ಮೈಸೂರು, 03 ಜುಲೈ 2025: ರಾಜ್ಯ ಚುನಾವಣಾ ಉಸ್ತುವಾರಿ ಹಾಗೂ ರಾಜ್ಯ ಪ್ರಧಾನ
ಕಾರ್ಯದರ್ಶಿ ಅಫ್ಸರ್ ಕೊಡ್ಲಿಪೇಟೆ ರವರ ಮಾರ್ಗದರ್ಶನದಲ್ಲಿ ಹಾಗೂ ರಾಜ್ಯ ERM ಉಸ್ತುವಾರಿಯಾದ ಅಬ್ರಾರ್ ಅಹ್ಮದ್ ರವರ ಅಧ್ಯಕ್ಷತೆಯಲ್ಲಿ ಮೈಸೂರಿನ ಪಕ್ಷದ ಜಿಲ್ಲಾ ಕಚೇರಿಯಲ್ಲಿ ನಡೆದ ಚುನಾಯಿತ ಜನಪ್ರತಿನಿಧಿಗಳ ಮೇಲುಸ್ತುವಾರಿಗಳ (ERM) ಸಭೆಯಲ್ಲಿ ಪ್ರಾಸ್ತಾವಿಕವಾಗಿ ಮಾತನಾಡಿದ ಅಫ್ಸರ್ ಕೊಡ್ಲಿಪೇಟೆ ಅವರು “ಪಕ್ಷದ ರಾಜಕೀಯ ಶಕ್ತಿ ಬಲಪಡಿಸಲು ಮತ್ತು ಸಾರ್ವತ್ರಿಕ ಬೆಂಬಲ ಪಡೆಯಲು ಮುಂದಿನ ಸ್ಥಳೀಯ ಸಂಸ್ಥೆಗಳ ಚುನಾವಣೆಗಳು ಪ್ರಮುಖ ಹಂತವಾಗಿವೆ. ಈ ಹಿನ್ನಲೆಯಲ್ಲಿ ಚುನಾಯಿತ ಪ್ರತಿನಿಧಿಗಳಾಗಿರುವ SDPI ಪಕ್ಷದ ಹೋರಾಟಗಾರರ ಜವಾಬ್ದಾರಿ ಬಹಳ ಹೆಚ್ಚಾಗಿರುತ್ತದೆ. ರಾಜಕೀಯ ಬದ್ಧತೆ ಮತ್ತು ಕಠಿಣ ಪರಿಶ್ರಮದ ಮೂಲಕ ಈ ರಾಜಕೀಯ ಚಳುವಳಿಯನ್ನು “ಜನಾಧಿಕಾರದ ಕಡೆಗೆ” ಮುನ್ನಡೆಸುವ ಮಹತ್ವದ ಪಾತ್ರ ಚುನಾಯಿತ ಜನಪ್ರತಿನಿಧಿಗಳು ನಿಭಾಯಿಸಬೇಕಿದೆ ಎಂದು ಹಿತವಚನ ನುಡಿದರು.
ಸಭೆಯಲ್ಲಿ ಮಾತನಾಡಿದ ಅಬ್ರಾರ್ ಅಹ್ಮದ್ ಅವರು, ನಗರ ಸ್ಥಳೀಯ ಸಂಸ್ಥೆಗಳಲ್ಲಿ ಆಯ್ಕೆಯಾಗಿರುವ SDPI ಪಕ್ಷದ ಪಾಲಿಕೆ ಸದಸ್ಯರ ಹಾಗೂ ಕೌನ್ಸಿಲರ್ಗಳ ಕಾರ್ಯಕ್ಷಮತೆ ಹೆಚ್ಚಿಸುವ ಮತ್ತು ಅವಲೋಕನ ನಡೆಸುವ ನಿಟ್ಟಿನಲ್ಲಿ ಜುಲೈ 24 ರಂದು ಮೈಸೂರಿನಲ್ಲಿ ಒಂದು ದಿನದ ವಿಶೇಷ ತರಬೇತಿ ಕಾರ್ಯಾಗಾರವನ್ನು ಆಯೋಜಿಸಲಾಗಿರುವ ಕುರಿತು ಸಭೆಗೆ ಮಾಹಿತಿ ನೀಡಿದರು.
ಸಭೆಯಲ್ಲಿ ವಿವಿಧ ಜಿಲ್ಲೆಗಳ ಚುನಾಯಿತ ಜನಪ್ರತಿನಿದಿಗಳ ವ್ಯವಸ್ಥಾಪನ ಸಮಿತಿಯ ಉಸ್ತುವಾರಿಗಳು ಉಪಸ್ಥಿತರಿದ್ದರು.
ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ- ಮೈಸೂರು
DRC DISTRICT REPRESENTATIVE COUNCIL Heartly Welcome ABDUL HANNANState Vice President MAULANA AKRAMState Secretary ABDUL RAHEEM…
Wishing you a beautiful and blessed Eid. Warm Wishes on Eid ul Adha May the…
25-05-2026 | Freedom Park | Bengaluru SDPIKarnataka #Bengaluru #FreedomPark
~ಅಬ್ದುಲ್ ಮಜೀದ್,ರಾಜ್ಯಾಧ್ಯಕ್ಷರು SDPI, ಕರ್ನಾಟಕ SDPIKarnataka #CongRSS #CriminalCases
~عبد المجيد,ریاستی صدر ایس ڈی پی آئی کرناٹکhttps://www.facebook.com/share/p/1K6h82tzTJ/