Categories: featureNewsPolitics

ಎಂಸಿಸಿ ಚುನಾವಣಾ ಸಂಬಂಧಿಸಿ SDPI ಮೈಸೂರು ಜಿಲ್ಲಾ ನಾಯಕರೊಂದಿಗೆ ಚುನಾವಣೆ ಪೂರ್ವ ತಯಾರಿ ಸಭೆ

ಮೈಸೂರು, ಜುಲೈ 12: ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ಮೈಸೂರು

ಜಿಲ್ಲಾ ಕಾರ್ಯದರ್ಶಿ ಮಂಡಳಿ ಹಾಗೂ ವಿಧಾನಸಭಾ ಕ್ಷೇತ್ರದ ನಾಯಕರ ವಿಶೇಷ ಸಭೆ ಇಂದು ಮೈಸೂರಿನಲ್ಲಿ ಜರುಗಿತು. ಸಭೆಗೆ ಜಿಲ್ಲಾಧ್ಯಕ್ಷ ರಫತ್ ಖಾನ್ ಅವರು ಅಧ್ಯಕ್ಷತೆ ವಹಿಸಿದ್ದರು. ರಾಜ್ಯ ಉಪಾಧ್ಯಕ್ಷ ಹಾಗೂ ಎಂಸಿಸಿ ಚುನಾವಣೆ ಉಸ್ತುವಾರಿ ಅಬ್ದುಲ್ ಹನ್ನಾನ್, ರಾಜ್ಯ ಪ್ರಧಾನ ಕಾರ್ಯದರ್ಶಿ ಹಾಗೂ ಚುನಾವಣೆ ಉಸ್ತುವಾರಿ ಅಪ್ಪರ್ ಕೊಡ್ಲಿಪೇಟೆ, ರಾಜ್ಯ ಕಾರ್ಯದರ್ಶಿಗಳಾದ ಅಪ್ಸರ್ (ಕೆ.ಆರ್.ನಗರ) ಮತ್ತು ಅಕ್ರಮ್ ಮೌಲಾನಾ, ರಾಜ್ಯ ಸಮಿತಿ ಸದಸ್ಯ ಅಬ್ರಾರ್ ಅಹ್ಮದ್ ಅವರುಗಳು ಸಭೆಯಲ್ಲಿ ಭಾಗವಹಿಸಿದ್ದರು. ಈ ಸಭೆಯಲ್ಲಿ ಜಿಲ್ಲಾ, ವಿಧಾನಸಭಾ ಹಾಗೂ ಬೂತ್ ಮಟ್ಟದ ಪ್ರಮುಖ ಪದಾಧಿಕಾರಿಗಳು ಭಾಗವಹಿಸಿ ಮುಂಬರುವ ಜಿಲ್ಲಾ ಪಂಚಾಯತ್, ತಾಲ್ಲೂಕು ಪಂಚಾಯತ್ ಹಾಗೂ ವಿಶೇಷವಾಗಿ ಮೈಸೂರು ಎಂಸಿಸಿ ಚುನಾವಣೆಗಳ ಪೂರ್ವ ತಯಾರಿಗಳ ಕುರಿತು ಚರ್ಚೆ ನಡೆಸಿದರು.

ಸಭೆಯಲ್ಲಿ ಸಂಘಟನಾ ಸ್ಥಿತಿಗತಿ, ಬೂತ್ ಹಾಗೂ ವಾರ್ಡ್ ಮಟ್ಟದ ಕಾರ್ಯಯೋಜನೆ, ಸಮಿತಿಗಳ ವರದಿಗಳು ಹಾಗೂ ಜವಾಬ್ದಾರಿಗಳ ಹಂಚಿಕೆ ಕುರಿತು ವಿಶ್ಲೇಷಣೆ ನಡೆಯಿತು. ರಾಜ್ಯ ಉಪಾಧ್ಯಕ್ಷ ಅಬ್ದುಲ್ ಹನ್ನಾನ್ ಅವರು ಮಾತನಾಡುತ್ತಾ, “ ಸ್ಥಳೀಯ ಸಂಸ್ಥೆ ಚುನಾವಣೆಗಳ ವಿಳಂಬ ಮತ್ತು ಆಡಳಿತದ ನಿರ್ಲಕ್ಷ್ಯಕ್ಕೆ ನಾವು ಬಲಿಷ್ಠ ಉತ್ತರ ನೀಡಬೇಕು,” ಎಂದರು. ಅಪ್ಪರ್ ಕೊಡ್ಲಿಪೇಟೆ, ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಹಾಗೂ ಚುನಾವಣಾ ಉಸ್ತುವಾರಿ, “ಬೂತ್ ಮಟ್ಟದಲ್ಲಿ ಸಂಘಟನೆ ಬಲವರ್ಧನೆ SDPIಗೆ ಪ್ರಮುಖ ಆಯಾಮ. ಪ್ರತಿ ಕಾರ್ಯಕರ್ತನು ‘ಬೂತ್ ಗೆಲುವು ನನ್ನ ನಿಲುವು’ ಎಂಬ ಘೋಷಣೆಯಡಿ ನಿರಂತರ ಶ್ರಮಿಸಬೇಕು” ಎಂದು ಕಿವಿಮಾತು ಹೇಳಿದರು. ಸಭೆಯ ಅಂತಿಮದಲ್ಲಿ ಜಿಲ್ಲೆಯ ವಿವಿಧ ವಿಧಾನಸಭಾ ಕ್ಷೇತ್ರಗಳ ಪ್ರತಿನಿಧಿಗಳು ತಮ್ಮ ತಮ್ಮ ಕ್ಷೇತ್ರದ ಸಂಘಟನೆ ಬಲವರ್ಧನೆಗಾಗಿ ತಂತ್ರಮೂಲಕ ಪ್ರಸ್ತಾವನೆಗಳನ್ನು ಮಂಡಿಸಿದರು. ಕ್ಷೇತ್ರವಾರು ತಂತ್ರ ಹಾಗೂ ಮುಂದಿನ ಹಂತದ ಚಟುವಟಿಕೆಗಳಿಗೆ ತೀರ್ಮಾನ ಕೈಗೊಳ್ಳಲಾಯಿತು. ಜಿಲ್ಲಾ ಪ್ರಧಾನ ಕಾರ್ಯದರ್ಶಿ ಫಿರ್ದೋಸ್, ಹಾಗೂ ಮುಖ್ಯ ನಾಯಕರು ಈ ಸಭೆಯಲ್ಲಿ ಉಪಸ್ಥಿತರಿದ್ದರು.

ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ-ಕರ್ನಾಟಕ

SDPIKarnataka #Mysore #MCC

admin

Recent Posts

ಪತ್ರಿಕಾ ಪ್ರಕಟಣೆ

ಪೆರಿಯಾರ್ ಅವರ ಹೋರಾಟ ಮಾನವ ಘನತೆ, ಸಮಾನತೆ ಮತ್ತು ಸ್ವಾಭಿಮಾನದ ಪ್ರತೀಕ: ಅಪ್ಸರ್ ಕೊಡ್ಲಿಪೇಟೆ ಆನೇಕಲ್:ಸೆ. 17:ಸಾಮಾಜಿಕ ನ್ಯಾಯ, ಸಮಾನತೆ,…

2 days ago

ಫ್ಯಾಶಿಷ್ಟರು ಗೌರಿ ಲಂಕೇಶ್‌ ಅವರನ್ನು ಗುಂಡಿಕ್ಕಿ ಕೊಂದ ದಿನ.

5 ಸೆಪ್ಟೆಂಬರ್ 2017 ನಾವು ಮರೆಯುವುದಿಲ್ಲ SDPIKarnataka #GowriLankesh

2 weeks ago

Will fight for every citizen of this country

Prakash Raj, Abdul Majeed SDPI and several others detained by Bengaluru Police During Election Commission…

2 weeks ago

ಪ್ರೆಸ್ ರಿಲೀಸ್

ಜೈಪುರದಲ್ಲಿ ಸರ್ಕಾರಿ ಶಾಲಾ ತಪಾಸಣೆಗೆ ತೆರಳಿದ್ದ ತಂಡದ ಮೇಲೆ ದಾಳಿ ಖಂಡನೀಯ: ನ್ಯಾಯಾಂಗ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ…

4 weeks ago