feature

ನೆನಪು

ಕೆ.ಎಂ. ಶರೀಫ್ ಸಾಬ್

01.09.1964-22.12.2020

25 ವರ್ಷಗಳ ಹಿಂದೆ ಕರಾವಳಿ ಕರ್ನಾಟಕದಲ್ಲಿ ಸಂಘಪರಿವಾರ ನಿರಂತರ ಕ್ರೌರ್ಯ ಮೆರೆಯುತ್ತಿದ್ದ ಕಾಲ. ಅದನ್ನು ಪ್ರಶ್ನೆ ಮಾಡುವವರು ತಡೆಯುವವರು ಯಾರು ಇರಲಿಲ್ಲ. ಆಸಂದರ್ಭದಲ್ಲಿ ಅನ್ಯಾಯಕ್ಕೊಳಗಾದ ಧ್ವನಿ ಇಲ್ಲದ ಸಮುದಾಯದ ಜೊತೆ ದೃಢವಾಗಿ ನಿಂತವರು ಕೆ.ಎಂ.ಶರೀಫ್ . ನಿರಂತರ ದೌರ್ಜನ್ಯಕ್ಕೊಳಗಾಗುತ್ತಿದ್ದ ಸಮುದಾಯಗಳನ್ನು ಜಾಗೃತಿಗೊಳಿಸಿ ಸಂಘಟಿತರಾಗುವಂತೆ ಮಾಡುವಲ್ಲಿ ಮುತುವರ್ಜಿ ವಹಿಸಿದರು. ವರದಕ್ಷಿಣೆಯಂತಹ ಸಾಮಾಜಿಕ ಪಿಡುಗುಗಳ ವಿರುದ್ಧ ಜಾಗೃತಿ ಮೂಡಿಸಿ, ಬದಲಾವಣೆಗೆ ಮುನ್ನುಡಿ ಬರೆದರು. ನಂತರದ ದಿನಗಳಲ್ಲಿ ನಾಯಕತ್ವ ಬೆಳೆಯುತ್ತಲೇ ಹೋಗಿ, ಜನಪರ ಚಳುವಳಿಗಳಲ್ಲಿ ಉನ್ನತ ಸ್ಥಾನವನ್ನು ನಿಭಾಯಿಸಿದರು. ಜವಾಬ್ದಾರಿಗಳು ಹೆಚ್ಚಾದಾಗ ಕೆ.ಎಂ.ಶರೀಫ್ ಅವರು, ಆರೋಗ್ಯ ಹದಗೆಡುತ್ತಿದ್ದ ನಡುವೆಯೂ ರಾಷ್ಟ್ರಾದ್ಯಂತ ಮುಸ್ಲಿಮರ ಮಾತ್ರವಲ್ಲ ಶತಮಾನಗಳಿಂದ ದೌರ್ಜನ್ಯಕ್ಕೊಳಗಾದ ಮತ್ತು ಮೂಲೆಗೆಸೆಯಲ್ಪಟ್ಟವರ ಕಣ್ಣೀರು ಒರೆಸುವ ಮತ್ತು ನ್ಯಾಯಕ್ಕಾಗಿ ಧ್ವನಿ ಗೂಡಿಸಿದರು. ಸಂತ್ರಸ್ತ ಜನರಲ್ಲಿ ಆತ್ಮಸ್ಥೆರ್ಯ ತುಂಬಿದರು. ಸರ್ಕಾರಗಳ ಜನವಿರೋಧಿ ಮತ್ತು ಸಂವಿಧಾನ ವಿರೋಧಿ ನಡೆಗಳನ್ನು ವಿರೋಧಿಸುತ್ತಲೇ ಬಂದರು. ಸಂಘಪಾರಿವಾರದ ಸಂಚುಗಳನ್ನು, ಅದರ ಆಳ ಅಗಲಗಳನ್ನು ಜನರಿಗೆ ಪರಿಚಯಿಸಿ ಜಾಗೃತಿ ಮೂಡಿಸಿದ್ದರು. ಎಲ್ಲಾ ಕ್ಷೇತ್ರಗಳಲ್ಲೂ ಹಿಡಿತಹೊಂದಿದ್ದ ಕೆ.ಎಂ.ಶರೀಫ್ ಸಾಬ್ ಉತ್ತಮ ಚಿಂತಕ, ಹೋರಾಟ ಗಾರ, ವಿಮರ್ಶೆಗಾರ ಮತ್ತು ಒಳ್ಳೆಯ ಭಾಷಣಗಾರ ಕೂಡ. ಹಲವು ನಾಯಕರನ್ನು ಸಮುದಾಯಕ್ಕೆ ನೀಡುವಲ್ಲಿ ಸ್ಫೂರ್ತಿದಾಯಕರೂ ಆಗಿದ್ದರು. ಬಹುಮುಖ ವ್ಯಕ್ತಿತ್ವ ಹೊಂದಿದ್ದ ಕೆ. ಎಂ. ಶರೀಫ್ ನಮ್ಮೊಂದಿಗೆ ಇಂದು ಇಲ್ಲದಿದ್ದರೂ ಅವರು ನೀಡಿದ ಮಾರ್ಗದರ್ಶನ, ತೋರಿದ ದಾರಿ, ಮೂಡಿಸಿದ ಜಾಗೃತಿ ನಮ್ಮ ಪಕ್ಷಕ್ಕೆ ಇಂದಿಗೂ ಸ್ಫೂರ್ತಿಯಾಗಿದೆ. ಅವರು ಅಗಲಿದ ಈ ದಿನದಲ್ಲಿ ಅವರನ್ನು ಸ್ಮರಿಸುತ್ತಿದ್ದೇವೆ.

admin

Recent Posts

ಸಂವಿಧಾನ ಶಿಲ್ಪಿ, ಭಾರತ ರತ್ನ,

ಡಾ|| ಬಾಬಾ ಸಾಹೇಬ್ ಅಂಬೇಡ್ಕ‌ರ್ 14 April, 2026 ಜನ್ಮ ದಿನಾಚರಣೆ ಪ್ರಯುಕ್ತ ಸಾಮಾಜಿಕ ನ್ಯಾಯ ದಿನಾಚರಣೆ SOCIAL JUSTICE…

10 hours ago

داؤانگیری ضمنی انتخاب 2026 ایس ڈی پی آئی کا واضح مؤقف

داؤ انگیری کے ضمنی انتخاب کے تناظر میں کانگریس پارٹی کی جانب سے اپنے ہی…

1 day ago

Davanagere By-Election 2026 SDPI ka Wazeh Mauqif

Davanagere by-election ke tanazur mein Congress party ki taraf se apne hi baghi leaders par…

1 day ago

Davanagere By-Election 2026 SDPI’s Clear Stand

In the context of the Davanagere by-election, the Congress party's allegation that its own rebel…

1 day ago

ದಾವಣಗೆರೆ ಉಪಚುನಾವಣೆ 2026 SDPI ನ ಸ್ಪಷ್ಟ ನಿಲುವು

ದಾವಣಗೆರೆ ಉಪಚುನಾವಣೆಯ ಹಿನ್ನೆಲೆದಲ್ಲಿ ಕಾಂಗ್ರೆಸ್ ಪಕ್ಷವು ತನ್ನದೇ ಪಕ್ಷದ ಬಂಡಾಯ ನಾಯಕರ ಮೇಲೆ SDPI ಹಣಕಾಸು ಸಹಾಯ ಪಡೆದಿದ್ದಾರೆ ಎಂಬ…

2 days ago