SDPI ರಾಜ್ಯ ನಾಯಕರು ಗದಗ ಜಿಲ್ಲೆಗೆ ಭೇಟಿ: ರಾಜಕೀಯ ಬದ್ಧತೆ, ಪರಸ್ಪರ ಗೌರವ ಮತ್ತು ಭವಿಷ್ಯದ ಸಹಯೋಗದ ಚರ್ಚೆ

ಗದಗ, 26 ಜೂನ್ 2025: ಎಸ್‌ಡಿಪಿಐ ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಅಪ್ಪರ್ ಕೊಡ್ಲಿಪೇಟೆ ಮತ್ತು ರಾಜ್ಯ ಕಾರ್ಯದರ್ಶಿ ಹಾಗೂ ಗದಗ ಜಿಲ್ಲಾ ಉಸ್ತುವಾರಿ ಅಪ್ಪರ್ ಕೆ.ಆರ್.ನಗರ ಅವರು ಇಂದು ಪಕ್ಷದ ಸಂಘಟನಾ ಬಲವರ್ದನೆಯ ಭಾಗವಾಗಿ ಗದಗ ಜಿಲ್ಲೆಗೆ ವಿಶೇಷ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಗದಗ-ಬೆಟಗೇರಿ ನಗರದಲ್ಲಿ ಜೆಡಿಎಸ್ ಪಕ್ಷದ ಹಿರಿಯ ಮುಖಂಡರು ಅವರನ್ನು ಆತ್ಮೀಯವಾಗಿ ಭೇಟಿಯಾಗಿ ಚರ್ಚೆ ನಡೆಸಿದರು.

ಭೇಟಿಯಲ್ಲಿ ಜೆಡಿಎಸ್ ಗದಗ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಜಿ ಅಲಿ ಕೊಪ್ಪಳ ಹಾಗೂ ಅಲ್ಪಸಂಖ್ಯಾತ ಘಟಕದ ಕಾರ್ಯದರ್ಶಿ ಮೊಹಮ್ಮದ್ ಸಿರಾಜ್ ಕದಡಿ ಉಪಸ್ಥಿತರಿದ್ದರು. ಅವರು ತಮ್ಮ ರಾಜಕೀಯ ಅನುಭವಗಳನ್ನು ಹಂಚಿಕೊಂಡು, ಇಂದಿನ ಅಲ್ಪಸಂಖ್ಯಾತರ ಕಾರ್ಯಕ್ಷಮತೆ, ನೈತಿಕ ರಾಜಕೀಯದ ಅಗತ್ಯತೆ ಮತ್ತು ಜನಪರ ಹೋರಾಟದ ಅನಿವಾರ್ಯತೆ ಬಗ್ಗೆ ವಿಶ್ಲೇಷಣಾತ್ಮಕ ಸಂವಾದ ನಡೆಸಿದರು.

ಭೇಟಿಯ ಕೊನೆಯಲ್ಲಿ, ಎಸ್‌ಡಿಪಿಐ ಪಕ್ಷದ ತಾತ್ವಿಕ ಸ್ಥಿರತೆ, ಸೈದ್ದಾಂತಿಕ ಹೋರಾಟ, ಜನಪರ ಚಟುವಟಿಕೆಗಳು ಮತ್ತು ರಾಜಕೀಯ ಪ್ರಾಮಾಣಿಕತೆಯನ್ನು ಶ್ಲಾಘಿಸಿ, ಇಬ್ಬರು ಮುಖಂಡರು ಆಫರ್ ಕೊಡ್ಲಿಪೇಟೆ ಮತ್ತು ಕೆ.ಆರ್.ನಗರ ರವರಿಗೆ ಶಾಲು ಹೊದಿಸಿ, ಮಾಲೆ ಹಾಕಿ ಗೌರವಿಸಿದರು.

ಈ ವೇಳೆ ಎಸ್‌ಡಿಪಿಐ ರಾಜ್ಯ ಪ್ರದಾನ ಕಾರ್ಯದರ್ಶಿ ಅಪ್ಪರ್ ಕೊಡ್ಲಿಪೇಟೆ ರವರು ಇಬ್ಬರೂ ಮುಖಂಡರಿಗೆ ಪಕ್ಷಕ್ಕೆ ಸೇರ್ಪಡೆಯಾಗಲು ಆಹ್ವಾನ ನೀಡಿದರು.

ಮಾತುಕತೆಯ ವೇಳೆ ಪಕ್ಷದ ಧೋರಣೆ ಮತ್ತು ಜನಪರ ಹೋರಾಟದ ಕಡೆಗೆ ಅವರ ಆಕರ್ಷಣೆ ಸ್ಪಷ್ಟವಾಗಿ ತೂರುತಿತ್ತು. ಶೀಘ್ರದಲ್ಲೇ ಅವರು ತಮ್ಮ ಬೆಂಬಲಿಗರೊಂದಿಗೆ ಎಸ್‌ಡಿಪಿಐ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ ಎಂಬ ವಿಶ್ವಾಸವನ್ನು ಪಕ್ಷದ ರಾಜ್ಯ ನಾಯಕರು ವ್ಯಕ್ತಪಡಿಸಿದ್ದಾರೆ.

ಈ ವೇಳೆ ಜಿಲ್ಲಾ ಅಧ್ಯಕ್ಷ ಬಿಲಾಲ್ ಗೋಕಾವಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಫ್ಘಾನ್, ಹಿರಿಯ ನಾಯಕ ಅನ್ವ‌ರ್ ಬಾಗೇವಾಡಿ ಹಾಗೂ ಜಿಲ್ಲಾ ಸಮಿತಿ ಸದಸ್ಯ ಹಿದಾಯತ್ ಚಾಚ ಉಪಸ್ಥಿತರಿದ್ದರು.

ಇಂತಹ ಭೇಟಿಗಳು ರಾಜಕೀಯ ಸೌಹಾರ್ದತೆಗೆ ಸಾಕ್ಷಿಯಾಗಿದ್ದು, ನೈಜ ಪರ್ಯಾಯ ಬಯಸುವವರು ಸತ್ಯದ ಕಡೆಗೆ ಸಾಗುವ ಧೈರ್ಯವನ್ನು ತೋರುತ್ತಿದ್ದಾರೆ. ಸಮಾಜದ ಪರಿವರ್ತನೆಗೆ ಜವಾಬ್ದಾರಿಯುತ ರಾಜಕೀಯ ಪ್ರಕ್ರಿಯೆಗಳಿಗೆ ಇವು ಬಲವನ್ನು ನೀಡುತ್ತವೆ.

admin

Recent Posts

ಕಟಕ್‌ ದಂಗೆ ಆತಂಕಕಾರಿ – ನಿಷ್ಪಕ್ಷಪಾತ ತನಿಖೆ ಮತ್ತು ಆರೋಪಿಗಳ ವಿರುದ್ಧ ಕಠಿಣ ಕ್ರಮಕ್ಕೆ SDPI ಆಗ್ರಹ

ಒಡಿಶಾದ ಕಟಕ್‌ನಲ್ಲಿ ದುರ್ಗಾ ಪೂಜೆಯ ವಿಗ್ರಹ ಮೆರವಣಿಗೆ ಸಮಯದಲ್ಲಿ ಒಂದು ನಿರ್ದಿಷ್ಟ ಸಮುದಾಯವನ್ನು ಗುರಿಯಾಗಿಸಿ ಮಾಡಿದ ಹಿಂಸಾಚಾರ ಅತ್ಯಂತ ಆತಂಕಕಾರಿ…

16 hours ago

ಮುಖ್ಯ ನ್ಯಾಯಮೂರ್ತಿ ಗವಾಯಿ ಮೇಲೆ ದಾಳಿ ಎಸ್.ಡಿ.ಪಿ.ಐ ಖಂಡನೆ.

ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಬಿ.ಆರ್ ಗವಾಯಿ ಅವರ ಮೇಲೆ ಶೂ ಎಸೆಯಲು ಪ್ರಯತ್ನ ಪಟ್ಟ ಘಟನೆಯನ್ನು ಸೋಶಿಯಲ್ ಡೆಮಾಕ್ರಟಿಕ್…

2 days ago

انصاف کی جیت

کے․جی․ ہلّی اور ڈی․جی․ ہلّی مقدمے میں گرفتار دو افراد کوسپریم کورٹ نے ضمانت منظور…

2 days ago

ಮಹರ್ಷಿ ವಾಲ್ಮೀಕಿ ಜಯಂತಿಯ ಶುಭಾಶಯಗಳು

ನೀವು ಜ್ಞಾನ, ಹಣ, ಪ್ರತಿಷ್ಠೆ, ಶಕ್ತಿಯನ್ನು ಸಂಗ್ರಹಿಸಬಹುದು. ಆದರೆ ಇದೆಲ್ಲದರ ನಡುವೆ ಪ್ರೀತಿಯನ್ನು ಕಳೆದುಕೊಂಡಿದ್ದರೆ ನೀವು ನಿಜವಾದ ಬದುಕನ್ನೇ ಕಳೆದುಕೊಂಡಿದ್ದೀರಿ…

2 days ago

ನ್ಯಾಯದ ಜಯ

ಕೆ.ಜಿ.ಹಳ್ಳಿ ಮತ್ತು ಡಿ.ಜೆ.ಹಳ್ಳಿ ಪ್ರಕರಣದಲ್ಲಿ ಬಂಧಿತರಾದ ಇಬ್ಬರಿಗೆ ಸರ್ವೋಚ್ಚ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ ಇದು ನ್ಯಾಯ ಮತ್ತು ಸತ್ಯದ…

2 days ago

کے۔ جے، جارج کے استعفی کا ایس ڈی پی آئی کا مطالبہ

عبد الحنان ریاستی نائب صدر - ایس۔ ڈی۔ پی۔ آئی ہے بنگلور، 5 اکتوبر: توانائی…

4 days ago