Categories: featureNewsPolitics

ಎಂಸಿಸಿ ಚುನಾವಣಾ ಸಂಬಂಧಿಸಿ SDPI ಮೈಸೂರು ಜಿಲ್ಲಾ ನಾಯಕರೊಂದಿಗೆ ಚುನಾವಣೆ ಪೂರ್ವ ತಯಾರಿ ಸಭೆ

ಮೈಸೂರು, ಜುಲೈ 12: ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ಮೈಸೂರು

ಜಿಲ್ಲಾ ಕಾರ್ಯದರ್ಶಿ ಮಂಡಳಿ ಹಾಗೂ ವಿಧಾನಸಭಾ ಕ್ಷೇತ್ರದ ನಾಯಕರ ವಿಶೇಷ ಸಭೆ ಇಂದು ಮೈಸೂರಿನಲ್ಲಿ ಜರುಗಿತು. ಸಭೆಗೆ ಜಿಲ್ಲಾಧ್ಯಕ್ಷ ರಫತ್ ಖಾನ್ ಅವರು ಅಧ್ಯಕ್ಷತೆ ವಹಿಸಿದ್ದರು. ರಾಜ್ಯ ಉಪಾಧ್ಯಕ್ಷ ಹಾಗೂ ಎಂಸಿಸಿ ಚುನಾವಣೆ ಉಸ್ತುವಾರಿ ಅಬ್ದುಲ್ ಹನ್ನಾನ್, ರಾಜ್ಯ ಪ್ರಧಾನ ಕಾರ್ಯದರ್ಶಿ ಹಾಗೂ ಚುನಾವಣೆ ಉಸ್ತುವಾರಿ ಅಪ್ಪರ್ ಕೊಡ್ಲಿಪೇಟೆ, ರಾಜ್ಯ ಕಾರ್ಯದರ್ಶಿಗಳಾದ ಅಪ್ಸರ್ (ಕೆ.ಆರ್.ನಗರ) ಮತ್ತು ಅಕ್ರಮ್ ಮೌಲಾನಾ, ರಾಜ್ಯ ಸಮಿತಿ ಸದಸ್ಯ ಅಬ್ರಾರ್ ಅಹ್ಮದ್ ಅವರುಗಳು ಸಭೆಯಲ್ಲಿ ಭಾಗವಹಿಸಿದ್ದರು. ಈ ಸಭೆಯಲ್ಲಿ ಜಿಲ್ಲಾ, ವಿಧಾನಸಭಾ ಹಾಗೂ ಬೂತ್ ಮಟ್ಟದ ಪ್ರಮುಖ ಪದಾಧಿಕಾರಿಗಳು ಭಾಗವಹಿಸಿ ಮುಂಬರುವ ಜಿಲ್ಲಾ ಪಂಚಾಯತ್, ತಾಲ್ಲೂಕು ಪಂಚಾಯತ್ ಹಾಗೂ ವಿಶೇಷವಾಗಿ ಮೈಸೂರು ಎಂಸಿಸಿ ಚುನಾವಣೆಗಳ ಪೂರ್ವ ತಯಾರಿಗಳ ಕುರಿತು ಚರ್ಚೆ ನಡೆಸಿದರು.

ಸಭೆಯಲ್ಲಿ ಸಂಘಟನಾ ಸ್ಥಿತಿಗತಿ, ಬೂತ್ ಹಾಗೂ ವಾರ್ಡ್ ಮಟ್ಟದ ಕಾರ್ಯಯೋಜನೆ, ಸಮಿತಿಗಳ ವರದಿಗಳು ಹಾಗೂ ಜವಾಬ್ದಾರಿಗಳ ಹಂಚಿಕೆ ಕುರಿತು ವಿಶ್ಲೇಷಣೆ ನಡೆಯಿತು. ರಾಜ್ಯ ಉಪಾಧ್ಯಕ್ಷ ಅಬ್ದುಲ್ ಹನ್ನಾನ್ ಅವರು ಮಾತನಾಡುತ್ತಾ, “ ಸ್ಥಳೀಯ ಸಂಸ್ಥೆ ಚುನಾವಣೆಗಳ ವಿಳಂಬ ಮತ್ತು ಆಡಳಿತದ ನಿರ್ಲಕ್ಷ್ಯಕ್ಕೆ ನಾವು ಬಲಿಷ್ಠ ಉತ್ತರ ನೀಡಬೇಕು,” ಎಂದರು. ಅಪ್ಪರ್ ಕೊಡ್ಲಿಪೇಟೆ, ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಹಾಗೂ ಚುನಾವಣಾ ಉಸ್ತುವಾರಿ, “ಬೂತ್ ಮಟ್ಟದಲ್ಲಿ ಸಂಘಟನೆ ಬಲವರ್ಧನೆ SDPIಗೆ ಪ್ರಮುಖ ಆಯಾಮ. ಪ್ರತಿ ಕಾರ್ಯಕರ್ತನು ‘ಬೂತ್ ಗೆಲುವು ನನ್ನ ನಿಲುವು’ ಎಂಬ ಘೋಷಣೆಯಡಿ ನಿರಂತರ ಶ್ರಮಿಸಬೇಕು” ಎಂದು ಕಿವಿಮಾತು ಹೇಳಿದರು. ಸಭೆಯ ಅಂತಿಮದಲ್ಲಿ ಜಿಲ್ಲೆಯ ವಿವಿಧ ವಿಧಾನಸಭಾ ಕ್ಷೇತ್ರಗಳ ಪ್ರತಿನಿಧಿಗಳು ತಮ್ಮ ತಮ್ಮ ಕ್ಷೇತ್ರದ ಸಂಘಟನೆ ಬಲವರ್ಧನೆಗಾಗಿ ತಂತ್ರಮೂಲಕ ಪ್ರಸ್ತಾವನೆಗಳನ್ನು ಮಂಡಿಸಿದರು. ಕ್ಷೇತ್ರವಾರು ತಂತ್ರ ಹಾಗೂ ಮುಂದಿನ ಹಂತದ ಚಟುವಟಿಕೆಗಳಿಗೆ ತೀರ್ಮಾನ ಕೈಗೊಳ್ಳಲಾಯಿತು. ಜಿಲ್ಲಾ ಪ್ರಧಾನ ಕಾರ್ಯದರ್ಶಿ ಫಿರ್ದೋಸ್, ಹಾಗೂ ಮುಖ್ಯ ನಾಯಕರು ಈ ಸಭೆಯಲ್ಲಿ ಉಪಸ್ಥಿತರಿದ್ದರು.

ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ-ಕರ್ನಾಟಕ

SDPIKarnataka #Mysore #MCC

admin

Recent Posts

ಬಾಗಲಕೋಟೆ ಜಿಲ್ಲೆಯ ಮುಧೋಳ ನಗರಕ್ಕೆ SDPI ಕರ್ನಾಟಕ ಮುಖಂಡರ ಭೇಟಿ

ಬಾಗಲಕೋಟೆ ಜಿಲ್ಲೆ ಮುಧೋಳ ನಗರಕ್ಕೆ ರಾಜ್ಯಾಧ್ಯಕ್ಷರಾದ ಅಬ್ದುಲ್ ಮಜೀದ್‌ ಮೈಸೂರು, ರಾಜ್ಯ ಪ್ರಧಾನ ಕಾರ್ಯದರ್ಶಿ ಮುಜಾಹಿದ್ ಪಾಷಾ, ರಾಜ್ಯ ಕಾರ್ಯದರ್ಶಿಗಳಾದ…

2 days ago

ನ್ಯಾಯವ್ಯವಸ್ಥೆಯ ಮೇಲೆ ಆಕ್ರಮಣ: ಎಸ್‌ಜಿ ತುಷಾರ್ ಮೆಹ್ತಾ ಅವರ ಹೇಳಿಕೆಗೆ ಬಿಎಂ ಕಾಂಬ್ಳೆ ಖಡಕ್ ಪ್ರತಿಕ್ರಿಯೆ

2025ರ ಜುಲೈ 9ರಂದು 2020ರ ದೆಹಲಿ ಹಿಂಸಾಚಾರದ "ವಿಸ್ತೃತ ಸೂತ್ರಧಾರೆ" ಪ್ರಕರಣದ ವಿಚಾರಣೆಯಲ್ಲಿ, ದೆಹಲಿ ಹೈಕೋರ್ಟ್‌ ಎದುರು ಕೇಂದ್ರ ಸರಕಾರದ…

2 days ago

ಪತ್ರಿಕಾ ವರದಿ (Newspaper Coverage):

ಪತ್ರಿಕಾ ವರದಿ (Newspaper Coverage): ಗಂಗಾವತಿ, ಜುಲೈ 8:ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ಪಕ್ಷದ ಜಿಲ್ಲಾಸಮಿತಿಯ ವಿಶೇಷ…

4 days ago

ಪತ್ರಿಕಾ ಪ್ರಕಟಣೆ<br><br>ಚುನಾವಣಾ ಪೂರ್ವ ತಯಾರಿಗಳ ಬಗ್ಗೆ ಕೊಪ್ಪಳ ಜಿಲ್ಲಾ ಮತ್ತು ವಿಧಾನಸಭಾ ನಾಯಕರ ವಿಶೇಷ ಸಭೆ*<br><br>ಗಂಗಾವತಿ:ಜುಲೈ 8:<br> ಸೋಷಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ ಪಕ್ಷದ ಜಿಲ್ಲಾ ಸಮಿತಿಯ ವಿಶೇಷ ಸಭೆಯು ಜಿಲ್ಲಾಧ್ಯಕ್ಷರಾದ ಸಲೀಂ ಮನಿಯಾರ್ ರವರ ಅಧ್ಯಕ್ಷತೆಯಲ್ಲಿ ರಾಜ್ಯ ಉಪಾಧ್ಯಕ್ಷರು ಹಾಗೂ ಜಿಲ್ಲಾ ಉಸ್ತುವಾರಿ ಅಬ್ದುಲ್ ಹನ್ನಾನ್, ರಾಜ್ಯ ಪ್ರಧಾನ ಕಾರ್ಯದರ್ಶಿ ಮತ್ತು ಚುನಾವಣೆ ಉಸ್ತುವಾರಿ ಅಫ್ಸರ್ ಕೊಡ್ಲಿಪೇಟೆ, ರಾಜ್ಯ ಖಜಾಂಚಿ ಅಮ್ಜದ್ ಖಾನ್ ರವರ ಸಮ್ಮುಖದಲ್ಲಿ ನಡೆಯಿತು. <br><br>ಜಿಲ್ಲಾ, ವಿಧಾನಸಭಾ ಮತ್ತು ವಿವಿಧ ಹಂತದ ಪದಾಧಿಕಾರಿಗಳು, ಪ್ರತಿನಿಧಿಗಳು ಹಾಗೂ ನಾಯಕರು ಮುಂಬರಲಿರುವ ಜಿಲ್ಲಾ ಪಂಚಾಯಿತಿ ತಾಲ್ಲೂಕು ಪಂಚಾಯಿತಿ ಮತ್ತು ಸ್ಥಳೀಯಾಡಳಿತ ಸಂಸ್ಥೆಗಳ ಚುನಾವಣೆಗಳ ಪೂರ್ವ ತಯಾರಿಗಳ ಬಗ್ಗೆ, ವಾರ್ಡ್ ಹಾಗೂ ಬೂತ್ ಮಟ್ಟದ ಸಂಘಟನಾ ಸ್ಥಿತಿಗತಿಯ ಕುರಿತು ವಿಶ್ಲೇಷಣೆ, ಕಾರ್ಯತಂತ್ರಗಳ ವಿವಿಧ ಸಮಿತಿಗಳ ವರದಿಗಳು ಹಾಗೂ ಜವಾಬ್ದಾರಿಗಳ ಹಂಚಿಕೆ ಬಗ್ಗೆ ಚರ್ಚೆಯಲ್ಲಿ ಪಾಲ್ಗೊಂಡಿದ್ದರು. <br><br>ಸಭೆಯನ್ನುದ್ದೇಶಿಸಿ ಮಾತನಾಡಿದ ರಾಜ್ಯ ಉಪಾಧ್ಯಕ್ಷ ಅಬ್ದುಲ್ ಹನ್ನಾನ್, “ಪ್ರತಿಯೊಬ್ಬನೂ ಚುನಾವಣಾ ಕಾರ್ಯಗಳತ್ತ ಹೆಚ್ಚು ಕಾಳಜಿಯಿಂದ ನಿರತರಾಗಬೇಕು. ಪ್ರಜಾಪ್ರಭುತ್ವದ ಮೌಲ್ಯಗಳನ್ನು ಕಾಪಾಡುವುದು ನಮ್ಮ ಮೇಲೆ ಇರುವ ಪ್ರಮುಖ ಜವಾಬ್ದಾರಿ. ಸ್ಥಳೀಯ ಸಂಸ್ಥೆ ಚುನಾವಣೆಯ ವಿಳಂಬವು ಮತ್ತು ಸರ್ಕಾರದ ನಿರ್ಲಕ್ಷ್ಯವೂ ಪ್ರಜಾಪ್ರಭುತ್ವದ ಅಪಮಾನ” ಎಂದು ಅಭಿಪ್ರಾಯಪಟ್ಟರು .<br> ರಾಜ್ಯ ಪ್ರಧಾನ ಕಾರ್ಯದರ್ಶಿ ಹಾಗೂ ಚುನಾವಣೆ ಉಸ್ತುವಾರಿ ಅಫ್ಸರ್ ಕೊಡ್ಲಿಪೇಟೆ, “ಪಕ್ಷವನ್ನು ಬೂತ್ ಮಟ್ಟದ ಬಲಗೊಳಿಸುವುದು ಅವಶ್ಯಕ. ಪ್ರತಿಯೊಬ್ಬ ಕಾರ್ಯಕರ್ತನು ‘ಬೂತ್ ಗೆಲುವು ನನ್ನ ನಿಲುವು’ ಎಂಬ ಘೋಷವಾಕ್ಯದಡಿಯಲ್ಲಿ ತಕ್ಕ ರೀತಿಯಲ್ಲಿ ಕೆಲಸ ಮಾಡಬೇಕು” ಎಂದು ಕರೆ ನೀಡಿದರು.<br><br>ಸಭೆಯ ಅಂತಿಮ ಭಾಗದಲ್ಲಿ ಜಿಲ್ಲೆಯ ಎಲ್ಲಾ ವಿಧಾನಸಭಾ ಕ್ಷೇತ್ರಗಳ ನಾಯಕರು ತಮ್ಮ ಕ್ಷೇತ್ರದ ಸಂಘಟನೆ ಬಲವರ್ಧನೆಗಾಗಿ ತಂತ್ರಮೂಲಕ ಪ್ರಸ್ತಾವನೆಗಳನ್ನು ಮಂಡಿಸಿದರು. ಕ್ಷೇತ್ರವಾರು ಕಾರ್ಯತಂತ್ರ, ಯೋಜಿತ ಚಟುವಟಿಕೆಗಳ ಬಗ್ಗೆ ಆಳವಾದ ಚರ್ಚೆ ನಡೆಸಿ, ಮುಂದಿನ ಹಂತದ ಕಾರ್ಯತೀರ್ಮಾನಗಳನ್ನು ಕೈಗೊಳ್ಳಲಾಯಿತು. <br>ಸಭೆಯಲ್ಲಿ ಜಿಲ್ಲಾ ಉಪಾಧ್ಯಕ್ಷರಾದ ಯೂಸುಫ್ ಮೋದಿ, ಜಿಲ್ಲಾ ಪ್ರದಾನ ಕಾರ್ಯದರ್ಶಿ ಸೈಯದ್ ಶಾಕೀಬ್, ಜಿಲ್ಲಾ ಕಾರ್ಯದರ್ಶಿ ಚಾಂದ್, ಜಿಲ್ಲಾ ಕೋಶಾಧಿಕಾರಿ ಮಹೇಬೂಬ್ ರಜಾ, ಗಂಗಾವತಿ ವಿಧಾನ ಸಭಾ ಅಧ್ಯಕ್ಷರು ಇರ್ಫಾನ್, ಕೊಪ್ಪಳ ವಿಧಾನಸಭಾ ಅಧ್ಯಕ್ಷರು ಸಲೀಮ್ ಖಾದ್ರಿ, ಕನಕಗಿರಿ ವಿಧಾನಸಭಾ ಅಧ್ಯಕ್ಷರು ಅಜ್ಮಿರ್ ಸಿಂಗನಾಳ್,ಕುಷ್ಟಗಿ ವಿಧಾನಸಭಾ ಉಪಾಧ್ಯಕ್ಷರು ಸಲೀಮ್ ಕೆ ಬಿ, ಸಿಂದನೂರ್ ವಿಧಾನಸಭಾ ಅಧ್ಯಕ್ಷರು ಆಸೀಫ್ ಕೆ, ಕಂಪ್ಲಿ ವಿಧಾನಸಭಾ ಅಧ್ಯಕ್ಷರು ಇಮ್ರಾನ್<br> ಉಪಸ್ಥಿತರಿದ್ದರು.

4 days ago