Categories: featureNewsPolitics

ಬದ್ಧತೆ ಮತ್ತು ಕಠಿಣ ಪರಿಶ್ರಮದ ಮೂಲಕ ಪಕ್ಷವನ್ನು ‘ಜನಾಧಿಕಾರದ ಕಡೆಗೆ ಮುನ್ನಡೆಸುವ ಮಹತ್ವದ ಪಾತ್ರನಿಭಾಯಿಸಬೇಕಿದೆ ಅಫ್ಸರ್ ಕೊಡ್ಲಿಪೇಟೆ

ಮೈಸೂರು, 03 ಜುಲೈ 2025: ರಾಜ್ಯ ಚುನಾವಣಾ ಉಸ್ತುವಾರಿ ಹಾಗೂ ರಾಜ್ಯ ಪ್ರಧಾನ

ಕಾರ್ಯದರ್ಶಿ ಅಫ್ಸರ್ ಕೊಡ್ಲಿಪೇಟೆ ರವರ ಮಾರ್ಗದರ್ಶನದಲ್ಲಿ ಹಾಗೂ ರಾಜ್ಯ ERM ಉಸ್ತುವಾರಿಯಾದ ಅಬ್ರಾರ್ ಅಹ್ಮದ್ ರವರ ಅಧ್ಯಕ್ಷತೆಯಲ್ಲಿ ಮೈಸೂರಿನ ಪಕ್ಷದ ಜಿಲ್ಲಾ ಕಚೇರಿಯಲ್ಲಿ ನಡೆದ ಚುನಾಯಿತ ಜನಪ್ರತಿನಿಧಿಗಳ ಮೇಲುಸ್ತುವಾರಿಗಳ (ERM) ಸಭೆಯಲ್ಲಿ ಪ್ರಾಸ್ತಾವಿಕವಾಗಿ ಮಾತನಾಡಿದ ಅಫ್ಸರ್ ಕೊಡ್ಲಿಪೇಟೆ ಅವರು “ಪಕ್ಷದ ರಾಜಕೀಯ ಶಕ್ತಿ ಬಲಪಡಿಸಲು ಮತ್ತು ಸಾರ್ವತ್ರಿಕ ಬೆಂಬಲ ಪಡೆಯಲು ಮುಂದಿನ ಸ್ಥಳೀಯ ಸಂಸ್ಥೆಗಳ ಚುನಾವಣೆಗಳು ಪ್ರಮುಖ ಹಂತವಾಗಿವೆ. ಈ ಹಿನ್ನಲೆಯಲ್ಲಿ ಚುನಾಯಿತ ಪ್ರತಿನಿಧಿಗಳಾಗಿರುವ SDPI ಪಕ್ಷದ ಹೋರಾಟಗಾರರ ಜವಾಬ್ದಾರಿ ಬಹಳ ಹೆಚ್ಚಾಗಿರುತ್ತದೆ. ರಾಜಕೀಯ ಬದ್ಧತೆ ಮತ್ತು ಕಠಿಣ ಪರಿಶ್ರಮದ ಮೂಲಕ ಈ ರಾಜಕೀಯ ಚಳುವಳಿಯನ್ನು “ಜನಾಧಿಕಾರದ ಕಡೆಗೆ” ಮುನ್ನಡೆಸುವ ಮಹತ್ವದ ಪಾತ್ರ ಚುನಾಯಿತ ಜನಪ್ರತಿನಿಧಿಗಳು ನಿಭಾಯಿಸಬೇಕಿದೆ ಎಂದು ಹಿತವಚನ ನುಡಿದರು.

ಸಭೆಯಲ್ಲಿ ಮಾತನಾಡಿದ ಅಬ್ರಾರ್ ಅಹ್ಮದ್ ಅವರು, ನಗರ ಸ್ಥಳೀಯ ಸಂಸ್ಥೆಗಳಲ್ಲಿ ಆಯ್ಕೆಯಾಗಿರುವ SDPI ಪಕ್ಷದ ಪಾಲಿಕೆ ಸದಸ್ಯರ ಹಾಗೂ ಕೌನ್ಸಿಲರ್‌ಗಳ ಕಾರ್ಯಕ್ಷಮತೆ ಹೆಚ್ಚಿಸುವ ಮತ್ತು ಅವಲೋಕನ ನಡೆಸುವ ನಿಟ್ಟಿನಲ್ಲಿ ಜುಲೈ 24 ರಂದು ಮೈಸೂರಿನಲ್ಲಿ ಒಂದು ದಿನದ ವಿಶೇಷ ತರಬೇತಿ ಕಾರ್ಯಾಗಾರವನ್ನು ಆಯೋಜಿಸಲಾಗಿರುವ ಕುರಿತು ಸಭೆಗೆ ಮಾಹಿತಿ ನೀಡಿದರು.

ಸಭೆಯಲ್ಲಿ ವಿವಿಧ ಜಿಲ್ಲೆಗಳ ಚುನಾಯಿತ ಜನಪ್ರತಿನಿದಿಗಳ ವ್ಯವಸ್ಥಾಪನ ಸಮಿತಿಯ ಉಸ್ತುವಾರಿಗಳು ಉಪಸ್ಥಿತರಿದ್ದರು.

ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ- ಮೈಸೂರು

SDPIKarnataka #Mysore

admin

Recent Posts

ಕಟಕ್‌ ದಂಗೆ ಆತಂಕಕಾರಿ – ನಿಷ್ಪಕ್ಷಪಾತ ತನಿಖೆ ಮತ್ತು ಆರೋಪಿಗಳ ವಿರುದ್ಧ ಕಠಿಣ ಕ್ರಮಕ್ಕೆ SDPI ಆಗ್ರಹ

ಒಡಿಶಾದ ಕಟಕ್‌ನಲ್ಲಿ ದುರ್ಗಾ ಪೂಜೆಯ ವಿಗ್ರಹ ಮೆರವಣಿಗೆ ಸಮಯದಲ್ಲಿ ಒಂದು ನಿರ್ದಿಷ್ಟ ಸಮುದಾಯವನ್ನು ಗುರಿಯಾಗಿಸಿ ಮಾಡಿದ ಹಿಂಸಾಚಾರ ಅತ್ಯಂತ ಆತಂಕಕಾರಿ…

2 days ago

ಮುಖ್ಯ ನ್ಯಾಯಮೂರ್ತಿ ಗವಾಯಿ ಮೇಲೆ ದಾಳಿ ಎಸ್.ಡಿ.ಪಿ.ಐ ಖಂಡನೆ.

ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಬಿ.ಆರ್ ಗವಾಯಿ ಅವರ ಮೇಲೆ ಶೂ ಎಸೆಯಲು ಪ್ರಯತ್ನ ಪಟ್ಟ ಘಟನೆಯನ್ನು ಸೋಶಿಯಲ್ ಡೆಮಾಕ್ರಟಿಕ್…

3 days ago

انصاف کی جیت

کے․جی․ ہلّی اور ڈی․جی․ ہلّی مقدمے میں گرفتار دو افراد کوسپریم کورٹ نے ضمانت منظور…

3 days ago

ಮಹರ್ಷಿ ವಾಲ್ಮೀಕಿ ಜಯಂತಿಯ ಶುಭಾಶಯಗಳು

ನೀವು ಜ್ಞಾನ, ಹಣ, ಪ್ರತಿಷ್ಠೆ, ಶಕ್ತಿಯನ್ನು ಸಂಗ್ರಹಿಸಬಹುದು. ಆದರೆ ಇದೆಲ್ಲದರ ನಡುವೆ ಪ್ರೀತಿಯನ್ನು ಕಳೆದುಕೊಂಡಿದ್ದರೆ ನೀವು ನಿಜವಾದ ಬದುಕನ್ನೇ ಕಳೆದುಕೊಂಡಿದ್ದೀರಿ…

3 days ago

ನ್ಯಾಯದ ಜಯ

ಕೆ.ಜಿ.ಹಳ್ಳಿ ಮತ್ತು ಡಿ.ಜೆ.ಹಳ್ಳಿ ಪ್ರಕರಣದಲ್ಲಿ ಬಂಧಿತರಾದ ಇಬ್ಬರಿಗೆ ಸರ್ವೋಚ್ಚ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ ಇದು ನ್ಯಾಯ ಮತ್ತು ಸತ್ಯದ…

3 days ago

کے۔ جے، جارج کے استعفی کا ایس ڈی پی آئی کا مطالبہ

عبد الحنان ریاستی نائب صدر - ایس۔ ڈی۔ پی۔ آئی ہے بنگلور، 5 اکتوبر: توانائی…

5 days ago