಪ್ರಾಧಿಕಾರದ ಮಂಡಳಿಯ ನಿಷೇಧ ಹೇರಿದೆ. ಅಲ್ಲಿ ಅದಾನಿ ಸಮೂಹ ಆ ನಿಷೇಧವನ್ನು ಉಲ್ಲಂಘಿಸಿ ಮಂದಿರದ ಪರಿಸರದ ಸೂಕ್ಷ್ಮ ಪ್ರದೇಶದಲ್ಲಿ ಬೃಹತ್ ಕಟ್ಟಡಗಳನ್ನು ನಿರ್ಮಾಣ ಮಾಡಲು ಕಾಯುತ್ತಿರುವ ಪ್ರತಿಕೃತಿಯಂತೆ ಕಾಯುತ್ತ ಕುಳಿತಿದೆ.

admin

Recent Posts

ಕಟಕ್‌ ದಂಗೆ ಆತಂಕಕಾರಿ – ನಿಷ್ಪಕ್ಷಪಾತ ತನಿಖೆ ಮತ್ತು ಆರೋಪಿಗಳ ವಿರುದ್ಧ ಕಠಿಣ ಕ್ರಮಕ್ಕೆ SDPI ಆಗ್ರಹ

ಒಡಿಶಾದ ಕಟಕ್‌ನಲ್ಲಿ ದುರ್ಗಾ ಪೂಜೆಯ ವಿಗ್ರಹ ಮೆರವಣಿಗೆ ಸಮಯದಲ್ಲಿ ಒಂದು ನಿರ್ದಿಷ್ಟ ಸಮುದಾಯವನ್ನು ಗುರಿಯಾಗಿಸಿ ಮಾಡಿದ ಹಿಂಸಾಚಾರ ಅತ್ಯಂತ ಆತಂಕಕಾರಿ…

1 day ago

ಮುಖ್ಯ ನ್ಯಾಯಮೂರ್ತಿ ಗವಾಯಿ ಮೇಲೆ ದಾಳಿ ಎಸ್.ಡಿ.ಪಿ.ಐ ಖಂಡನೆ.

ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಬಿ.ಆರ್ ಗವಾಯಿ ಅವರ ಮೇಲೆ ಶೂ ಎಸೆಯಲು ಪ್ರಯತ್ನ ಪಟ್ಟ ಘಟನೆಯನ್ನು ಸೋಶಿಯಲ್ ಡೆಮಾಕ್ರಟಿಕ್…

2 days ago

انصاف کی جیت

کے․جی․ ہلّی اور ڈی․جی․ ہلّی مقدمے میں گرفتار دو افراد کوسپریم کورٹ نے ضمانت منظور…

2 days ago

ಮಹರ್ಷಿ ವಾಲ್ಮೀಕಿ ಜಯಂತಿಯ ಶುಭಾಶಯಗಳು

ನೀವು ಜ್ಞಾನ, ಹಣ, ಪ್ರತಿಷ್ಠೆ, ಶಕ್ತಿಯನ್ನು ಸಂಗ್ರಹಿಸಬಹುದು. ಆದರೆ ಇದೆಲ್ಲದರ ನಡುವೆ ಪ್ರೀತಿಯನ್ನು ಕಳೆದುಕೊಂಡಿದ್ದರೆ ನೀವು ನಿಜವಾದ ಬದುಕನ್ನೇ ಕಳೆದುಕೊಂಡಿದ್ದೀರಿ…

2 days ago

ನ್ಯಾಯದ ಜಯ

ಕೆ.ಜಿ.ಹಳ್ಳಿ ಮತ್ತು ಡಿ.ಜೆ.ಹಳ್ಳಿ ಪ್ರಕರಣದಲ್ಲಿ ಬಂಧಿತರಾದ ಇಬ್ಬರಿಗೆ ಸರ್ವೋಚ್ಚ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ ಇದು ನ್ಯಾಯ ಮತ್ತು ಸತ್ಯದ…

2 days ago

کے۔ جے، جارج کے استعفی کا ایس ڈی پی آئی کا مطالبہ

عبد الحنان ریاستی نائب صدر - ایس۔ ڈی۔ پی۔ آئی ہے بنگلور، 5 اکتوبر: توانائی…

4 days ago