ಮೈಸೂರು, ಜುಲೈ 12: ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ಮೈಸೂರು
ಜಿಲ್ಲಾ ಕಾರ್ಯದರ್ಶಿ ಮಂಡಳಿ ಹಾಗೂ ವಿಧಾನಸಭಾ ಕ್ಷೇತ್ರದ ನಾಯಕರ ವಿಶೇಷ ಸಭೆ ಇಂದು ಮೈಸೂರಿನಲ್ಲಿ ಜರುಗಿತು. ಸಭೆಗೆ ಜಿಲ್ಲಾಧ್ಯಕ್ಷ ರಫತ್ ಖಾನ್ ಅವರು ಅಧ್ಯಕ್ಷತೆ ವಹಿಸಿದ್ದರು. ರಾಜ್ಯ ಉಪಾಧ್ಯಕ್ಷ ಹಾಗೂ ಎಂಸಿಸಿ ಚುನಾವಣೆ ಉಸ್ತುವಾರಿ ಅಬ್ದುಲ್ ಹನ್ನಾನ್, ರಾಜ್ಯ ಪ್ರಧಾನ ಕಾರ್ಯದರ್ಶಿ ಹಾಗೂ ಚುನಾವಣೆ ಉಸ್ತುವಾರಿ ಅಪ್ಪರ್ ಕೊಡ್ಲಿಪೇಟೆ, ರಾಜ್ಯ ಕಾರ್ಯದರ್ಶಿಗಳಾದ ಅಪ್ಸರ್ (ಕೆ.ಆರ್.ನಗರ) ಮತ್ತು ಅಕ್ರಮ್ ಮೌಲಾನಾ, ರಾಜ್ಯ ಸಮಿತಿ ಸದಸ್ಯ ಅಬ್ರಾರ್ ಅಹ್ಮದ್ ಅವರುಗಳು ಸಭೆಯಲ್ಲಿ ಭಾಗವಹಿಸಿದ್ದರು. ಈ ಸಭೆಯಲ್ಲಿ ಜಿಲ್ಲಾ, ವಿಧಾನಸಭಾ ಹಾಗೂ ಬೂತ್ ಮಟ್ಟದ ಪ್ರಮುಖ ಪದಾಧಿಕಾರಿಗಳು ಭಾಗವಹಿಸಿ ಮುಂಬರುವ ಜಿಲ್ಲಾ ಪಂಚಾಯತ್, ತಾಲ್ಲೂಕು ಪಂಚಾಯತ್ ಹಾಗೂ ವಿಶೇಷವಾಗಿ ಮೈಸೂರು ಎಂಸಿಸಿ ಚುನಾವಣೆಗಳ ಪೂರ್ವ ತಯಾರಿಗಳ ಕುರಿತು ಚರ್ಚೆ ನಡೆಸಿದರು.
ಸಭೆಯಲ್ಲಿ ಸಂಘಟನಾ ಸ್ಥಿತಿಗತಿ, ಬೂತ್ ಹಾಗೂ ವಾರ್ಡ್ ಮಟ್ಟದ ಕಾರ್ಯಯೋಜನೆ, ಸಮಿತಿಗಳ ವರದಿಗಳು ಹಾಗೂ ಜವಾಬ್ದಾರಿಗಳ ಹಂಚಿಕೆ ಕುರಿತು ವಿಶ್ಲೇಷಣೆ ನಡೆಯಿತು. ರಾಜ್ಯ ಉಪಾಧ್ಯಕ್ಷ ಅಬ್ದುಲ್ ಹನ್ನಾನ್ ಅವರು ಮಾತನಾಡುತ್ತಾ, “ ಸ್ಥಳೀಯ ಸಂಸ್ಥೆ ಚುನಾವಣೆಗಳ ವಿಳಂಬ ಮತ್ತು ಆಡಳಿತದ ನಿರ್ಲಕ್ಷ್ಯಕ್ಕೆ ನಾವು ಬಲಿಷ್ಠ ಉತ್ತರ ನೀಡಬೇಕು,” ಎಂದರು. ಅಪ್ಪರ್ ಕೊಡ್ಲಿಪೇಟೆ, ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಹಾಗೂ ಚುನಾವಣಾ ಉಸ್ತುವಾರಿ, “ಬೂತ್ ಮಟ್ಟದಲ್ಲಿ ಸಂಘಟನೆ ಬಲವರ್ಧನೆ SDPIಗೆ ಪ್ರಮುಖ ಆಯಾಮ. ಪ್ರತಿ ಕಾರ್ಯಕರ್ತನು ‘ಬೂತ್ ಗೆಲುವು ನನ್ನ ನಿಲುವು’ ಎಂಬ ಘೋಷಣೆಯಡಿ ನಿರಂತರ ಶ್ರಮಿಸಬೇಕು” ಎಂದು ಕಿವಿಮಾತು ಹೇಳಿದರು. ಸಭೆಯ ಅಂತಿಮದಲ್ಲಿ ಜಿಲ್ಲೆಯ ವಿವಿಧ ವಿಧಾನಸಭಾ ಕ್ಷೇತ್ರಗಳ ಪ್ರತಿನಿಧಿಗಳು ತಮ್ಮ ತಮ್ಮ ಕ್ಷೇತ್ರದ ಸಂಘಟನೆ ಬಲವರ್ಧನೆಗಾಗಿ ತಂತ್ರಮೂಲಕ ಪ್ರಸ್ತಾವನೆಗಳನ್ನು ಮಂಡಿಸಿದರು. ಕ್ಷೇತ್ರವಾರು ತಂತ್ರ ಹಾಗೂ ಮುಂದಿನ ಹಂತದ ಚಟುವಟಿಕೆಗಳಿಗೆ ತೀರ್ಮಾನ ಕೈಗೊಳ್ಳಲಾಯಿತು. ಜಿಲ್ಲಾ ಪ್ರಧಾನ ಕಾರ್ಯದರ್ಶಿ ಫಿರ್ದೋಸ್, ಹಾಗೂ ಮುಖ್ಯ ನಾಯಕರು ಈ ಸಭೆಯಲ್ಲಿ ಉಪಸ್ಥಿತರಿದ್ದರು.
ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ-ಕರ್ನಾಟಕ
ಅಭಿನಂದನಾ ರ್ಯಾಲಿ ಮತ್ತು ಸಮಾವೇಶ 21 ಜನವರಿ 2026 ರ್ಯಾಲಿ: ಸಂಜೆ 04:00 | ಅಂಬೇಡ್ಕರ್ (ಜ್ಯೋತಿ) ವೃತ್ತದಿಂದ ಪುರಭವನದ…
SIR ಮೂಲಕ ಮತದಾನದ ಹಕ್ಕನ್ನು ಕಸಿದುಕೊಳ್ಳುವ ಪ್ರಯತ್ನ ನಡೆಯುತ್ತಿದೆ - ಅಬ್ರಾರ್ 12.01.2026 ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನಲ್ಲಿ ಸೋಶಿಯಲ್…
ಈ ನಾಡು ಕಂಡ ಖ್ಯಾತ ಇಸ್ಲಾಮಿಕ್ ವಿದ್ವಾಂಸ, ಕರ್ನಾಟಕ ಅಮೀರೆ ಶರೀಯತ್ ಮತ್ತು ಸಬಿವುಲ್ ರಷಾದ್ ಅರೇಬಿಕ್ ಕಾಲೇಜು, ನಾಗವಾರ…
The passing away of Ameer-e-Shariat of Karnataka, the respected religious and social leader Maulana Sageer…
امیر شریعت کرناٹک، معروف دینی و سماجی رہنما مولانا صغیر احمد صاحب کے بنگلورو میں…
Deeply saddened by the passing of Ameer-e-Shariat Maulana Sageer Ahmed Sahib Principal of Sabee-ul-Rashad Arabic…