ಮೈಸೂರು, ಜುಲೈ 12: ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ಮೈಸೂರು
ಜಿಲ್ಲಾ ಕಾರ್ಯದರ್ಶಿ ಮಂಡಳಿ ಹಾಗೂ ವಿಧಾನಸಭಾ ಕ್ಷೇತ್ರದ ನಾಯಕರ ವಿಶೇಷ ಸಭೆ ಇಂದು ಮೈಸೂರಿನಲ್ಲಿ ಜರುಗಿತು. ಸಭೆಗೆ ಜಿಲ್ಲಾಧ್ಯಕ್ಷ ರಫತ್ ಖಾನ್ ಅವರು ಅಧ್ಯಕ್ಷತೆ ವಹಿಸಿದ್ದರು. ರಾಜ್ಯ ಉಪಾಧ್ಯಕ್ಷ ಹಾಗೂ ಎಂಸಿಸಿ ಚುನಾವಣೆ ಉಸ್ತುವಾರಿ ಅಬ್ದುಲ್ ಹನ್ನಾನ್, ರಾಜ್ಯ ಪ್ರಧಾನ ಕಾರ್ಯದರ್ಶಿ ಹಾಗೂ ಚುನಾವಣೆ ಉಸ್ತುವಾರಿ ಅಪ್ಪರ್ ಕೊಡ್ಲಿಪೇಟೆ, ರಾಜ್ಯ ಕಾರ್ಯದರ್ಶಿಗಳಾದ ಅಪ್ಸರ್ (ಕೆ.ಆರ್.ನಗರ) ಮತ್ತು ಅಕ್ರಮ್ ಮೌಲಾನಾ, ರಾಜ್ಯ ಸಮಿತಿ ಸದಸ್ಯ ಅಬ್ರಾರ್ ಅಹ್ಮದ್ ಅವರುಗಳು ಸಭೆಯಲ್ಲಿ ಭಾಗವಹಿಸಿದ್ದರು. ಈ ಸಭೆಯಲ್ಲಿ ಜಿಲ್ಲಾ, ವಿಧಾನಸಭಾ ಹಾಗೂ ಬೂತ್ ಮಟ್ಟದ ಪ್ರಮುಖ ಪದಾಧಿಕಾರಿಗಳು ಭಾಗವಹಿಸಿ ಮುಂಬರುವ ಜಿಲ್ಲಾ ಪಂಚಾಯತ್, ತಾಲ್ಲೂಕು ಪಂಚಾಯತ್ ಹಾಗೂ ವಿಶೇಷವಾಗಿ ಮೈಸೂರು ಎಂಸಿಸಿ ಚುನಾವಣೆಗಳ ಪೂರ್ವ ತಯಾರಿಗಳ ಕುರಿತು ಚರ್ಚೆ ನಡೆಸಿದರು.
ಸಭೆಯಲ್ಲಿ ಸಂಘಟನಾ ಸ್ಥಿತಿಗತಿ, ಬೂತ್ ಹಾಗೂ ವಾರ್ಡ್ ಮಟ್ಟದ ಕಾರ್ಯಯೋಜನೆ, ಸಮಿತಿಗಳ ವರದಿಗಳು ಹಾಗೂ ಜವಾಬ್ದಾರಿಗಳ ಹಂಚಿಕೆ ಕುರಿತು ವಿಶ್ಲೇಷಣೆ ನಡೆಯಿತು. ರಾಜ್ಯ ಉಪಾಧ್ಯಕ್ಷ ಅಬ್ದುಲ್ ಹನ್ನಾನ್ ಅವರು ಮಾತನಾಡುತ್ತಾ, “ ಸ್ಥಳೀಯ ಸಂಸ್ಥೆ ಚುನಾವಣೆಗಳ ವಿಳಂಬ ಮತ್ತು ಆಡಳಿತದ ನಿರ್ಲಕ್ಷ್ಯಕ್ಕೆ ನಾವು ಬಲಿಷ್ಠ ಉತ್ತರ ನೀಡಬೇಕು,” ಎಂದರು. ಅಪ್ಪರ್ ಕೊಡ್ಲಿಪೇಟೆ, ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಹಾಗೂ ಚುನಾವಣಾ ಉಸ್ತುವಾರಿ, “ಬೂತ್ ಮಟ್ಟದಲ್ಲಿ ಸಂಘಟನೆ ಬಲವರ್ಧನೆ SDPIಗೆ ಪ್ರಮುಖ ಆಯಾಮ. ಪ್ರತಿ ಕಾರ್ಯಕರ್ತನು ‘ಬೂತ್ ಗೆಲುವು ನನ್ನ ನಿಲುವು’ ಎಂಬ ಘೋಷಣೆಯಡಿ ನಿರಂತರ ಶ್ರಮಿಸಬೇಕು” ಎಂದು ಕಿವಿಮಾತು ಹೇಳಿದರು. ಸಭೆಯ ಅಂತಿಮದಲ್ಲಿ ಜಿಲ್ಲೆಯ ವಿವಿಧ ವಿಧಾನಸಭಾ ಕ್ಷೇತ್ರಗಳ ಪ್ರತಿನಿಧಿಗಳು ತಮ್ಮ ತಮ್ಮ ಕ್ಷೇತ್ರದ ಸಂಘಟನೆ ಬಲವರ್ಧನೆಗಾಗಿ ತಂತ್ರಮೂಲಕ ಪ್ರಸ್ತಾವನೆಗಳನ್ನು ಮಂಡಿಸಿದರು. ಕ್ಷೇತ್ರವಾರು ತಂತ್ರ ಹಾಗೂ ಮುಂದಿನ ಹಂತದ ಚಟುವಟಿಕೆಗಳಿಗೆ ತೀರ್ಮಾನ ಕೈಗೊಳ್ಳಲಾಯಿತು. ಜಿಲ್ಲಾ ಪ್ರಧಾನ ಕಾರ್ಯದರ್ಶಿ ಫಿರ್ದೋಸ್, ಹಾಗೂ ಮುಖ್ಯ ನಾಯಕರು ಈ ಸಭೆಯಲ್ಲಿ ಉಪಸ್ಥಿತರಿದ್ದರು.
ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ-ಕರ್ನಾಟಕ
ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು, ಹಣದ ಬಲ ಮತ್ತು ರಾಜ್ಯ ಯಂತ್ರಾಂಗದ ಬಹಿರಂಗ ದುರುಪಯೋಗದ ಮೂಲಕ ಪಡೆದ…
ಹುತಾತ್ಮ ದಿನ 04 ಮೇ "ನೂರು ವರ್ಷ ನರಿಯಾಗಿ ಬದುಕುವುದಕ್ಕಿಂತ ಒಂದು ದಿನ ಹುಲಿಯಾಗಿ ಬದುಕುವುದು ಉತ್ತಮ." ~ಅಬ್ದುಲ್ ಮಜೀದ್,ರಾಜ್ಯಾಧ್ಯಕ್ಷರು…
ಕೇಂದ್ರ ಸರ್ಕಾರದ ನಿರಂತರ ಬೆಲೆ ಏರಿಕೆ ನೀತಿಯಿಂದ ಸಾಮಾನ್ಯ ಜನರು, ವಿಶೇಷವಾಗಿ ಬಡವರು ಮತ್ತು ಮಧ್ಯಮ ವರ್ಗದವರು ತೀವ್ರ ಸಂಕಷ್ಟಕ್ಕೆ…
-7 ಜನರು ಮೃತಪಟ್ಟಿದ್ದಾರೆ – ಇವರಲ್ಲಿ 2 ಮಕ್ಕಳು ಸೇರಿದ್ದಾರೆ! ಹಳೆಯದು, ಬಿರುಕು ಬಿದ್ದ ಗೋಡೆ ಕುಸಿದು ಬಡ ಮತ್ತು…
01 MAY 2026 "Respect Labour. Restore Dignity. Ensure Justice. This Labour Day, let every worker…