KannadaPressReleases

ಶಾ ಅವರ ಹೇಳಿಕೆ ವಿರೋಧಿಸಿ ಡಿಸೆಂಬರ್ 24ರ ಗುಲಬರ್ಗಾ ಬಂದ್ ಗೆ ಎಸ್‌ಡಿಪಿಐ ಸಂಪೂರ್ಣ ಬೆಂಬಲ

ಗುಲಬರ್ಗಾ: 22 ಡಿಸೆಂಬರ್ 2024.

ಸೋಶಿಯಲ್ ಡೆಮೊಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ಗುಲ್ಬರ್ಗ ಜಿಲ್ಲಾ ಸಮಿತಿ ಸಭೆಯು ಪಕ್ಷದ ಜಿಲ್ಲಾ ಕಛೇರಿಯಲ್ಲಿ ಜಿಲ್ಲಾಧ್ಯಕ್ಷರಾದ ಸೈಯದ್ ದಸ್ತಗೀರ್ ರವರ ಅಧ್ಯಕ್ಷತೆಯಲ್ಲಿ ಮತ್ತು ರಾಜ್ಯ ಉಪಾಧ್ಯಕ್ಷರಾದ ಅಬ್ದುಲ್ ಹನ್ನಾನ್ ಹಾಗೂ ರಾಜ್ಯ ಪ್ರಧಾನ ಕಾರ್ಯದರ್ಶಿ ಮತ್ತು ಗುಲ್ಬರ್ಗ ಜಿಲ್ಲಾ ಉಸ್ತುವಾರಿ ಅಪ್ಸರ್ ಕೊಡ್ಲಿಪೇಟೆ ರವರ ಉಪಸ್ಥಿತಿಯಲ್ಲಿ ಜರುಗಿತು.

ಈ ಸಭೆಯಲ್ಲಿ ಗುಲಬರ್ಗಾ ಜಿಲ್ಲೆಯ ವಿವಿಧ ಮುಖ್ಯವಾದ ವಿಷಯಗಳು ಚರ್ಚಿಸಲ್ಪಟ್ಟವು.

ರಾಜ್ಯ ಉಪಾಧ್ಯಕ್ಷ ಅಬ್ದುಲ್ ಹನ್ನಾನ್ ರವರು ಪ್ರಾಸ್ತಾವಿಕವಾಗಿ ಮಾತನಾಡಿ , ಗುಲ್ಬರ್ಗದ 371 ಹಾಸಿಗೆಯ ಜಯದೇವ ಆಸ್ಪತ್ರೆಯ ಸ್ವಂತ ಕಟ್ಟಡ ಉದ್ಘಾಟನೆಗಾಗಿ ರಾಜ್ಯ ಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ನವರ ನಡೆಯನ್ನು ಸ್ವಾಗತಿಸಿದರು.

ಈ ಆಸ್ಪತ್ರೆಯು ಕಲ್ಯಾಣ ಕರ್ನಾಟಕದ ಜನರ ದೀರ್ಘಕಾಲದ ಆರೋಗ್ಯ ಸಮಸ್ಯೆಗಳಿಗೆ ಪರಿಹಾರ ಒದಗಿಸಬಹುದು ಎಂಬ ಭರವಸೆ ವ್ಯಕ್ತಪಡಿಸಿದರು, ಏಕೆಂದರೆ ಜನರು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ಪ್ರಯಾಣ ಮಾಡಬೇಕಾಗುತ್ತಿತ್ತು. ಗುಲಬರ್ಗಾದಲ್ಲಿ ಇಂದಿರಾ ಗಾಂಧಿ ಮಕ್ಕಳ ಆಸ್ಪತ್ರೆಯ ಶಾಖೆಯನ್ನು ಸ್ಥಾಪಿಸಲು ಸರ್ಕಾರಕ್ಕೆ ಅವರು ಮನವಿ ಮಾಡಿದರು, ಇದು ಉತ್ತರ ಕರ್ನಾಟಕದ ಜನರ ಆರೋಗ್ಯದ ಮೇಲಿನ ಒತ್ತಡವನ್ನು ಕಡಿಮೆ ಮಾಡಲು ಸಹಾಯಕವಾಗುತ್ತದೆ.

ರಾಜ್ಯ ಪ್ರಧಾನ ಕಾರ್ಯದರ್ಶಿ ಅಫ್ಸರ್ ಕೊಡ್ಲಿಪೇಟೆ, ಸಂಸತ್ತಿನಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಇತ್ತೀಚಿನ ವಿವಾದಾತ್ಮಕ ಹೇಳಿಕೆಯನ್ನು ತೀವ್ರವಾಗಿ ವಿರೋಧಿಸಿದರು, ಅಂಬೇಡ್ಕರ್ ಹೆಸರನ್ನು ಹೆಚ್ಚಿನ ಬಾರಿ ಉಲ್ಲೇಖಿಸುತ್ತಿರುವ ಬಗ್ಗೆ ವ್ಯಂಗ್ಯವಾಡಿದ ಶಾ ಅವರ ಹೇಳಿಕೆಯನ್ನು ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಮತ್ತು ಸಂವಿಧಾನದಲ್ಲಿ ನಿರ್ಧಿಷ್ಟಗೊಳಿಸಲಾದ ಸಮಾನತೆ ಮತ್ತು ನ್ಯಾಯದ ಮೌಲ್ಯಗಳಿಗೆ ಅವಮಾನ ಎಂದು ಖಂಡಿಸಿದರು.

ಅಫ್ಸರ್ ಕೊಡ್ಲಿಪೇಟೆ, ಶೋಷಿತ ಸಮುದಾಯಗಳ ಮುಕ್ತಿಗಾಗಿ ಅಂಬೇಡ್ಕರ್ ಅವರ ಪಾತ್ರವನ್ನು ಪುನರುಚ್ಚರಿಸಿದರು ಮತ್ತು ಅವರ ಹೆಸರು ಉಚ್ಚರಿಸುವುದು ಸಮಾನತೆ ಮತ್ತು ನ್ಯಾಯಕ್ಕಾಗಿ ಹೋರಾಟವನ್ನು ಪ್ರತಿನಿಧಿಸುತ್ತದೆ ಎಂದು ಹೇಳಿದರು. ಅವರು, ಡಾ. ಅಂಬೇಡ್ಕರ್ ವಿರೋಧಿಸಿದ ಮಾನವತೆಯನ್ನು ವಿರೋಧಿಸುವ ಮನುಸ್ಮೃತಿಯನ್ನು ಪುನಃಜೀವಿತಗೊಳಿಸಲು ಬಿಜೆಪಿ ಮತ್ತು ಆರ್‌ಎಸ್‌ಎಸ್ ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಅಮಿತ್ ಶಾ ದೇಶದ ಜನರಿಗೆ ಕ್ಷಮೆಯಾಚಿಸಬೇಕೆಂದು ಒತ್ತಾಯಿಸುತ್ತಾ, 24 ಡಿಸೆಂಬರ್ 2024 ರಂದು ನಡೆಯುವ ಗುಲಬರ್ಗಾ ಬಂದ್ ಗೆ ಎಸ್‌ಡಿಪಿಐ ಸಂಪೂರ್ಣ ಬೆಂಬಲ ನೀಡುವುದಾಗಿ ಘೋಷಿಸಿದರು.

ಸಭೆಯ ಕೊನೆಯ ಭಾಗದಲ್ಲಿ ರಾಜ್ಯ ಸಮಿತಿ ಸದಸ್ಯರಾದ ಅಬ್ದುಲ್ ರಹೀಮ್ ಪಟೇಲ್, ಡಾ. ರಿಜ್ವಾನ್ ಅಹಮದ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸೈಯದ್ ಅಲೀಮ್ ಇಲಾಹಿ, ಜಿಲ್ಲಾ ಸಮಿತಿ ಸದಸ್ಯ ಮೊಹಮ್ಮದ್ ಮೊಹ್ಸಿನ್ ಮತ್ತು ಇತರ ಜಿಲ್ಲಾ ಸಮಿತಿಯ ಸದಸ್ಯರು ಹಾಜರಿದ್ದರು.

admin

Recent Posts

ಕಟಕ್‌ ದಂಗೆ ಆತಂಕಕಾರಿ – ನಿಷ್ಪಕ್ಷಪಾತ ತನಿಖೆ ಮತ್ತು ಆರೋಪಿಗಳ ವಿರುದ್ಧ ಕಠಿಣ ಕ್ರಮಕ್ಕೆ SDPI ಆಗ್ರಹ

ಒಡಿಶಾದ ಕಟಕ್‌ನಲ್ಲಿ ದುರ್ಗಾ ಪೂಜೆಯ ವಿಗ್ರಹ ಮೆರವಣಿಗೆ ಸಮಯದಲ್ಲಿ ಒಂದು ನಿರ್ದಿಷ್ಟ ಸಮುದಾಯವನ್ನು ಗುರಿಯಾಗಿಸಿ ಮಾಡಿದ ಹಿಂಸಾಚಾರ ಅತ್ಯಂತ ಆತಂಕಕಾರಿ…

21 hours ago

ಮುಖ್ಯ ನ್ಯಾಯಮೂರ್ತಿ ಗವಾಯಿ ಮೇಲೆ ದಾಳಿ ಎಸ್.ಡಿ.ಪಿ.ಐ ಖಂಡನೆ.

ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಬಿ.ಆರ್ ಗವಾಯಿ ಅವರ ಮೇಲೆ ಶೂ ಎಸೆಯಲು ಪ್ರಯತ್ನ ಪಟ್ಟ ಘಟನೆಯನ್ನು ಸೋಶಿಯಲ್ ಡೆಮಾಕ್ರಟಿಕ್…

2 days ago

انصاف کی جیت

کے․جی․ ہلّی اور ڈی․جی․ ہلّی مقدمے میں گرفتار دو افراد کوسپریم کورٹ نے ضمانت منظور…

2 days ago

ಮಹರ್ಷಿ ವಾಲ್ಮೀಕಿ ಜಯಂತಿಯ ಶುಭಾಶಯಗಳು

ನೀವು ಜ್ಞಾನ, ಹಣ, ಪ್ರತಿಷ್ಠೆ, ಶಕ್ತಿಯನ್ನು ಸಂಗ್ರಹಿಸಬಹುದು. ಆದರೆ ಇದೆಲ್ಲದರ ನಡುವೆ ಪ್ರೀತಿಯನ್ನು ಕಳೆದುಕೊಂಡಿದ್ದರೆ ನೀವು ನಿಜವಾದ ಬದುಕನ್ನೇ ಕಳೆದುಕೊಂಡಿದ್ದೀರಿ…

2 days ago

ನ್ಯಾಯದ ಜಯ

ಕೆ.ಜಿ.ಹಳ್ಳಿ ಮತ್ತು ಡಿ.ಜೆ.ಹಳ್ಳಿ ಪ್ರಕರಣದಲ್ಲಿ ಬಂಧಿತರಾದ ಇಬ್ಬರಿಗೆ ಸರ್ವೋಚ್ಚ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ ಇದು ನ್ಯಾಯ ಮತ್ತು ಸತ್ಯದ…

2 days ago

کے۔ جے، جارج کے استعفی کا ایس ڈی پی آئی کا مطالبہ

عبد الحنان ریاستی نائب صدر - ایس۔ ڈی۔ پی۔ آئی ہے بنگلور، 5 اکتوبر: توانائی…

4 days ago