Categories: featureNewsPolitics

ರಾಜಕೀಯ ಹಕ್ಕುಗಳ ಹೋರಾಟದಲ್ಲಿ ಕುಟುಂಬಗಳ ಪಾತ್ರ ಅನಿವಾರ್ಯವಾಗಿದೆ’-ಅಪ್ಪರ್ ಕೊಡ್ಲಿಪೇಟೆ

ಬೆಂಗಳೂರು, 22 ಜೂನ್ 2025: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ಪಕ್ಷದ 17ನೇ ಸಂಸ್ಥಾಪನಾ ದಿನಾಚರಣೆಯ ಅಂಗವಾಗಿ ಬೆಂಗಳೂರಿನ ನಾಯಂಡನಹಳ್ಳಿ ವಾರ್ಡ್ ವ್ಯಾಪ್ತಿಯ ಕಾರ್ಯಕರ್ತರ ಕುಟುಂಬ ಸದಸ್ಯರೊಂದಿಗೆ “ಫ್ಯಾಮಿಲಿ ಗೆಟ್ ಟುಗೆದರ್” ಕಾರ್ಯಕ್ರಮವನ್ನು ಆಯೋಜಿಸಲಾಯಿತು.

ಈ ಕಾರ್ಯಕ್ರಮದಲ್ಲಿ ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಅಪ್ಸರ್ ಕೊಡ್ಲಿಪೇಟೆ ಮುಖ್ಯ ಅತಿಥಿಯಾಗಿ ಪಾಲ್ಗೊಂಡು, ಪಕ್ಷದ ಕಳೆದ 16 ವರ್ಷಗಳ ಹೋರಾಟದ ಬದುಕು ಮತ್ತು ಪಕ್ಷದ ಕಾರ್ಯಕರ್ತರು ಎದುರಿಸಿದ ಸಂಕಷ್ಟಗಳ ಬಗ್ಗೆ ಮಾತನಾಡುತ್ತಾ “ರಾಜಕೀಯ ಸಿದ್ದಾಂತಗಳ ಕುರಿತು ತೀವ್ರ ನಿಷ್ಠೆ ಹೊಂದಿರುವ SDPI ಪಕ್ಷದ ಚಳವಳಿಯ ಬಲವು ಕೇವಲ ವ್ಯಕ್ತಿಗಳ ತ್ಯಾಗದಲ್ಲಿ ಅಲ್ಲ, ಆ ವ್ಯಕ್ತಿಗಳ ಹಿಂದೆ ನಿಂತಿರುವ ಕುಟುಂಬಗಳ ಧೈರ್ಯ, ಸಹನೆ ಮತ್ತು ನೈತಿಕ ಬೆಂಬಲದಲ್ಲಿಯೂ ಇದೆ.

ಹೋರಾಟವು ಸಂಘಟಿತವಾಗಬೇಕಾದರೆ ಅದು ಮನೆಯ ತಳಮಟ್ಟದಲ್ಲೇ ಪ್ರಾರಂಭವಾಗಬೇಕು. ಕುಟುಂಬದ ಸದಸ್ಯರು, ಮುಖ್ಯವಾಗಿ ಮಹಿಳೆಯರು ಮತ್ತು ಯುವಕರ ಪಾಲು ಈ ಹೋರಾಟದ ಪ್ರಮುಖ ಪ್ರೇರಣೆಯಾಗಿದೆ “

ಎಂದು ಒತ್ತಿ ಹೇಳಿದರು:

“ಹಿರಿಯರ ಅನುಭವಗಳು ಮತ್ತು ಮಕ್ಕಳ ಭರವಸೆ, ಕುಟುಂಬದಲ್ಲಿ ಬೆಳೆದ ಸಂಸ್ಕಾರಗಳು ಪಕ್ಷದ ಭವಿಷ್ಯವನ್ನು ರೂಪಿಸುತ್ತವೆ. ಸಂವಿಧಾನದ ರಕ್ಷಣೆಗೆ ಸಂಬಂಧಿಸಿದ ಹೋರಾಟ ಒಂದಿಷ್ಟು ಜನರ ಹೊಣೆಗಾರಿಕೆಯಷ್ಟೇ ಅಲ್ಲ, ಅದು ಕುಟುಂಬದ ಪ್ರತಿಯೊಬ್ಬ ಸದಸ್ಯನ ನಿಷ್ಠೆ ಮತ್ತು ಜವಾಬ್ದಾರಿ ಆಗಬೇಕು.” ಎಂದು ಕರೆ ನೀಡಿದರು.

ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಮಹಿಳಾ ಕಾರ್ಯಕರ್ತರು ತಮ್ಮ ಜೀವನದಲ್ಲಿ ಎದುರಿಸಿದ ರಾಜಕೀಯ ಅಥವಾ ಸಾಮಾಜಿಕ ಅನ್ಯಾಯಗಳನ್ನು ಹಂಚಿಕೊಂಡು ಭಾವನಾತ್ಮಕ ಹೊಣೆಗಾರಿಕೆಯನ್ನು ವ್ಯಕ್ತಪಡಿಸಿದರು. ಯುವಕರು, ವಿಶೇಷವಾಗಿ ಹೈ ಸ್ಕೂಲ್ ಹಾಗೂ ಕಾಲೇಜು ಮಟ್ಟದವರು, ತಮ್ಮ ಮುಂದಿರುವ ಸಮಾಜ ಪರಿವರ್ತನೆ ಸಂಬಂಧಿತ ಕನಸುಗಳು ಮತ್ತು ಪಕ್ಷದ ಮೂಲಕ ತಾವು ಪಡೆದ ಪ್ರೇರಣೆಯ ಬಗ್ಗೆ ಮಾತನಾಡಿದರು.

”ಈ ರೀತಿಯ ಕುಟುಂಬ ಸಮ್ಮಿಲನಗಳು ಕೇವಲ ಸಾಮಾಜಿಕ ನೆಲೆಗಟ್ಟಿನಲ್ಲಿಯೇ ಅಲ್ಲ, ಇವು ಪಕ್ಷದ ನೈತಿಕ ಶಕ್ತಿಯನ್ನು ಬಲಪಡಿಸುವ, ನಂಬಿಕೆಗಳ ಚಿಂತನೆಗೆ ಪ್ರಚೋದನೆ ನೀಡುವ, ಮತ್ತು ಮುಂದಿನ ಪೀಳಿಗೆಗೆ ರಾಜಕೀಯ ಜವಾಬ್ದಾರಿಯ ಸಂದೇಶ ನೀಡುವ ಪ್ರಮುಖ ವೇದಿಕೆಯಾಗಲಿ ಎಂದು ಅಪ್ಸರ್ ಕೊಡ್ಲಿಪೇಟೆ ಕರೆ ನೀಡಿದರು.”

ಸಭೆಯಲ್ಲಿ ಹಾಜರಿದ್ದವರು:

SDPI ನಾಯಂಡನಹಳ್ಳಿ ವಾರ್ಡ್ ಅಧ್ಯಕ್ಷ ಮೋಹಮ್ಮದ್ ನಯಾಜ್, ಕಾರ್ಯದರ್ಶಿ ಇನಾಯತ್ ಪಾಷ, ಪಕ್ಷದ ಜಿಲ್ಲಾ ನಾಯಕರು, ಮಹಿಳಾ ಘಟಕವಾದ ವಿಮೆನ್ ಇಂಡಿಯಾ ಮೂಮೆಂಟ್ ಸಂಘಟನೆಯ ಪ್ರಮುಖ ಸದಸ್ಯರು

17thFormationDay #FreeMKFaizy #SDPIFormationDay #21stJune #SDPIKarnataka

admin

Recent Posts

ಕನ್ನಡ ರಾಜ್ಯೋತ್ಸವಸಮೃದ್ಧ, ಸದೃಢ, ಸ್ವಾಭಿಮಾನಿ ಕರ್ನಾಟಕಎಸ್.ಡಿ.ಪಿ.ಐ ಸಂಕಲ್ಪ

ಒಲವಿನ ಕರ್ನಾಟಕ 1 ನವೆಂಬರ್ 2025 ನಮ್ಮ ನಾಡು, ನಮ್ಮ ನುಡಿ, ನಮ್ಮ ಹೆಮ್ಮೆ ಕರ್ನಾಟಕ ಕನ್ನಡ ನಾಡಿನ ಶಾಂತಿ,…

3 hours ago

ಕನ್ನಡ ರಾಜ್ಯೋತ್ಸವಸಮೃದ್ಧ, ಸದೃಢ, ಸ್ವಾಭಿಮಾನಿ ಕರ್ನಾಟಕಎಸ್.ಡಿ.ಪಿ.ಐ ಸಂಕಲ್ಪ

ಒಲವಿನ ಕರ್ನಾಟಕ 1 ನವೆಂಬರ್ 2025 ಕನ್ನಡದಲ್ಲೇ ಮಾತನಾಡೋಣ, ಕನ್ನಡದಲ್ಲೇ ವ್ಯವಹರಿಸೋಣ, ಹೆಮ್ಮೆಯ ಕನ್ನಡಿಗರಾಗೋಣ ನಾವೆಲ್ಲರೂ ಜೊತೆಯಾಗಿ ಕನ್ನಡ ನಾಡು…

3 hours ago

ಕನ್ನಡ ರಾಜ್ಯೋತ್ಸವಸಮೃದ್ಧ, ಸದೃಢ, ಸ್ವಾಭಿಮಾನಿ ಕರ್ನಾಟಕ ಎಸ್.ಡಿ.ಪಿ.ಐ ಸಂಕಲ್ಪ

ಒಲವಿನ ಕರ್ನಾಟಕ 1 ನವೆಂಬರ್ 2025 ಕನ್ನಡ ನನ್ನ ಕನಸು ಕನ್ನಡ ನನ್ನ ಮನಸ್ಸು ಕನ್ನಡಿಗನೆಂಬ ಹೆಮ್ಮೆ ಸೊಗಸು ನಾವೆಲ್ಲ…

7 hours ago

ಕರ್ನಾಟಕ ರಾಜ್ಯೋತ್ಸವ

ಸಮೃದ್ಧ, ಸದೃಢ, ಸ್ವಾಭಿಮಾನಿ ಕರ್ನಾಟಕ ಎಸ್.ಡಿ.ಪಿ.ಐ ಸಂಕಲ್ಪ ಒಲವಿನ ಕರ್ನಾಟಕ 01 ನವೆಂಬರ್ 2025 ಎಸ್‌ಡಿಪಿಐ ಕರ್ನಾಟಕ ರಾಜ್ಯಾದ್ಯಂತ ಕನ್ನಡ…

2 days ago

اقلیتوں کی فلاح و بہبود کے لیے

مختص رقم کہاں گئی؟ وائٹ پیپر جاری کرو ایس ڈی پی آئی 2025-26 کے بجٹ…

5 days ago

Aqalliyaton ki falah-o-behbood ke liye

Maqsoos Budget ki Raqham kahan gayi? White Paper jari karo - SDPI 2025-26 ke budget…

5 days ago